4 ಕ್ಷೇತ್ರ... 4 ತಂತ್ರ.. ಶಿಕಾರಿವೀರನ 4 ಟಿಕೆಟ್ ಮಂತ್ರ: ಆ 4 ಲೋಕಸಭಾ ಕ್ಷೇತ್ರಗಳಿಗೆ ಯಡಿಯೂರಪ್ಪ ಆಯ್ಕೆ ಯಾರು?

4 ಕ್ಷೇತ್ರ... 4 ತಂತ್ರ.. ಶಿಕಾರಿವೀರನ 4 ಟಿಕೆಟ್ ಮಂತ್ರ: ಆ 4 ಲೋಕಸಭಾ ಕ್ಷೇತ್ರಗಳಿಗೆ ಯಡಿಯೂರಪ್ಪ ಆಯ್ಕೆ ಯಾರು?

Published : Mar 08, 2024, 02:22 PM IST

ಕರ್ನಾಟಕದ ಕೇಸರಿ ಪಾಳೆಯದಲ್ಲಿ ಟಿಕೆಟ್ ಟೆನ್ಷನ್..! ಯಾರಿಗೆ ಲಕ್, ಯಾರಿಗೆ ಶಾಕ್..? ಹಾಲಿ ಸಂಸದರ ಪೈಕಿ ಯಾರಿಗೆಲ್ಲಾ ಟಿಕೆಟ್ ಮಿಸ್..? ಲೋಕಸಭೆ ಟಿಕೆಟ್ ಟಕ್ಕರ್'ನಲ್ಲಿ ಶಿಕಾರಿವೀರನ ರೋಚಕ ಲೆಕ್ಕಾಚಾರ..! 

ಶಿವಮೊಗ್ಗ (ಮಾ.08): ಕರ್ನಾಟಕದ ಕೇಸರಿ ಪಾಳೆಯದಲ್ಲಿ ಟಿಕೆಟ್ ಟೆನ್ಷನ್..! ಯಾರಿಗೆ ಲಕ್, ಯಾರಿಗೆ ಶಾಕ್..? ಹಾಲಿ ಸಂಸದರ ಪೈಕಿ ಯಾರಿಗೆಲ್ಲಾ ಟಿಕೆಟ್ ಮಿಸ್..? ಲೋಕಸಭೆ ಟಿಕೆಟ್ ಟಕ್ಕರ್'ನಲ್ಲಿ ಶಿಕಾರಿವೀರನ ರೋಚಕ ಲೆಕ್ಕಾಚಾರ..! 4 ಕ್ಷೇತ್ರಗಳಿಗೆ 4 ತಂತ್ರ, ಇದುವೇ ರಾಜಾಹುಲಿಯ ಟಿಕೆಟ್ ಮಂತ್ರ..!   ಆ ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ ಯಡಿಯೂರಪ್ಪನವರ ಕ್ಯಾಂಡಿಡೇಟ್ಸ್ ಯಾರು..? ಹಳೇ ಹುಲಿಗಳ ಪರ ನಿಂತಿದ್ದೇಕೆ ರಾಜಾಹುಲಿ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, 4 ಟಿಕೆಟ್ ಕಥೆ..! 4 ಲೋಕಸಭಾ ಕ್ಷೇತ್ರಗಳಿಗೆ ಯಾರು ಅಭ್ಯರ್ಥಿಯಾಗ್ಬೇಕು ಅನ್ನೋದ್ರ ಬಗ್ಗೆ ಯಡಿಯೂರಪ್ಪನವರು ಸ್ಪಷ್ಟ ನಿಲುವು ತಳೆದಿದ್ದಾರೆ. 

ಅದ್ರಲ್ಲಿ ಎರಡು ಬೆಂಗಳೂರು ಉತ್ತರ ಮತ್ತು ಉತ್ತರ ಕನ್ನಡದಲ್ಲಿ ಬಿಎಸ್ವೈ ಬೆಂಬಲ ಯಾರಿಗೆ ಅನ್ನೋದನ್ನು ನೋಡಿದ್ದಾಯ್ತು. ಉಳಿದೆರಡು ಕ್ಷೇತ್ರಗಳಾದ ಹಾವೇರಿ ಮತ್ತು ಬೆಳಗಾವಿಯಲ್ಲಿ ಶಿಕಾರಿವೀರನ ಶ್ರೀರಕ್ಷೆ ಯಾರಿಗೆ ಅನ್ನೋದನ್ನು ತೋರಿಸ್ತೀವಿ, ಬೆಂಗಳೂರು ಉತ್ತರ, ಉತ್ತರ ಕನ್ನಡ, ಹಾವೇರಿ ಮತ್ತು ಬೆಳಗಾವಿ.. ಈ 4 ಲೋಕಸಭಾ ಕ್ಷೇತ್ರಗಳಿಗೆ ಯಾರು ಅಭ್ಯರ್ಥಿಯಾಗ್ಬೇಕು ಅನ್ನೋದ್ರ ಬಗ್ಗೆ ಯಡಿಯೂರಪ್ಪನವರು ಸ್ಪಷ್ಟ ನಿಲುವು ತಳೆದಿದ್ದಾರೆ. ಬೆಂಗಳೂರು ಉತ್ತರದಲ್ಲಿ ಸದಾನಂದ ಗೌಡ ಮತ್ತು ಉತ್ತರ ಕನ್ನಡದಲ್ಲಿ ಅನಂತ ಕುಮಾರ್ ಹೆಗಡೆಗೆ ಬಿಎಸ್ವೈ ಬೆಂಬಲ.

ಹಾಗಾದ್ರೆ ಹಾವೇರಿ ಮತ್ತು ಬೆಳಗಾವಿಯಲ್ಲಿ ಶಿಕಾರಿವೀರನ ಶ್ರೀರಕ್ಷೆ ಯಾರಿಗೆ..? ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಕಾರಣ ಒಂದಷ್ಟು ಸ್ವಯಂಕೃತ ಅಪರಾಧಗಳು. ಆ ತಪ್ಪುಗಳನ್ನು ಲೋಕಸಭಾ ಚುನಾವಣೆಯಲ್ಲಿ ಸರಿ ಪಡಿಸಲು ಯಡಿಯೂರಪ್ಪ ಮುಂದಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಒಂದಷ್ಟು ಸ್ವಯಂಕೃತ ಅಪರಾಧಗಳೇ ಕಾರಣ. ಲೋಕಸಭಾ ಚುನಾವಣೆಯಲ್ಲಿ ಆ ಪ್ರಮಾದಗಳು ಮರುಕಳಿಸಲೇಬಾರದು ಅಂತ ಎಚ್ಚರ ವಹಿಸಲು ಮುಂದಾಗಿದ್ದಾರೆ ಮಾಜಿ ಸಿಎಂ ಯಡಿಯೂರಪ್ಪ. ಇದನ್ನು ಪಕ್ಷದ ಹೈಕಮಾಂಡ್ ಗಮನಕ್ಕೂ ತಂದಿರುವ ಬಿಎಸ್ವೈ, ಟಿಕೆಟ್ ಹಂಚಿಕೆಯ ಸೂತ್ರವನ್ನು ಹೈಕಮಾಂಡ್ ಮುಂದಿಟ್ಟಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more