ಬಿಎಸ್‌ವೈ “ಧವಳಗಿರಿ”ವ್ಯೂಹ..ಹೇಗಿದೆ ಹುಲಿ ಹೆಜ್ಜೆ..? ರಾಜ್ಯ ಬಿಜೆಪಿಗೆ ಮತ್ತೆ ಅನಿವಾರ್ಯವಾದ್ರಾ ಯಡಿಯೂರಪ್ಪ..?

ಬಿಎಸ್‌ವೈ “ಧವಳಗಿರಿ”ವ್ಯೂಹ..ಹೇಗಿದೆ ಹುಲಿ ಹೆಜ್ಜೆ..? ರಾಜ್ಯ ಬಿಜೆಪಿಗೆ ಮತ್ತೆ ಅನಿವಾರ್ಯವಾದ್ರಾ ಯಡಿಯೂರಪ್ಪ..?

Published : Aug 20, 2023, 02:27 PM IST

ಅಜ್ಞಾತವಾಸದಿಂದ ಮತ್ತೆ ಎದ್ದು ಬಂದ ಶಿಕಾರಿವೀರ..!
ಯಡಿಯೂರಪ್ಪಗೆ ಜೈ ಅಂದ್ರು  ದಾರಿ ಕಾಣದ ನಾಯಕರು
ರಾಜಾಹುಲಿ ಗುಹೆಯಲ್ಲಿ ಕೇಸರಿ ಕಲಿಗಳ ರಹಸ್ಯ ಸಭೆ..!

ಹುಲಿ ನಾಲ್ಕು ಹೆಜ್ಜೆ ಹಿಂದೆ ಇಟ್ಟಿದೆ ಅಂದ್ರೆ, ಅದು ಭಯದಿಂದಲ್ಲ, ಬೇಟೆಗಾಗಿ ಹುಲಿ ಹೊಂಚು ಹಾಕಿದೆ ಅಂತಾನೇ ಅರ್ಥ. ರಾಜ್ಯ ರಾಜಕಾರಣದಲ್ಲೂ ಬೇಟೆಗೆ ಫೇಮಸ್ ಆಗಿರೋ ಒಂದು ಹುಲಿ ಇದೆ. ಅದು ಬರೀ ಹುಲಿಯಲ್ಲ. ರಾಜಾಹುಲಿ.. ಇಷ್ಟು ದಿನ ಅಜ್ಞಾತವಾಸದಲ್ಲಿದ್ದ ಈ ಹುಲಿ ಮತ್ತೆ ಬೇಟೆಗೆ ಹೊರಟು ನಿಂತಿದೆ. ಕಾಂಗ್ರೆಸ್(Congress) ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗಿ ನಿಂತಿದ್ದಾರೆ. ಹಸ್ತಶಿಕಾರಿಗೆ ಧವಳಗಿರಿ ವ್ಯೂಹ ಹೆಣೆದಿರೋ ಬಿಎಸ್‌ವೈ(BSY) ಮುಂದಿನ ಬುಧವಾರದಿಂದ್ಲೇ ಅಖಾಡಕ್ಕೆ ಇಳಿಯಲಿದ್ದಾರೆ. ಅಷ್ಟಕ್ಕೂ ರಾಜಕೀಯವಾಗಿ ತೆರೆಮರೆಗೆ ಸರಿದಿದ್ದ ಯಡಿಯೂರಪ್ಪನವರು ಮತ್ತೆ ರಣರಂಗಕ್ಕೆ ರೀ ಎಂಟ್ರಿ ಕೊಟ್ಟಿದ್ದಾರೆ. ನಾಯಕನಿಲ್ಲದ ರಾಜ್ಯ ಬಿಜೆಪಿಯನ್ನು(BJp) ಕಾಂಗ್ರೆಸ್ ನಾಯಕರು ಪ್ರತಿದಿನ ಈ ರೀತಿ ಕಿಚಾಯಿಸ್ತಾ ಇದ್ದಾರೆ. ತಾಕತ್ತಿದ್ರೆ ಒಬ್ಬ ನಾಯಕನನ್ನು ತಂದು ಮುಂದೆ ನಿಲ್ಲಿಸಿ ಅಂತ ಸವಾಲ್ ಹಾಕ್ತಿದ್ದಾರೆ. ಹಾಗಂತ ಕಾಂಗ್ರೆಸ್ ಸರ್ಕಾರವನ್ನು ಎದುರಿಸಿ ನಿಲ್ಲಬಲ್ಲ ನಾಯಕರು ಕರ್ನಾಟಕ ಬಿಜೆಪಿ ಪಾಳೆಯದಲ್ಲಿ ಇಲ್ವೇ ಇಲ್ಲ ಅಂತೇನಿಲ್ಲ. ಇದ್ದಾರೆ.. ಆದ್ರೆ ಇರೋ ಯಾವ ನಾಯಕನನ್ನೂ ಅಂಥಾ ಖದರ್ ಇಲ್ಲ, ಮಾಸ್ ಇಮೇಜ್ ಇಲ್ಲ. ಅಂಥದ್ದೇನಾದ್ರೂ ಶಕ್ತಿ ಇದ್ರೆ ಅದು ಹಳೇ ಹುಲಿ ಯಡಿಯೂರಪ್ಪನವರಿಗೆ(Yediyurappa) ಮಾತ್ರ. ಹೀಗಾಗಿ ರಾಜ್ಯ ಬಿಜೆಪಿ ಮತ್ತೆ ಬಿಎಸ್‌ವೈಗೆ ಜೈ ಅಂತಾ ಇದೆ. ಬಿಜೆಪಿ ಶಾಸಕರಂತೂ "ನೀವೇ ನಮಗೆ ದಿಕ್ಕು" ಅಂತ ರಾಜಾಹುಲಿಗೆ ಮೊರೆ ಇಟ್ಟಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಧವಳಗಿರಿ ನಿವಾಸದಲ್ಲಿ ಶುಕ್ರವಾರ ರಾತ್ರಿ ಬಿಜೆಪಿ ನಾಯಕರ ರಹಸ್ಯ ಸಭೆಯೂ ನಡೆದಿದೆ. ಸಭೆಯ ನಂತರ ಮಾತನಾಡಿದ ಬಿಎಸ್ವೈ ಕೈ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಗುತ್ತಿಗೆದಾರರ ಗುದ್ದಾಟಕ್ಕೆ ಟ್ವಿಸ್ಟ್: ಕಾಮಗಾರಿ ಮಾಡದೇ ಸಹಿ ಮಾಡಿದ್ರಾ 19 ಗುತ್ತಿಗೆದಾರರು?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more