14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ: 247 ಅಭ್ಯರ್ಥಿಗಳು..2.88 ಕೋಟಿ ಮತದಾರರು

14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ: 247 ಅಭ್ಯರ್ಥಿಗಳು..2.88 ಕೋಟಿ ಮತದಾರರು

Published : Apr 26, 2024, 11:26 AM IST

ಲೋಕಸಂಗ್ರಾಮದ ಮೊದಲಾರ್ಧಕ್ಕೆ ಕನ್ನಡಿಗರು ಸಜ್ಜಾಗಿದ್ದಾರೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಚುನಾವಣಾ ಆಯೋಗ ಮತ್ತು ಪೊಲೀಸ್ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಮೊದಲ ಹಂತದ ಚುನಾವಣೆಯಲ್ಲಿ(Lok Sabha Elections 2024) ಒಟ್ಟು 247 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 2 ಕೋಟಿ 88 ಲಕ್ಷ ಮತದಾರರು(Voters) ತಮ್ಮ ಹಕ್ಕು ಚಲಾಯಿಸಲು ಸನ್ನದ್ಧರಾಗಿದ್ದಾರೆ. 30 ಸಾವಿರದ 602 ಮತಗಟ್ಟೆಗಳು ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಲಿದೆ. ಮೊದಲ ಹಂತದ ಮತದಾನದಲ್ಲಿ ಹಲವು ಹೈವೋಲ್ಟೇಜ್ ಕಣಗಳಿದ್ದು, 14 ಕ್ಷೇತ್ರಗಳಲ್ಲೂ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. 14 ಕ್ಷೇತ್ರಗಳಲ್ಲಿ ಚುನಾವಣಾ ಭದ್ರತೆಗೆಂದು 50 ಸಾವಿರ ಪೊಲೀಸರನ್ನು(Police) ನಿಯೋಜಿಸಲಾಗಿದೆ. ಹೆಚ್ಚಿನ ಭದ್ರತೆಗಾಗಿ 65 ಅರೆಸೇನಾ ಪಡೆ ಬೀಡುಬಿಟ್ಟಿದೆ. 20 ಸಾವಿರ ಮತಗಟ್ಟೆಗಳನ್ನು ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಒಟ್ಟಾರೆ 19 ಸಾವಿರದ 701 ಮತಗಟ್ಟೆಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. 14 ಕ್ಷೇತ್ರಗಳ ಭದ್ರತೆಯೇ ಒಂದೆಡೆಯಾದ್ರೆ.. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಭದ್ರತೆ ಬೇರೆ ಲೆವಲ್‌ನಲ್ಲೇ ಇದೆ. ಸಂಸದ ಡಿ.ಕೆ.ಸುರೇಶ್ ಮತ್ತು ಡಾ.ಸಿ.ಎನ್.ಮಂಜುನಾಥ್ ಕಣದಲ್ಲಿರುವ ಬೆಂಗಳೂರು ಗ್ರಾಮಾಂತರ ಹೈವೋಲ್ಟೇಜ್ ಕಣವಾಗಿದ್ದು, ಪೊಲೀಸರು ಹೆಚ್ಚಿನ ನಿಗಾವಹಿಸಿದ್ದಾರೆ. ಇದೊಂದೇ ಕ್ಷೇತ್ರದಲ್ಲಿ 7 ಅರೆಸೇನಾಪಡೆ ನಿಯೋಜಿಸಿದ್ದು, ಎಲ್ಲ ಮತಗಟ್ಟೆಯಲ್ಲಿ ಸಿಸಿಟಿವಿ ಅಳವಡಿಸಲಾಗಿದೆ.

ಇದನ್ನೂ ವೀಕ್ಷಿಸಿ:  Thalaivar 171 Teaser: ಕಿಕ್ ಕೊಡುತ್ತಿದೆ ಸೂಪರ್ ಸ್ಟಾರ್ 'ಕೂಲಿ' ಖದರ್! ಟೀಸರ್‌ನಲ್ಲೇ ಫ್ಯಾನ್ಸ್ ಜೋಶ್ ಹೆಚ್ಚಿಸಿದ ರಜನಿ..!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more