ನಿತೀಶ್ ಕುಮಾರ್‌ ನಿಗೂಢ ಹೆಜ್ಜೆ ಹಿಂದಿನ ರಹಸ್ಯಗಳೇನು?

ನಿತೀಶ್ ಕುಮಾರ್‌ ನಿಗೂಢ ಹೆಜ್ಜೆ ಹಿಂದಿನ ರಹಸ್ಯಗಳೇನು?

Published : Aug 11, 2022, 04:36 PM IST

ಪ್ರಧಾನಿ ಗದ್ದುಗೆ ಮೇಲೆ ಕಣ್ಣಿಟ್ಟು ಕಮಲ ಪಾಳಯಕ್ಕೆ ಕೈ ಕೊಟ್ಟರಾ ನಿತೀಶ್ ಕುಮಾರ್?  ಬಿಜೆಪಿ  ಜೆಡಿಯು  ಮುನಿಸಿಗೆ ಬಯಲಾಯ್ತು ಕಾರಣ  ಮೋದಿಗೆ ಎದುರಾಗಿದೆ ಮಹಾಘಟಬಂಧನದ ಪ್ರಥಮ ಪ್ರಹಾರ. ಈಗಿಂದ ಶುರುವಾಗುತ್ತಾ ಮೋದಿ ಅಮಿತ್ ಶಾ ಅವರ ಕೇಸರಿ ವ್ಯೂಹ? 

ಬೆಂಗಳೂರು (ಆ.11): ಬಿಹಾರ ರಾಜಕೀಯದಲ್ಲಿ ದೊಡ್ಡ ಮಟ್ಟದ ಅಲ್ಲೋಲ ಕಲ್ಲೋಲವಾಗಿದೆ. ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡ ಜೆಡಿಯು ನಾಯಕ ಹಾಗೂ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಆರ್‌ಜೆಡಿ ಜೊತೆ ಕೈಜೋಡಿಸಿ 8ನೇ ಬಾರಿಗೆ ಮತ್ತೊಮ್ಮೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ರಾಜಕೀಯದ ಚದುರಂಗ ಅದೆಷ್ಟು ರಂಗುರಂಗಾಗಿರುತ್ತದೆ ಎನ್ನುವುದನ್ನು ಬಿಹಾರ ಬೆಳವಣಿಗೆಗಳನ್ನು ನೋಡಿದ ಬಳಿಕ ಅರ್ಥ ಮಾಡಿಕೊಳ್ಳಬಹುದು.ಮೋದಿ ಹಾಗೂ ನಿತೀಶ್‌ ಕುಮಾರ್‌ ಇಬ್ಬರು ರಾಜಕೀಯದ  ಪರಮ ವೈರಿಗಳಾಗಿಯ ಗುರುತಿಸಿಕೊಂಡಿದ್ದವರು. 2014ರಲ್ಲಿ ಮೋದಿ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ ಬಳಿಕ ನಿತೀಶ್‌ ಕುಮಾರ್‌ ಇದನ್ನು ಆಡಿಕೊಂಡಿದ್ದರು. ಇದರಿಂದ ಸಿಟ್ಟಾಗಿದ್ದ ಅವರು ಎನ್‌ಡಿಎ ಸಖ್ಯವನ್ನು ತೊರೆದಿದ್ದರು.

ಮೋದಿ, ಶಾಗೆ ಶಾಕ್, ಬಿಜೆಪಿ ಸಖ್ಯ ತೊರೆದಿದ್ದೇಕೆ ಬಿಹಾರ ಸಿಎಂ ನಿತೀಶ್ ಕುಮಾರ್..?

ಕೆಲ ವರ್ಷಗಳ ಬಳಿಕ ಬಿಹಾರ ರಾಜಕೀಯದಲ್ಲಿ ಮತ್ತಷ್ಟು ಬದಲಾವಣೆಯಾದವು. ಜೆಡಿಯು ಮತ್ತು ಎನ್‌ಡಿಎ ನಡುವೆ ಮೈತ್ರಿ ಏರ್ಪಟ್ಟ ಬಳಿಕ, ಚುನಾವಣೆಯಲ್ಲಿ ಮೋದಿ ಎದುರು ನಿಲ್ಲೋ ವ್ಯಕ್ತಿ ಯಾರಿದ್ದಾರೆ ಎಂದು ಸ್ವತಃ ನಿತೀಶ್‌ ಕುಮಾರ್‌ ಕೇಳಿದ್ದರು. ಆದರೆ, ಈ ಸ್ನೇಹ ಹೆಚ್ಚು ದಿನ ಉಳಿಯೋದಿಲ್ಲ ಎಂದಿದ್ದು ನಿಜವಾಗಿದೆ. ಎನ್‌ಡಿಎಯನ್ನು ತೊರೆದಿರುವ ಜೆಡಿಯು ಈಗ ಮಹಾಘಟಬಂದನ್‌ ಜೊತೆ ಸೇರಿ ಸರ್ಕಾರ ರಚಿಸಿದ್ದಲ್ಲದೆ, ಪ್ರಧಾನಿ ಮೋದಿ  ವಿರುದ್ಧವೇ ಕಿಡಿಕಾರಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more