National Flag Row ರಾಜೀನಾಮೆಗೆ ಪಟ್ಟು ಹಿಡಿದಿರುವ ವಿಚಾರದ ಬಗ್ಗೆ 13 ಸಾರಿ ಹೇಳಿದ್ದೇನೆ, ಈಶ್ವರಪ್ಪ ಟಾಂಗ್

National Flag Row ರಾಜೀನಾಮೆಗೆ ಪಟ್ಟು ಹಿಡಿದಿರುವ ವಿಚಾರದ ಬಗ್ಗೆ 13 ಸಾರಿ ಹೇಳಿದ್ದೇನೆ, ಈಶ್ವರಪ್ಪ ಟಾಂಗ್

Published : Feb 20, 2022, 03:17 PM IST

ಸಚಿವ ಕೆ.ಎಸ್. ಈಶ್ವರಪ್ಪ ಅವರ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ  ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ.

ಶಿವಮೊಗ್ಗ, (ಫೆ.20) ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್​ ಧರಣಿ ನಡೆಸುತ್ತಿದೆ. ವಿಧಾನಸೌಧ ಹಾಗೂ ವಿಧಾನ ಪರಿಷತ್​ನಲ್ಲಿ ಈಶ್ವರಪ್ಪ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಮಧ್ಯೆ, ವಿಧಾನಸೌಧದ ಹೊರಗೂ ಹೋರಾಟಕ್ಕೆ ಕಾಂಗ್ರೆಸ್ ನಾಯಕರು (Congress Peotest) ಕರೆ ನೀಡಿದ್ದಾರೆ. ನಾಳೆ (ಫೆಬ್ರವರಿ 21) ರಾಜ್ಯಾದ್ಯಂತ ಈಶ್ವರಪ್ಪ (KS Eshwarappa) ವಿರುದ್ಧ ಪ್ರತಿಭಟನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಕರೆ ನೀಡಿದ್ದಾರೆ. ನಾಳೆ ತಾಲೂಕು ಕೇಂದ್ರ, ವಿಧಾನಸಭಾ ಕ್ಷೇತ್ರದಲ್ಲಿ ಧರಣಿಗೆ ಕರೆ ನೀಡಲಾಗಿದೆ.

National Flag Row: ಸಚಿವ ಈಶ್ವರಪ್ಪ ವಿರುದ್ಧ ಗುಡುಗಿದ ಡಿಕೆ ಶಿವಕುಮಾರ್, ಜೊತೆಗೊಂದು ಎಚ್ಚರಿಕೆ

ಇನ್ನು ಈ ಬಗ್ಗೆ ಸಚಿವ ಕೆಎಸ್ ಈಶ್ವರಪ್ಪ ಡೋಂಟ್ ಕೇರ್ ಎಂದಿದ್ದಾರೆ. ರಾಷ್ಟ್ರಧ್ವಜ ಕುರಿತ ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ವಿಪಕ್ಷದವರು ಪ್ರತಿಭಟನೆ ಮಾಡುವುದು ಅವರ ಕೆಲಸ ಈ ವಿವಾದದ ಬಗ್ಗೆ ಜನರೇ ತೀರ್ಮಾನ ಮಾಡುತ್ತಾರೆ ಎಂದಿದ್ದಾರೆ. 

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನನ್ನ ಸ್ನೇಹಿತರೇ. ಮತ್ತೆ ಹೇಳಿಕೆ ನೀಡಿ ವಿವಾದ ಬೆಳೆಸುವುದು ನನಗಿಷ್ಟವಿಲ್ಲ. ನಾನೊಂದು ಹೇಳಿಕೆ ಕೊಟ್ಟರೆ ಅವರೊಂದು ಹೇಳುತ್ತಾರೆ. ಹೀಗಾಗಿ ಈ ವಿವಾದದ ಬಗ್ಗೆ ನಾನು ಮಾತನಾಡುವುದಿಲ್ಲ. ರಾಜ್ಯದಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಿದೆ. ಸದನದಲ್ಲಿ ಚರ್ಚಿಸಲು ವಿಪಕ್ಷಗಳು ಅವಕಾಶ ನೀಡಬೇಕು ಎಂದು ಕೆ.ಎಸ್.ಈಶ್ವರಪ್ಪ ಮನವಿ ಮಾಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more