4 ಕ್ಷೇತ್ರ... 4 ತಂತ್ರ.. ಶಿಕಾರಿವೀರನ 4 ಟಿಕೆಟ್ ಮಂತ್ರ: ಆ 4 ಲೋಕಸಭಾ ಕ್ಷೇತ್ರಗಳಿಗೆ ಯಡಿಯೂರಪ್ಪ ಆಯ್ಕೆ ಯಾರು?

4 ಕ್ಷೇತ್ರ... 4 ತಂತ್ರ.. ಶಿಕಾರಿವೀರನ 4 ಟಿಕೆಟ್ ಮಂತ್ರ: ಆ 4 ಲೋಕಸಭಾ ಕ್ಷೇತ್ರಗಳಿಗೆ ಯಡಿಯೂರಪ್ಪ ಆಯ್ಕೆ ಯಾರು?

Published : Mar 08, 2024, 02:22 PM IST

ಕರ್ನಾಟಕದ ಕೇಸರಿ ಪಾಳೆಯದಲ್ಲಿ ಟಿಕೆಟ್ ಟೆನ್ಷನ್..! ಯಾರಿಗೆ ಲಕ್, ಯಾರಿಗೆ ಶಾಕ್..? ಹಾಲಿ ಸಂಸದರ ಪೈಕಿ ಯಾರಿಗೆಲ್ಲಾ ಟಿಕೆಟ್ ಮಿಸ್..? ಲೋಕಸಭೆ ಟಿಕೆಟ್ ಟಕ್ಕರ್'ನಲ್ಲಿ ಶಿಕಾರಿವೀರನ ರೋಚಕ ಲೆಕ್ಕಾಚಾರ..! 

ಶಿವಮೊಗ್ಗ (ಮಾ.08): ಕರ್ನಾಟಕದ ಕೇಸರಿ ಪಾಳೆಯದಲ್ಲಿ ಟಿಕೆಟ್ ಟೆನ್ಷನ್..! ಯಾರಿಗೆ ಲಕ್, ಯಾರಿಗೆ ಶಾಕ್..? ಹಾಲಿ ಸಂಸದರ ಪೈಕಿ ಯಾರಿಗೆಲ್ಲಾ ಟಿಕೆಟ್ ಮಿಸ್..? ಲೋಕಸಭೆ ಟಿಕೆಟ್ ಟಕ್ಕರ್'ನಲ್ಲಿ ಶಿಕಾರಿವೀರನ ರೋಚಕ ಲೆಕ್ಕಾಚಾರ..! 4 ಕ್ಷೇತ್ರಗಳಿಗೆ 4 ತಂತ್ರ, ಇದುವೇ ರಾಜಾಹುಲಿಯ ಟಿಕೆಟ್ ಮಂತ್ರ..!   ಆ ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ ಯಡಿಯೂರಪ್ಪನವರ ಕ್ಯಾಂಡಿಡೇಟ್ಸ್ ಯಾರು..? ಹಳೇ ಹುಲಿಗಳ ಪರ ನಿಂತಿದ್ದೇಕೆ ರಾಜಾಹುಲಿ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, 4 ಟಿಕೆಟ್ ಕಥೆ..! 4 ಲೋಕಸಭಾ ಕ್ಷೇತ್ರಗಳಿಗೆ ಯಾರು ಅಭ್ಯರ್ಥಿಯಾಗ್ಬೇಕು ಅನ್ನೋದ್ರ ಬಗ್ಗೆ ಯಡಿಯೂರಪ್ಪನವರು ಸ್ಪಷ್ಟ ನಿಲುವು ತಳೆದಿದ್ದಾರೆ. 

ಅದ್ರಲ್ಲಿ ಎರಡು ಬೆಂಗಳೂರು ಉತ್ತರ ಮತ್ತು ಉತ್ತರ ಕನ್ನಡದಲ್ಲಿ ಬಿಎಸ್ವೈ ಬೆಂಬಲ ಯಾರಿಗೆ ಅನ್ನೋದನ್ನು ನೋಡಿದ್ದಾಯ್ತು. ಉಳಿದೆರಡು ಕ್ಷೇತ್ರಗಳಾದ ಹಾವೇರಿ ಮತ್ತು ಬೆಳಗಾವಿಯಲ್ಲಿ ಶಿಕಾರಿವೀರನ ಶ್ರೀರಕ್ಷೆ ಯಾರಿಗೆ ಅನ್ನೋದನ್ನು ತೋರಿಸ್ತೀವಿ, ಬೆಂಗಳೂರು ಉತ್ತರ, ಉತ್ತರ ಕನ್ನಡ, ಹಾವೇರಿ ಮತ್ತು ಬೆಳಗಾವಿ.. ಈ 4 ಲೋಕಸಭಾ ಕ್ಷೇತ್ರಗಳಿಗೆ ಯಾರು ಅಭ್ಯರ್ಥಿಯಾಗ್ಬೇಕು ಅನ್ನೋದ್ರ ಬಗ್ಗೆ ಯಡಿಯೂರಪ್ಪನವರು ಸ್ಪಷ್ಟ ನಿಲುವು ತಳೆದಿದ್ದಾರೆ. ಬೆಂಗಳೂರು ಉತ್ತರದಲ್ಲಿ ಸದಾನಂದ ಗೌಡ ಮತ್ತು ಉತ್ತರ ಕನ್ನಡದಲ್ಲಿ ಅನಂತ ಕುಮಾರ್ ಹೆಗಡೆಗೆ ಬಿಎಸ್ವೈ ಬೆಂಬಲ.

ಹಾಗಾದ್ರೆ ಹಾವೇರಿ ಮತ್ತು ಬೆಳಗಾವಿಯಲ್ಲಿ ಶಿಕಾರಿವೀರನ ಶ್ರೀರಕ್ಷೆ ಯಾರಿಗೆ..? ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಕಾರಣ ಒಂದಷ್ಟು ಸ್ವಯಂಕೃತ ಅಪರಾಧಗಳು. ಆ ತಪ್ಪುಗಳನ್ನು ಲೋಕಸಭಾ ಚುನಾವಣೆಯಲ್ಲಿ ಸರಿ ಪಡಿಸಲು ಯಡಿಯೂರಪ್ಪ ಮುಂದಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಒಂದಷ್ಟು ಸ್ವಯಂಕೃತ ಅಪರಾಧಗಳೇ ಕಾರಣ. ಲೋಕಸಭಾ ಚುನಾವಣೆಯಲ್ಲಿ ಆ ಪ್ರಮಾದಗಳು ಮರುಕಳಿಸಲೇಬಾರದು ಅಂತ ಎಚ್ಚರ ವಹಿಸಲು ಮುಂದಾಗಿದ್ದಾರೆ ಮಾಜಿ ಸಿಎಂ ಯಡಿಯೂರಪ್ಪ. ಇದನ್ನು ಪಕ್ಷದ ಹೈಕಮಾಂಡ್ ಗಮನಕ್ಕೂ ತಂದಿರುವ ಬಿಎಸ್ವೈ, ಟಿಕೆಟ್ ಹಂಚಿಕೆಯ ಸೂತ್ರವನ್ನು ಹೈಕಮಾಂಡ್ ಮುಂದಿಟ್ಟಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more