ನಿತೀಶ್ ಕುಮಾರ್‌ ನಿಗೂಢ ಹೆಜ್ಜೆ ಹಿಂದಿನ ರಹಸ್ಯಗಳೇನು?

ನಿತೀಶ್ ಕುಮಾರ್‌ ನಿಗೂಢ ಹೆಜ್ಜೆ ಹಿಂದಿನ ರಹಸ್ಯಗಳೇನು?

Published : Aug 11, 2022, 04:36 PM IST

ಪ್ರಧಾನಿ ಗದ್ದುಗೆ ಮೇಲೆ ಕಣ್ಣಿಟ್ಟು ಕಮಲ ಪಾಳಯಕ್ಕೆ ಕೈ ಕೊಟ್ಟರಾ ನಿತೀಶ್ ಕುಮಾರ್?  ಬಿಜೆಪಿ  ಜೆಡಿಯು  ಮುನಿಸಿಗೆ ಬಯಲಾಯ್ತು ಕಾರಣ  ಮೋದಿಗೆ ಎದುರಾಗಿದೆ ಮಹಾಘಟಬಂಧನದ ಪ್ರಥಮ ಪ್ರಹಾರ. ಈಗಿಂದ ಶುರುವಾಗುತ್ತಾ ಮೋದಿ ಅಮಿತ್ ಶಾ ಅವರ ಕೇಸರಿ ವ್ಯೂಹ? 

ಬೆಂಗಳೂರು (ಆ.11): ಬಿಹಾರ ರಾಜಕೀಯದಲ್ಲಿ ದೊಡ್ಡ ಮಟ್ಟದ ಅಲ್ಲೋಲ ಕಲ್ಲೋಲವಾಗಿದೆ. ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡ ಜೆಡಿಯು ನಾಯಕ ಹಾಗೂ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಆರ್‌ಜೆಡಿ ಜೊತೆ ಕೈಜೋಡಿಸಿ 8ನೇ ಬಾರಿಗೆ ಮತ್ತೊಮ್ಮೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ರಾಜಕೀಯದ ಚದುರಂಗ ಅದೆಷ್ಟು ರಂಗುರಂಗಾಗಿರುತ್ತದೆ ಎನ್ನುವುದನ್ನು ಬಿಹಾರ ಬೆಳವಣಿಗೆಗಳನ್ನು ನೋಡಿದ ಬಳಿಕ ಅರ್ಥ ಮಾಡಿಕೊಳ್ಳಬಹುದು.ಮೋದಿ ಹಾಗೂ ನಿತೀಶ್‌ ಕುಮಾರ್‌ ಇಬ್ಬರು ರಾಜಕೀಯದ  ಪರಮ ವೈರಿಗಳಾಗಿಯ ಗುರುತಿಸಿಕೊಂಡಿದ್ದವರು. 2014ರಲ್ಲಿ ಮೋದಿ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ ಬಳಿಕ ನಿತೀಶ್‌ ಕುಮಾರ್‌ ಇದನ್ನು ಆಡಿಕೊಂಡಿದ್ದರು. ಇದರಿಂದ ಸಿಟ್ಟಾಗಿದ್ದ ಅವರು ಎನ್‌ಡಿಎ ಸಖ್ಯವನ್ನು ತೊರೆದಿದ್ದರು.

ಮೋದಿ, ಶಾಗೆ ಶಾಕ್, ಬಿಜೆಪಿ ಸಖ್ಯ ತೊರೆದಿದ್ದೇಕೆ ಬಿಹಾರ ಸಿಎಂ ನಿತೀಶ್ ಕುಮಾರ್..?

ಕೆಲ ವರ್ಷಗಳ ಬಳಿಕ ಬಿಹಾರ ರಾಜಕೀಯದಲ್ಲಿ ಮತ್ತಷ್ಟು ಬದಲಾವಣೆಯಾದವು. ಜೆಡಿಯು ಮತ್ತು ಎನ್‌ಡಿಎ ನಡುವೆ ಮೈತ್ರಿ ಏರ್ಪಟ್ಟ ಬಳಿಕ, ಚುನಾವಣೆಯಲ್ಲಿ ಮೋದಿ ಎದುರು ನಿಲ್ಲೋ ವ್ಯಕ್ತಿ ಯಾರಿದ್ದಾರೆ ಎಂದು ಸ್ವತಃ ನಿತೀಶ್‌ ಕುಮಾರ್‌ ಕೇಳಿದ್ದರು. ಆದರೆ, ಈ ಸ್ನೇಹ ಹೆಚ್ಚು ದಿನ ಉಳಿಯೋದಿಲ್ಲ ಎಂದಿದ್ದು ನಿಜವಾಗಿದೆ. ಎನ್‌ಡಿಎಯನ್ನು ತೊರೆದಿರುವ ಜೆಡಿಯು ಈಗ ಮಹಾಘಟಬಂದನ್‌ ಜೊತೆ ಸೇರಿ ಸರ್ಕಾರ ರಚಿಸಿದ್ದಲ್ಲದೆ, ಪ್ರಧಾನಿ ಮೋದಿ  ವಿರುದ್ಧವೇ ಕಿಡಿಕಾರಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more