ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಆಸ್ತಿ ಸಂಪಾದನೆ ಆರೋಪ ಹೊತ್ತು ನಾಲ್ಕು ವರ್ಷಗಳ ಜೈಲುಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಜೈಲುವಾಸ ಮುಗಿಸಿ ಹೊರ ಬಂದಿದ್ದಾರೆ.
ಬೆಂಗಳೂರು (ಜ. 29): ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಆಸ್ತಿ ಸಂಪಾದನೆ ಆರೋಪ ಹೊತ್ತು ನಾಲ್ಕು ವರ್ಷಗಳ ಜೈಲುಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಜೈಲುವಾಸ ಮುಗಿಸಿ ಹೊರ ಬಂದಿದ್ದಾರೆ.
ಕೆಲವೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ಎದುರಿಸಲಿರುವ ತಮಿಳುನಾಡಿಗೆ ಶಶಿಕಲಾ ಅವರ ಬಿಡುಗಡೆ ರಾಜಕೀಯವಾಗಿ ಹೆಚ್ಚು ಮಹತ್ವ ಪಡೆದುಕೊಂಡಿದೆ.ಶಶಿಕಲಾ ಎಂಟ್ರಿಯಿಂದ ರಾಜಕೀಯ ಬದಲಾವಣೆಯಾಗುವ ಬಗ್ಗೆ ಕುತೂಹಲ ಮೂಡಿದೆ.