ವಿರೋಧ ಪಕ್ಷವಾಗಿ ನಾವು ಉತ್ತಮ ಕೆಲಸ ಮಾಡುತ್ತೇವೆ : ಶೋಭಾ ಕರಂದ್ಲಾಜೆ

May 13, 2023, 2:06 PM IST

ಬೆಂಗಳೂರು: ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರೇ ಜನಾರ್ಧನ. ಅವರ ಅಪೇಕ್ಷೆಯನ್ನು ನಾವು ಆಶೀರ್ವಾದ ಎಂದು ಸ್ವೀಕಾರ ಮಾಡುತ್ತೇವೆ. ಒಂದು ಒಳ್ಳೆಯ ವಿರೋಧ ಪಕ್ಷವಾಗಿ ರಾಜ್ಯದ ಕೆಲಸ ಮಾಡುವುದರ ಜೊತೆಗೆ ನಾವು ಹೋರಾಟ ಮಾಡುತ್ತೇವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಬಹುತೇಕ ಖಚಿತವಾಗಿದೆ. ಈ ಬಾರಿ ಕಾಂಗ್ರೆಸ್‌ ಸ್ಪಷ್ಟ ಬಹುಮತದತ್ತ ದಾಪುಗಾಲು ಇಡುವುದು ಪಕ್ಕಾ ಆಗಿದೆ. ಈ ಹಿನ್ನೆಲೆ ಸರ್ಕಾರ ರಚಿಸಲು ಕಾಂಗ್ರೆಸ್‌ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದೇ ಹೇಳಬಹುದು.

ಇದನ್ನೂ ವೀಕ್ಷಿಸಿ: ಮೋದಿ ಎಷ್ಟು ಬಾರಿ ಬಂದ್ರೂ, ಕರ್ನಾಟಕದ ಜನತೆ ಮೇಲೆ ಪರಿಣಾಮ ಬೀರುವುದಿಲ್ಲ: ಸಿದ್ದರಾಮಯ್ಯ