Assembly election: ನಾವ್‌ ಸುಮ್ನೆ ಇದ್ರೂ ಕರ್ನಾಟಕದಲ್ಲಿ ಗೆಲ್ಲುತ್ತೇವೆ: ಸಿದ್ಧರಾಮಯ್ಯ

Assembly election: ನಾವ್‌ ಸುಮ್ನೆ ಇದ್ರೂ ಕರ್ನಾಟಕದಲ್ಲಿ ಗೆಲ್ಲುತ್ತೇವೆ: ಸಿದ್ಧರಾಮಯ್ಯ

Published : Dec 08, 2022, 03:25 PM IST

ಗುಜರಾತ್ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರಲ್ಲ. ಕರ್ನಾಟಕದಲ್ಲಿ ನಾವು ಸುಮ್ಮನಿದ್ದರೂ ಇಲ್ಲಿ ಗೆಲ್ಲುತ್ತೇವೆ. ಯಾವ ತಂತ್ರಗಾರಿಕೆ ಮಾಡುವ ಅವಶ್ಯಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರು (ಡಿ.8): ಗುಜರಾತ್ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರಲ್ಲ. ಕರ್ನಾಟಕದಲ್ಲಿ ನಾವು ಸುಮ್ಮನಿದ್ದರೂ ಇಲ್ಲಿ ಗೆಲ್ಲುತ್ತೇವೆ. ಯಾವ ತಂತ್ರಗಾರಿಕೆ ಮಾಡುವ ಅವಶ್ಯಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗುಜರಾತ್ ನಲ್ಲಿ ಎಎಪಿಗೆ ಬಿಜೆಪಿ ಫಂಡ್ ಮಾಡಿದೆ. ಎಎಪಿ ಗುಜರಾತ್ ನಲ್ಲಿ ಹಣ ಹೊಳೆ ಹರಿಸಿ ಚುನಾವಣೆ ಮಾಡಿದ್ದರು. ಇದರಿಂದ‌ ಕಾಂಗ್ರೆಸ್‌ಗೆ ಗುಜರಾತ್ ನಲ್ಲಿ ಹಿನ್ನಡೆ ಉಂಟಾಗಿದೆ. ಎಎಪಿ ಕಾಂಗ್ರೆಸ್ ಗಿಂತಲು ಹೆಚ್ಚು ಪ್ರಚಾರ ಮಾಡಿದ್ದರೂ ಅವರಿಗೆ ಅವರಿಗೆ ಕಡಿಮೆ ಸೀಟ್ ಬಂದಿದೆ. ಇದಕ್ಕೆಲ್ಲ ಬಿಜೆಪಿಯವರು ಪ್ಲಾನ್‌ ಮಾಡಿದ್ದರು. ಇದೇ ತಂತ್ರಗಾರಿಕೆ ಕರ್ನಾಟಕದಲ್ಲಿ ನಡೆಯಲ್ಲ. ಆದರೆ, ಇಲ್ಲಿ ಬಿಜೆಪಿ ಮಾತ್ರವಲ್ಲದೆ ಅಧಿಕಾರಕ್ಕಾಗಿ ಜೆ.ಡಿ.ಎಸ್ ಕೂಡ ಪ್ರಚಾರ ಮಾಡುತ್ತಿದೆ. ಇಲ್ಲಿ ಜೆ.ಡಿ.ಎಸ್ ಹೊಸ ಪಕ್ಷ ಅಲ್ಲ ಚುನಾವಣೆ ಎದುರಿಸಿದ್ದಾರೆ. 

ನಮ್ಮ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅತಿ ಭ್ರಷ್ಟ ಸರ್ಕಾರವಾಗಿದೆ. ಕರ್ನಾಟಕದ ಆಡಳಿತ ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ಗುಜರಾತ್ ಅನ್ನು ಕರ್ನಾಟಕಕ್ಕೆ ಹೋಲಿಕೆ ಮಾಡಬೇಡಿ. ಕರ್ನಾಟಕದಲ್ಲಿ ಬಿಜೆಪಿ ನಾಯಕರಿಗೆ ತಾವು ಸೋಲುತ್ತೇವೆ ಎಂಬುದು ಗೊತ್ತಿದೆ. ಇಲ್ಲಿ ಕಾಂಗ್ರೆಸ್ ಸಂಘಟನೆ ಶಕ್ತಿಯುತವಾಗಿದೆ. ಹಿಮಾಚಲ ಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಇತ್ತು. ಇದು ಕಾಂಗ್ರೆಸ್ ಗೆ ಪ್ಲಸ್ ಆಗಿದೆ. ಗುಜರಾತ್ ನಲ್ಲಿ ಎಎಪಿ ಪಕ್ಷ ಬಹಳ ಹಣ ಖರ್ಚು ಮಾಡಿತು. ಬಿಜೆಪಿನೇ ಎಎಪಿ ಪಕ್ಷಕ್ಕೆ ಫಂಡಿಂಗ್‌ ಮಾಡಿದೆ. ಕಾಂಗ್ರೆಸ್ ಮತ ವಿಭಜನೆಗಾಗಿ ಎಎಪಿ ಪಕ್ಷಕ್ಕೆ  ಬಿಜೆಪಿ ಫಂಡ್‌ ಮಾಡಿತ್ತು. ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಬಿಜೆಪಿ ತಂತ್ರಗಾರಿಕೆ ಮಾಡಬಹುದು. ಆದರೆ ಅದು ಇಲ್ಲಿ ನಡೆಯಲ್ಲ ಎಂದರು.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more