Assembly election: ನಾವ್‌ ಸುಮ್ನೆ ಇದ್ರೂ ಕರ್ನಾಟಕದಲ್ಲಿ ಗೆಲ್ಲುತ್ತೇವೆ: ಸಿದ್ಧರಾಮಯ್ಯ

Assembly election: ನಾವ್‌ ಸುಮ್ನೆ ಇದ್ರೂ ಕರ್ನಾಟಕದಲ್ಲಿ ಗೆಲ್ಲುತ್ತೇವೆ: ಸಿದ್ಧರಾಮಯ್ಯ

Published : Dec 08, 2022, 03:25 PM IST

ಗುಜರಾತ್ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರಲ್ಲ. ಕರ್ನಾಟಕದಲ್ಲಿ ನಾವು ಸುಮ್ಮನಿದ್ದರೂ ಇಲ್ಲಿ ಗೆಲ್ಲುತ್ತೇವೆ. ಯಾವ ತಂತ್ರಗಾರಿಕೆ ಮಾಡುವ ಅವಶ್ಯಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರು (ಡಿ.8): ಗುಜರಾತ್ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರಲ್ಲ. ಕರ್ನಾಟಕದಲ್ಲಿ ನಾವು ಸುಮ್ಮನಿದ್ದರೂ ಇಲ್ಲಿ ಗೆಲ್ಲುತ್ತೇವೆ. ಯಾವ ತಂತ್ರಗಾರಿಕೆ ಮಾಡುವ ಅವಶ್ಯಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗುಜರಾತ್ ನಲ್ಲಿ ಎಎಪಿಗೆ ಬಿಜೆಪಿ ಫಂಡ್ ಮಾಡಿದೆ. ಎಎಪಿ ಗುಜರಾತ್ ನಲ್ಲಿ ಹಣ ಹೊಳೆ ಹರಿಸಿ ಚುನಾವಣೆ ಮಾಡಿದ್ದರು. ಇದರಿಂದ‌ ಕಾಂಗ್ರೆಸ್‌ಗೆ ಗುಜರಾತ್ ನಲ್ಲಿ ಹಿನ್ನಡೆ ಉಂಟಾಗಿದೆ. ಎಎಪಿ ಕಾಂಗ್ರೆಸ್ ಗಿಂತಲು ಹೆಚ್ಚು ಪ್ರಚಾರ ಮಾಡಿದ್ದರೂ ಅವರಿಗೆ ಅವರಿಗೆ ಕಡಿಮೆ ಸೀಟ್ ಬಂದಿದೆ. ಇದಕ್ಕೆಲ್ಲ ಬಿಜೆಪಿಯವರು ಪ್ಲಾನ್‌ ಮಾಡಿದ್ದರು. ಇದೇ ತಂತ್ರಗಾರಿಕೆ ಕರ್ನಾಟಕದಲ್ಲಿ ನಡೆಯಲ್ಲ. ಆದರೆ, ಇಲ್ಲಿ ಬಿಜೆಪಿ ಮಾತ್ರವಲ್ಲದೆ ಅಧಿಕಾರಕ್ಕಾಗಿ ಜೆ.ಡಿ.ಎಸ್ ಕೂಡ ಪ್ರಚಾರ ಮಾಡುತ್ತಿದೆ. ಇಲ್ಲಿ ಜೆ.ಡಿ.ಎಸ್ ಹೊಸ ಪಕ್ಷ ಅಲ್ಲ ಚುನಾವಣೆ ಎದುರಿಸಿದ್ದಾರೆ. 

ನಮ್ಮ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅತಿ ಭ್ರಷ್ಟ ಸರ್ಕಾರವಾಗಿದೆ. ಕರ್ನಾಟಕದ ಆಡಳಿತ ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ಗುಜರಾತ್ ಅನ್ನು ಕರ್ನಾಟಕಕ್ಕೆ ಹೋಲಿಕೆ ಮಾಡಬೇಡಿ. ಕರ್ನಾಟಕದಲ್ಲಿ ಬಿಜೆಪಿ ನಾಯಕರಿಗೆ ತಾವು ಸೋಲುತ್ತೇವೆ ಎಂಬುದು ಗೊತ್ತಿದೆ. ಇಲ್ಲಿ ಕಾಂಗ್ರೆಸ್ ಸಂಘಟನೆ ಶಕ್ತಿಯುತವಾಗಿದೆ. ಹಿಮಾಚಲ ಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಇತ್ತು. ಇದು ಕಾಂಗ್ರೆಸ್ ಗೆ ಪ್ಲಸ್ ಆಗಿದೆ. ಗುಜರಾತ್ ನಲ್ಲಿ ಎಎಪಿ ಪಕ್ಷ ಬಹಳ ಹಣ ಖರ್ಚು ಮಾಡಿತು. ಬಿಜೆಪಿನೇ ಎಎಪಿ ಪಕ್ಷಕ್ಕೆ ಫಂಡಿಂಗ್‌ ಮಾಡಿದೆ. ಕಾಂಗ್ರೆಸ್ ಮತ ವಿಭಜನೆಗಾಗಿ ಎಎಪಿ ಪಕ್ಷಕ್ಕೆ  ಬಿಜೆಪಿ ಫಂಡ್‌ ಮಾಡಿತ್ತು. ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಬಿಜೆಪಿ ತಂತ್ರಗಾರಿಕೆ ಮಾಡಬಹುದು. ಆದರೆ ಅದು ಇಲ್ಲಿ ನಡೆಯಲ್ಲ ಎಂದರು.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more