ಎಲ್ಲರನ್ನು ಓಲೈಸಿದ್ರೆನೇ ರಾಜಕಾರಣ ಮಾಡೋಕೆ ಆಗೋದು..! ಎಂಟಿಬಿ ಸಮರ್ಥನೆ

Jan 17, 2023, 4:59 PM IST

ಹೊಸಕೋಟೆ  (ಜ.17): ಹೊಸಕೋಟೆಯಲ್ಲಿ ಮುಸ್ಲಿಂ ಮತಗಳನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ನಿನ್ನೆ ರಾತ್ರಿಯಿಡೀ ಖವ್ವಾಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್‌ ಮತ್ತು ಅವರ ಪುತ್ತ ಪುರುಷೋತ್ತಮ್‌ ಮುಸ್ಲಿಂ ಟೊಪ್ಪಿಗೆ ಹಾಕಿಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಖವ್ವಾಲಿ ಹಾಡುವ ಕಲಾವಿದನ ಮೇಲೆ ಅಲ್ಲಿದ್ದ ಸಾರ್ವಜನಿಕರು ನೋಟಿನ ಮಳೆಯನ್ನೇ ಸುರಿಸಿದ್ದರು. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ಬಗ್ಗೆ ಮಾತನಾಡಿದ ಸಚಿವ ಎಂಟಿಬಿ ನಾಗರಾಜ್‌ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಅಲ್ಲಿದ್ದ ಕೆಲವರು 10 ರೂ. ಹಾಗೂ 20 ರೂ. ನೋಟುಗಳನ್ನು ಖವ್ವಾಲಿ ಕಲಾವಿದನ ಮೇಲೆ ಹಾಕಿದ್ದಾರೆ. ಕಾರ್ಯಕ್ರಮ ಆಯೋಜಕರು ಈ ರೀತಿ ಹಣವನ್ನು ಹಾಕಿಲ್ಲ. ಯಾವುದೇ ತಪ್ಪಿಲ್ಲ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.