ಮೋದಿ, ಶಾ ಯಾರೇ ಬರಲಿ,  ಕೋಲಾರದಲ್ಲಿ ಗೆಲವು ನನ್ನದೇ: ಸಿದ್ದರಾಮಯ್ಯ ಗುಟುರು

ಮೋದಿ, ಶಾ ಯಾರೇ ಬರಲಿ, ಕೋಲಾರದಲ್ಲಿ ಗೆಲವು ನನ್ನದೇ: ಸಿದ್ದರಾಮಯ್ಯ ಗುಟುರು

Published : Jan 21, 2023, 04:43 PM IST

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಯಾರೇ ಬಂದು, ಏನೇ ಮಾಡಿದರೂ‌ ನಾನು ಗೆಲ್ಲುತ್ತೇನೆ. ಬದಾಮಿಯಲ್ಲೂ ನನ್ನನ್ನು ಸೋಲಿಸಲು ಅಮಿತ್ ಶಾ ಬಂದಿದ್ದರು. ಅಶೋಕ್ ಪಟ್ಟಣಶೆಟ್ಟಿ ಬದಲು ಶ್ರೀ ರಾಮುಲು ನಿಲ್ಲಿಸಿದರು. ಆದರೂ ನನ್ನನ್ನು ಸೋಲಿಸಲು ಸಾಧ್ಯವಾಗಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಗುಟುರು ಹಾಕಿದ್ದಾರೆ.

ಮೈಸೂರು (ಜ.21): ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಯಾರೇ ಬಂದು, ಏನೇ ಮಾಡಿದರೂ‌ ನಾನು ಗೆಲ್ಲುತ್ತೇನೆ. ಬದಾಮಿಯಲ್ಲೂ ನನ್ನನ್ನು ಸೋಲಿಸಲು ಅಮಿತ್ ಶಾ ಬಂದಿದ್ದರು. ಅಶೋಕ್ ಪಟ್ಟಣಶೆಟ್ಟಿ ಬದಲು ಶ್ರೀ ರಾಮುಲು ನಿಲ್ಲಿಸಿದರು. ಆದರೂ ನನ್ನನ್ನು ಸೋಲಿಸಲು ಸಾಧ್ಯವಾಗಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಗುಟುರು ಹಾಕಿದ್ದಾರೆ.

ನಾನು ಅಲ್ಲಿ ಪ್ರಚಾರಕ್ಕೆ ಹೋಗಿದ್ದು ಎರಡೇ ದಿನ. ನಾನು ಬದಾಮಿ ಕ್ಷೇತ್ರ ಬದಲಾಯಿಸಿದ್ದು ದೂರ ಅನ್ನೋ ಕಾರಣಕ್ಕೆ. ನಾನು ಅಲ್ಲಿ ನಿಂತರೆ ಸೋಲುತ್ತೀನಿ ಅಂತಾ ಅಲ್ಲ.  ಬದಾಮಿ ಜನ ಹೆಲಿಕ್ಯಾಪ್ಟರ್ ಕೊಡಿಸುತ್ತೇವೆ ಅಂದರು. ನಾನೇ ಬೇಡ ಎಂದು ಕೋಲಾರದಿಂದ ಸ್ಪರ್ಧೆ ಮಾಡಲು ಸಿದ್ಧವಾಗಿದ್ದೇನೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕ್ಷೇತ್ರ ಹತ್ತಿರವಾಗುತ್ತದೆ ಎನ್ನುವ ದೃಷ್ಟಿಯಿಂದ ಕೋಲಾರದಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ. ಮುಂದಿನ ಚುನಾವಣೆಯಲ್ಲಿ ನಾವು 130 ಸ್ಥಾನ ಗೆಲ್ಲುತ್ತೇವೆ. ಅದು 150 ಆದರೂ ಆಗಬಹುದು ಎಂದು ತಿಳಿಸಿದರು. 

ಕೋಲಾರದಲ್ಲಿ ಸಿದ್ದುಗಾಗಿ ಮನೆ ಹುಡುಕಾಟ: ಇತ್ತ ಟಗರು ಬೇಟೆಗೆ ಕೇಸರಿ ಖೆಡ್ಡಾ

ರಾಜ್ಯದ ಜನ ಕಾಂಗ್ರೆಸ್ ಅಧಿಕಾರದಲ್ಲಿ ಆಗಿದ್ದ ಕೆಲಸಗಳ ಬಗ್ಗೆ ತಿಳಿದುಕೊಂಡಿದ್ದಾರೆ. ನಾವು ಹಿಂದೆ ಪ್ರಣಾಳಿಕೆಯಲ್ಲಿ ಹೇಳಿದ್ದ ಶೇಕಡ 99 ರಷ್ಟು ಕೆಲಸ ಮಾಡಿದ್ದೇವೆ. ಈಗಲೂ 200 ಯುನಿಟ್ ಉಚಿತ ವಿದ್ಯುತ್, ಕುಟುಂಬ ಮುಖ್ಯಸ್ಥೆಗೆ ತಿಂಗಳು 2 ಸಾವಿರ ಹಣ ನೀಡುವುದಾಗಿ ಘೊಷಣೆ ಮಾಡಿದ್ದೇವೆ. ಇನ್ನೂ ಹಲವು ಘೋಷಣೆ ಮಾಡಲಿದ್ದೇವೆ. ಇವುಗಳು ಚುನಾವಣೆಯಲ್ಲಿ ನಮ್ಮ ಕೈ ಹಿಡಿಯುತ್ತವೆ. ಯಾರು ಏನೇ ಹೇಳಿದರೂ ಕಾಂಗ್ರೆಸ್ ಅಧಿಕಾರ ಹಿಡಿಯುವುದು ಸತ್ಯ ಎಂದರು.

ಮೋದಿ ಸರ್ಟಿಫಿಕೇಟ್‌ ಅನಗತ್ಯ:
ರಾಜ್ಯ ಸರ್ಕಾರಕ್ಕೆ ಪ್ರಧಾನಿ ಮೋದಿ ಸರ್ಟಿಫಿಕೇಟ್ ಅನಗತ್ಯ. ರಾಜ್ಯದಲ್ಲಿ ಪಿಎಸ್‌ಐ ಹಗರಣ ನಡೆದಿರುವುದು ಸುಳ್ಳಾ ? ಎಡಿಜಿಪಿ ಜೈಲು ಸೇರಿರುವುದು ಸುಳ್ಳಾ ? ಏನು ಆಗಿಲ್ಲ ಅಂದರೆ ಆತ ಇನ್ನು ಏಕೆ ಜೈಲಿನಲ್ಲಿದ್ದಾನೆ ? ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು. ರಾಜ್ಯಕ್ಕೆ ಪದೇ ಪದೇ ಬಿಜೆಪಿ ಕೇಂದ್ರ ನಾಯಕರ ಭೇಟಿ. ಯಾರು ಬಂದರೂ ಏನು ಪ್ರಯೋಜನ ಇಲ್ಲ. ನಡ್ಡಾಗೂ ರಾಜ್ಯಕ್ಕೂ ಏನು ಸಂಬಂಧ. ಅವರು ಏಕೆ ರಾಜ್ಯಕ್ಕೆ ಬರುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದರು. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more