ಕಾಂಗ್ರೆಸ್‌ಗೆ ಮತ್ತಷ್ಟು ಹತ್ತಿರವಾದ್ರಾ ರೆಬೆಲ್ಸ್ ? ಬನವಾಸಿಯಲ್ಲಿ 'ಕೈ'ಗೆ ಸೇರ್ಪಡೆಯಾದ ವಿವೇಕ್ ಹೆಬ್ಬಾರ್

ಕಾಂಗ್ರೆಸ್‌ಗೆ ಮತ್ತಷ್ಟು ಹತ್ತಿರವಾದ್ರಾ ರೆಬೆಲ್ಸ್ ? ಬನವಾಸಿಯಲ್ಲಿ 'ಕೈ'ಗೆ ಸೇರ್ಪಡೆಯಾದ ವಿವೇಕ್ ಹೆಬ್ಬಾರ್

Published : Apr 12, 2024, 11:21 AM IST

ಬನವಾಸಿ ಕಾಂಗ್ರೆಸ್ ಪ್ರಚಾರದ ವೇಳೆ ಪಕ್ಷ ಸೇರಿದ ವಿವೇಕ್ ಹೆಬ್ಬಾರ್
ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾರಿಂದ ಪಕ್ಷಕ್ಕೆ ಸ್ವಾಗತ
ನೂರಾರು ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್

ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿ(BJP) ಶಾಸಕರ ಮಗ ಕಾಂಗ್ರೆಸ್‌ಗೆ(Congress) ಸೇರ್ಪಡೆಯಾಗಿದ್ದಾರೆ. ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್( Shivaram Hebbar) ಪುತ್ರ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದು, ಈಗಾಗಲೇ ಶಾಸಕ ಶಿವರಾಮ್ ಹೆಬ್ಬಾರ್ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಇತ್ತೀಚೆಗೆ ರಾಜ್ಯಸಭಾ ಚುನಾವಣೆಗೆ ಶಿವರಾಮ್ ಹೆಬ್ಬಾರ್ ಗೈರಾಗಿದ್ದರು. ಅನಾರೋಗ್ಯದ ಕಾರಣ ನೀಡಿ ಚುನಾವಣೆಗೆ ಗೈರಾಗಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೂ ಬರದೇ ತಟಸ್ಥವಾಗಿದ್ದಾರೆ. ಬನವಾಸಿ ಕಾಂಗ್ರೆಸ್ ಪ್ರಚಾರದ ವೇಳೆ ವಿವೇಕ್ ಹೆಬ್ಬಾರ್(Vivek Hebbar) ಪಕ್ಷ ಸೇರಿದ್ದಾರೆ. ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾರಿಂದ ಪಕ್ಷಕ್ಕೆ ಸ್ವಾಗತ ಕೋರಲಾಯಿತು. ನೂರಾರು ಬೆಂಬಲಿಗರ ಜೊತೆ ವಿವೇಕ್ ಹೆಬ್ಬಾರ್‌ ಕಾಂಗ್ರೆಸ್ ಸೇರಿದರು. ಶಾಸಕ ಶಿವರಾಮ್ ಹೆಬ್ಬಾರ್ ನಡೆಗೆ ಬಿಜೆಪಿ ನಾಯಕರು ಕೆಂಡಾಮಂಡಲವಾಗಿದ್ದಾರೆ. ಹೆಬ್ಬಾರ್ ಬಿಜೆಪಿಗೆ ದ್ರೋಹ ಮಾಡಿದ್ದಾರೆ. ಹೆಬ್ಬಾರ್ ಮಗ ಕಾಂಗ್ರೆಸ್ ಸೇರಿರೋದು ಆಶ್ಚರ್ಯ ಸಂಗತಿ ಏನಲ್ಲ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಪರ ಎಸ್.ಟಿ ಸೋಮಶೇಖರ್‌ ಪ್ರಚಾರ ನಡೆಸಿದ್ದರು. ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ STS ಮತ ಹಾಕಿದ್ದರು.

ಇದನ್ನೂ ವೀಕ್ಷಿಸಿ: CT Ravi on Bhojegowda : ನನ್ನ ಹಣೆಬರಹ ಕೆಟ್ಟಿತ್ತು, ಜೆಡಿಎಸ್ ಕೂಡ ನನ್ನ ವಿರೋಧವಾಗಿ ಕೆಲಸ ಮಾಡ್ತು: ಸಿ.ಟಿ. ರವಿ

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more