ಮೋದಿ, ಶಾ ಯಾರೇ ಬರಲಿ,  ಕೋಲಾರದಲ್ಲಿ ಗೆಲವು ನನ್ನದೇ: ಸಿದ್ದರಾಮಯ್ಯ ಗುಟುರು

ಮೋದಿ, ಶಾ ಯಾರೇ ಬರಲಿ, ಕೋಲಾರದಲ್ಲಿ ಗೆಲವು ನನ್ನದೇ: ಸಿದ್ದರಾಮಯ್ಯ ಗುಟುರು

Published : Jan 21, 2023, 04:43 PM IST

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಯಾರೇ ಬಂದು, ಏನೇ ಮಾಡಿದರೂ‌ ನಾನು ಗೆಲ್ಲುತ್ತೇನೆ. ಬದಾಮಿಯಲ್ಲೂ ನನ್ನನ್ನು ಸೋಲಿಸಲು ಅಮಿತ್ ಶಾ ಬಂದಿದ್ದರು. ಅಶೋಕ್ ಪಟ್ಟಣಶೆಟ್ಟಿ ಬದಲು ಶ್ರೀ ರಾಮುಲು ನಿಲ್ಲಿಸಿದರು. ಆದರೂ ನನ್ನನ್ನು ಸೋಲಿಸಲು ಸಾಧ್ಯವಾಗಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಗುಟುರು ಹಾಕಿದ್ದಾರೆ.

ಮೈಸೂರು (ಜ.21): ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಯಾರೇ ಬಂದು, ಏನೇ ಮಾಡಿದರೂ‌ ನಾನು ಗೆಲ್ಲುತ್ತೇನೆ. ಬದಾಮಿಯಲ್ಲೂ ನನ್ನನ್ನು ಸೋಲಿಸಲು ಅಮಿತ್ ಶಾ ಬಂದಿದ್ದರು. ಅಶೋಕ್ ಪಟ್ಟಣಶೆಟ್ಟಿ ಬದಲು ಶ್ರೀ ರಾಮುಲು ನಿಲ್ಲಿಸಿದರು. ಆದರೂ ನನ್ನನ್ನು ಸೋಲಿಸಲು ಸಾಧ್ಯವಾಗಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಗುಟುರು ಹಾಕಿದ್ದಾರೆ.

ನಾನು ಅಲ್ಲಿ ಪ್ರಚಾರಕ್ಕೆ ಹೋಗಿದ್ದು ಎರಡೇ ದಿನ. ನಾನು ಬದಾಮಿ ಕ್ಷೇತ್ರ ಬದಲಾಯಿಸಿದ್ದು ದೂರ ಅನ್ನೋ ಕಾರಣಕ್ಕೆ. ನಾನು ಅಲ್ಲಿ ನಿಂತರೆ ಸೋಲುತ್ತೀನಿ ಅಂತಾ ಅಲ್ಲ.  ಬದಾಮಿ ಜನ ಹೆಲಿಕ್ಯಾಪ್ಟರ್ ಕೊಡಿಸುತ್ತೇವೆ ಅಂದರು. ನಾನೇ ಬೇಡ ಎಂದು ಕೋಲಾರದಿಂದ ಸ್ಪರ್ಧೆ ಮಾಡಲು ಸಿದ್ಧವಾಗಿದ್ದೇನೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕ್ಷೇತ್ರ ಹತ್ತಿರವಾಗುತ್ತದೆ ಎನ್ನುವ ದೃಷ್ಟಿಯಿಂದ ಕೋಲಾರದಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ. ಮುಂದಿನ ಚುನಾವಣೆಯಲ್ಲಿ ನಾವು 130 ಸ್ಥಾನ ಗೆಲ್ಲುತ್ತೇವೆ. ಅದು 150 ಆದರೂ ಆಗಬಹುದು ಎಂದು ತಿಳಿಸಿದರು. 

ಕೋಲಾರದಲ್ಲಿ ಸಿದ್ದುಗಾಗಿ ಮನೆ ಹುಡುಕಾಟ: ಇತ್ತ ಟಗರು ಬೇಟೆಗೆ ಕೇಸರಿ ಖೆಡ್ಡಾ

ರಾಜ್ಯದ ಜನ ಕಾಂಗ್ರೆಸ್ ಅಧಿಕಾರದಲ್ಲಿ ಆಗಿದ್ದ ಕೆಲಸಗಳ ಬಗ್ಗೆ ತಿಳಿದುಕೊಂಡಿದ್ದಾರೆ. ನಾವು ಹಿಂದೆ ಪ್ರಣಾಳಿಕೆಯಲ್ಲಿ ಹೇಳಿದ್ದ ಶೇಕಡ 99 ರಷ್ಟು ಕೆಲಸ ಮಾಡಿದ್ದೇವೆ. ಈಗಲೂ 200 ಯುನಿಟ್ ಉಚಿತ ವಿದ್ಯುತ್, ಕುಟುಂಬ ಮುಖ್ಯಸ್ಥೆಗೆ ತಿಂಗಳು 2 ಸಾವಿರ ಹಣ ನೀಡುವುದಾಗಿ ಘೊಷಣೆ ಮಾಡಿದ್ದೇವೆ. ಇನ್ನೂ ಹಲವು ಘೋಷಣೆ ಮಾಡಲಿದ್ದೇವೆ. ಇವುಗಳು ಚುನಾವಣೆಯಲ್ಲಿ ನಮ್ಮ ಕೈ ಹಿಡಿಯುತ್ತವೆ. ಯಾರು ಏನೇ ಹೇಳಿದರೂ ಕಾಂಗ್ರೆಸ್ ಅಧಿಕಾರ ಹಿಡಿಯುವುದು ಸತ್ಯ ಎಂದರು.

ಮೋದಿ ಸರ್ಟಿಫಿಕೇಟ್‌ ಅನಗತ್ಯ:
ರಾಜ್ಯ ಸರ್ಕಾರಕ್ಕೆ ಪ್ರಧಾನಿ ಮೋದಿ ಸರ್ಟಿಫಿಕೇಟ್ ಅನಗತ್ಯ. ರಾಜ್ಯದಲ್ಲಿ ಪಿಎಸ್‌ಐ ಹಗರಣ ನಡೆದಿರುವುದು ಸುಳ್ಳಾ ? ಎಡಿಜಿಪಿ ಜೈಲು ಸೇರಿರುವುದು ಸುಳ್ಳಾ ? ಏನು ಆಗಿಲ್ಲ ಅಂದರೆ ಆತ ಇನ್ನು ಏಕೆ ಜೈಲಿನಲ್ಲಿದ್ದಾನೆ ? ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು. ರಾಜ್ಯಕ್ಕೆ ಪದೇ ಪದೇ ಬಿಜೆಪಿ ಕೇಂದ್ರ ನಾಯಕರ ಭೇಟಿ. ಯಾರು ಬಂದರೂ ಏನು ಪ್ರಯೋಜನ ಇಲ್ಲ. ನಡ್ಡಾಗೂ ರಾಜ್ಯಕ್ಕೂ ಏನು ಸಂಬಂಧ. ಅವರು ಏಕೆ ರಾಜ್ಯಕ್ಕೆ ಬರುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದರು. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more