ಮತದಾರರ ಮಾಹಿತಿ ಕದ್ದ ಸರ್ಕಾರ, ಕೇಂದ್ರ ಚುನಾವಣಾ ಆಯೋಗದ ಕದ ಬಡಿದ ಕಾಂಗ್ರೆಸ್‌!

Nov 19, 2022, 5:40 PM IST

ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಕಳುವು ಆರೋಪ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ರಾಮಲಿಂಗಾರೆಡ್ಡಿ, ರಿಜ್ವಾನ್‌ ಹರ್ಷದ್‌ ಸೇರಿ ಹಲವರು ಭಾಗಿಯಾಗಿ ದೂರು ನೀಡಿದ್ದಾರೆ. ಇದರಲ್ಲಿ ಯಾರ ಕೈವಾಡವಿದೆ ಎನ್ನುವ ಮಾಹಿತಿ ಹೊರಗೆ ಬೀಳಬೇಕು. ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕೆಂದು ಕೈ ನಾಯಕರು ಒತ್ತಾಯಿಸಿದ್ದಾರೆ.

ದಾವಣಗೆರೆಯಲ್ಲೂ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್: ಕಾಂಗ್ರೆಸ್ ಆರೋಪ