ಕಾಂಗ್ರೆಸ್‌ಗೆ ಮತ್ತಷ್ಟು ಹತ್ತಿರವಾದ್ರಾ ರೆಬೆಲ್ಸ್ ? ಬನವಾಸಿಯಲ್ಲಿ 'ಕೈ'ಗೆ ಸೇರ್ಪಡೆಯಾದ ವಿವೇಕ್ ಹೆಬ್ಬಾರ್

ಕಾಂಗ್ರೆಸ್‌ಗೆ ಮತ್ತಷ್ಟು ಹತ್ತಿರವಾದ್ರಾ ರೆಬೆಲ್ಸ್ ? ಬನವಾಸಿಯಲ್ಲಿ 'ಕೈ'ಗೆ ಸೇರ್ಪಡೆಯಾದ ವಿವೇಕ್ ಹೆಬ್ಬಾರ್

Published : Apr 12, 2024, 11:21 AM IST

ಬನವಾಸಿ ಕಾಂಗ್ರೆಸ್ ಪ್ರಚಾರದ ವೇಳೆ ಪಕ್ಷ ಸೇರಿದ ವಿವೇಕ್ ಹೆಬ್ಬಾರ್
ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾರಿಂದ ಪಕ್ಷಕ್ಕೆ ಸ್ವಾಗತ
ನೂರಾರು ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್

ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿ(BJP) ಶಾಸಕರ ಮಗ ಕಾಂಗ್ರೆಸ್‌ಗೆ(Congress) ಸೇರ್ಪಡೆಯಾಗಿದ್ದಾರೆ. ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್( Shivaram Hebbar) ಪುತ್ರ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದು, ಈಗಾಗಲೇ ಶಾಸಕ ಶಿವರಾಮ್ ಹೆಬ್ಬಾರ್ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಇತ್ತೀಚೆಗೆ ರಾಜ್ಯಸಭಾ ಚುನಾವಣೆಗೆ ಶಿವರಾಮ್ ಹೆಬ್ಬಾರ್ ಗೈರಾಗಿದ್ದರು. ಅನಾರೋಗ್ಯದ ಕಾರಣ ನೀಡಿ ಚುನಾವಣೆಗೆ ಗೈರಾಗಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೂ ಬರದೇ ತಟಸ್ಥವಾಗಿದ್ದಾರೆ. ಬನವಾಸಿ ಕಾಂಗ್ರೆಸ್ ಪ್ರಚಾರದ ವೇಳೆ ವಿವೇಕ್ ಹೆಬ್ಬಾರ್(Vivek Hebbar) ಪಕ್ಷ ಸೇರಿದ್ದಾರೆ. ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾರಿಂದ ಪಕ್ಷಕ್ಕೆ ಸ್ವಾಗತ ಕೋರಲಾಯಿತು. ನೂರಾರು ಬೆಂಬಲಿಗರ ಜೊತೆ ವಿವೇಕ್ ಹೆಬ್ಬಾರ್‌ ಕಾಂಗ್ರೆಸ್ ಸೇರಿದರು. ಶಾಸಕ ಶಿವರಾಮ್ ಹೆಬ್ಬಾರ್ ನಡೆಗೆ ಬಿಜೆಪಿ ನಾಯಕರು ಕೆಂಡಾಮಂಡಲವಾಗಿದ್ದಾರೆ. ಹೆಬ್ಬಾರ್ ಬಿಜೆಪಿಗೆ ದ್ರೋಹ ಮಾಡಿದ್ದಾರೆ. ಹೆಬ್ಬಾರ್ ಮಗ ಕಾಂಗ್ರೆಸ್ ಸೇರಿರೋದು ಆಶ್ಚರ್ಯ ಸಂಗತಿ ಏನಲ್ಲ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಪರ ಎಸ್.ಟಿ ಸೋಮಶೇಖರ್‌ ಪ್ರಚಾರ ನಡೆಸಿದ್ದರು. ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ STS ಮತ ಹಾಕಿದ್ದರು.

ಇದನ್ನೂ ವೀಕ್ಷಿಸಿ: CT Ravi on Bhojegowda : ನನ್ನ ಹಣೆಬರಹ ಕೆಟ್ಟಿತ್ತು, ಜೆಡಿಎಸ್ ಕೂಡ ನನ್ನ ವಿರೋಧವಾಗಿ ಕೆಲಸ ಮಾಡ್ತು: ಸಿ.ಟಿ. ರವಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more