Sumalatha V/S Chaluvaraya Swamy: ಯಾರು “ನಾಟಿ”.. ಯಾರು “ಹೈಬ್ರೀಡ್”..?  ಏನಿದು ಹೊಸ ಕಥೆ..?

Sumalatha V/S Chaluvaraya Swamy: ಯಾರು “ನಾಟಿ”.. ಯಾರು “ಹೈಬ್ರೀಡ್”..? ಏನಿದು ಹೊಸ ಕಥೆ..?

Published : Feb 22, 2024, 06:27 PM IST

ನಾಟಿ Vs ಹೈಬ್ರೀಡ್ ಯುದ್ಧಕ್ಕೆ ಕಿಚ್ಚು ಹೊತ್ತಿಸಿದ  ಮಂಡ್ಯದ ಪೈಲ್ವಾನ್..!
ನಾಗಮಂಗಲದ ಆ "ನಾಟಿ" ತಳಿಯೇ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ..!
ನಾಟಿ Vs ಹೈಬ್ರೀಡ್ ಮಧ್ಯೆ ನಡೆಯಲಿದ್ಯಂತೆ ಸ್ವಾಭಿಮಾನದ ಯುದ್ಧ..!

ಮಂಡ್ಯ ಅಂದ್ರೆ ಸ್ವಾಭಿಮಾನದ ಕೋಟೆ.. ರಾಜಕಾರಣ ಅಂತ ಬಂದ್ರೆ ಮಂಡ್ಯದಲ್ಲಿ ನಡೆಯೋದು ರಣರಣ ಬೇಟೆ. ಜಿದ್ದು-ಗುದ್ದಿನ, ಜಿದ್ದಾಜಿದ್ದಿನ ರಾಜಕೀಯಕ್ಕೆ ಮಂಡ್ಯ ಹೆಸರುವಾಸಿ. ಮಂಡ್ಯದಲ್ಲಿ(Mandya) ರಾಜಕಾರಣದ ಕಿಚ್ಚು ಹೊತ್ತಿಕೊಳ್ತು ಅಂದ್ರೆ ಅದನ್ನು ಇಡೀ ಇಂಡಿಯಾವೇ ತಿರುಗಿ ನೋಡತ್ತೆ. ಅಂಥಾ ಮಂಡ್ಯದ ನೆಲದಲ್ಲಿ ಶುರುವಾಗಿದೆ ನಾಟಿ Vs ಹೈಬ್ರಿಡ್ ಕದನ. ಲೋಕಸಭಾ ಚುನಾವಣೆಯಲ್ಲಿ(Loksabha election) ಈ ಬಾರಿಯೂ ಮಂಡ್ಯ ಕ್ಷೇತ್ರವೇ ಸೆಂಟರ್ ಆಫ್ ಅಟ್ರಾಕ್ಷನ್ ಆಗೋ ಎಲ್ಲಾ ಸೂಚನೆಗಳು ಸಿಗ್ತಾ ಇವೆ. ಕಳೆದ ಬಾರಿ ಮಂಡ್ಯದಲ್ಲಿ ನಡೆದ ಮಹಾಯುದ್ಧ ಹೇಗಿತ್ತು ಅನ್ನೋದನ್ನು ಇಡೀ ದೇಶವೇ ನೋಡಿದೆ. ಅವತ್ತು ಸ್ವಾಭಿಮಾನದ ಯುದ್ಧ, ಈ ಬಾರಿ ನಾಟಿ vs ಹೈಬ್ರಿಡ್ ಕಾಳಗ. ಮಂಡ್ಯ ರಣಕಣಕ್ಕೆ ಹೀಗೊಂದು ಟ್ವಿಸ್ಟ್ ಕೊಟ್ಟು, ಯುದ್ಧಕ್ಕೂ ಮೊದಲೇ ಕದನ ಕಾವೇರುವಂತೆ ಮಾಡಿದ್ದಾರೆ ಮಂಡ್ಯ ಜಿಲ್ಲಾ ಉಸ್ತುವಾರಿ ಮಂತ್ರಿ, ನಾಗಮಂಗಲ ಶಾಸಕ ಚಲುವರಾಯಸ್ವಾಮಿ(Chaluvarayaswamy). ಈ ಬಾರಿ ಮತ್ತೊಂದು ರಣರೋಚಕ ಫೈಟ್'ಗೆ ಸಾಕ್ಷಿಯಾಗಲಿದೆ ಮಂಡ್ಯ ಲೋಕಸಭಾ ಕ್ಷೇತ್ರ. ಹಾಗ್ ನೋಡಿದ್ರೆ ಪ್ರತೀ ಚುನಾವಣೆಯಲ್ಲೂ ಇಂಡಿಯಾದ ಗಮನ ಸೆಳೆಯೋದು ಮಂಡ್ಯದ ಜಾಯಮಾನ. ಅಂಥಾ ರಣರಣ ಚರಿತ್ರೆಯಲ್ಲಿ ರಣರೋಚಕ ಅಧ್ಯಾಯವೊಂದನ್ನು ಬರೆದವರು ರೆಬೆಲ್ ಲೇಡಿ ಸುಮಲತಾ ಅಂಬರೀಶ್(Sumalata Ambarish). 2019ರಲ್ಲಿ ಸ್ವಾಭಿಮಾನದ ಕಹಳೆಯೂದಿ ದಳಪತಿಗಳನ್ನು ಮಟ್ಟ ಹಾಕಿದ್ದ ಸುಮಲತಾ, ಮತ್ತೊಮ್ಮೆ ಮಂಡ್ಯದಿಂದಲೇ ಸ್ಪರ್ಧೆಗೆ ರೆಡಿಯಾಗ್ತಿದ್ದಾರೆ.

ಇದನ್ನೂ ವೀಕ್ಷಿಸಿ:  Congress: ಯಾರಿಗೆ ಸಿಗುತ್ತೆ ಅರಮನೆ ನಗರಿಯ ಕಾಂಗ್ರೆಸ್ ಟಿಕೆಟ್..? ಯತೀಂದ್ರ ಸ್ಪರ್ಧೆಗೆ ಸಿದ್ದರಾಮಯ್ಯ ಬೆಂಬಲಿಗರ ಒತ್ತಡ !

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more