ಕಾಂಗ್ರೆಸ್‌ಗೆ ಮತ್ತಷ್ಟು ಹತ್ತಿರವಾದ್ರಾ ರೆಬೆಲ್ಸ್ ? ಬನವಾಸಿಯಲ್ಲಿ 'ಕೈ'ಗೆ ಸೇರ್ಪಡೆಯಾದ ವಿವೇಕ್ ಹೆಬ್ಬಾರ್

ಕಾಂಗ್ರೆಸ್‌ಗೆ ಮತ್ತಷ್ಟು ಹತ್ತಿರವಾದ್ರಾ ರೆಬೆಲ್ಸ್ ? ಬನವಾಸಿಯಲ್ಲಿ 'ಕೈ'ಗೆ ಸೇರ್ಪಡೆಯಾದ ವಿವೇಕ್ ಹೆಬ್ಬಾರ್

Published : Apr 12, 2024, 11:21 AM IST

ಬನವಾಸಿ ಕಾಂಗ್ರೆಸ್ ಪ್ರಚಾರದ ವೇಳೆ ಪಕ್ಷ ಸೇರಿದ ವಿವೇಕ್ ಹೆಬ್ಬಾರ್
ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾರಿಂದ ಪಕ್ಷಕ್ಕೆ ಸ್ವಾಗತ
ನೂರಾರು ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್

ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿ(BJP) ಶಾಸಕರ ಮಗ ಕಾಂಗ್ರೆಸ್‌ಗೆ(Congress) ಸೇರ್ಪಡೆಯಾಗಿದ್ದಾರೆ. ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್( Shivaram Hebbar) ಪುತ್ರ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದು, ಈಗಾಗಲೇ ಶಾಸಕ ಶಿವರಾಮ್ ಹೆಬ್ಬಾರ್ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಇತ್ತೀಚೆಗೆ ರಾಜ್ಯಸಭಾ ಚುನಾವಣೆಗೆ ಶಿವರಾಮ್ ಹೆಬ್ಬಾರ್ ಗೈರಾಗಿದ್ದರು. ಅನಾರೋಗ್ಯದ ಕಾರಣ ನೀಡಿ ಚುನಾವಣೆಗೆ ಗೈರಾಗಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೂ ಬರದೇ ತಟಸ್ಥವಾಗಿದ್ದಾರೆ. ಬನವಾಸಿ ಕಾಂಗ್ರೆಸ್ ಪ್ರಚಾರದ ವೇಳೆ ವಿವೇಕ್ ಹೆಬ್ಬಾರ್(Vivek Hebbar) ಪಕ್ಷ ಸೇರಿದ್ದಾರೆ. ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾರಿಂದ ಪಕ್ಷಕ್ಕೆ ಸ್ವಾಗತ ಕೋರಲಾಯಿತು. ನೂರಾರು ಬೆಂಬಲಿಗರ ಜೊತೆ ವಿವೇಕ್ ಹೆಬ್ಬಾರ್‌ ಕಾಂಗ್ರೆಸ್ ಸೇರಿದರು. ಶಾಸಕ ಶಿವರಾಮ್ ಹೆಬ್ಬಾರ್ ನಡೆಗೆ ಬಿಜೆಪಿ ನಾಯಕರು ಕೆಂಡಾಮಂಡಲವಾಗಿದ್ದಾರೆ. ಹೆಬ್ಬಾರ್ ಬಿಜೆಪಿಗೆ ದ್ರೋಹ ಮಾಡಿದ್ದಾರೆ. ಹೆಬ್ಬಾರ್ ಮಗ ಕಾಂಗ್ರೆಸ್ ಸೇರಿರೋದು ಆಶ್ಚರ್ಯ ಸಂಗತಿ ಏನಲ್ಲ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಪರ ಎಸ್.ಟಿ ಸೋಮಶೇಖರ್‌ ಪ್ರಚಾರ ನಡೆಸಿದ್ದರು. ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ STS ಮತ ಹಾಕಿದ್ದರು.

ಇದನ್ನೂ ವೀಕ್ಷಿಸಿ: CT Ravi on Bhojegowda : ನನ್ನ ಹಣೆಬರಹ ಕೆಟ್ಟಿತ್ತು, ಜೆಡಿಎಸ್ ಕೂಡ ನನ್ನ ವಿರೋಧವಾಗಿ ಕೆಲಸ ಮಾಡ್ತು: ಸಿ.ಟಿ. ರವಿ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more