ಪೊಲೀಸರಿಂದ ತಪ್ಪಿಸಿ ಎಸ್ಕೇಪ್ ಆದ ಯೂತ್‌ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ! ವಿಡಿಯೋ ವೈರಲ್

ಪೊಲೀಸರಿಂದ ತಪ್ಪಿಸಿ ಎಸ್ಕೇಪ್ ಆದ ಯೂತ್‌ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ! ವಿಡಿಯೋ ವೈರಲ್

Published : Jun 13, 2022, 06:48 PM IST

ಪೊಲೀಸರಿಂದ ತಪ್ಪಿಸಿ ಎಸ್ಕೇಪ್ ಆದ ಯೂತ್‌ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿಡಿಯೋ ವೈರಲ್ ಆಗಿದೆ. ಘಟನೆಗೆ ಮುಂಚೆ ಅವರು ನೀಡಿದ್ದ ಹೇಳಿಕೆ ನೋಡಿ...
 

ಬೆಂಗಳೂರು (ಜೂನ್ 13): ದೆಹಲಿಯ ಜಾರಿ ನಿರ್ದೇಶನಾಲಯದ (Enforcement Directorate) ಕಚೇರಿಯ ಹೊರಗೆ ಕಾಂಗ್ರೆಸ್ ಬೆಂಬಲಿಗರು ನಡೆಸಿದ ಗಲಾಟೆಯ ನಡುವೆ, ಕಾಂಗ್ರೆಸ್ ರಾಜಕಾರಣಿ (Congress politician) ಮತ್ತು ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ  (national president of the Youth Congress) ಅಕ್ಷರಶಃ ಪೊಲೀಸ್ ಬಂಧನದಿಂದ ತಪ್ಪಿಸಿಕೊಳ್ಳಲು ಓಡಿಹೋದರು. 

ಬಿವಿ ಶ್ರೀನಿವಾಸ್ ತಮ್ಮ ಎಸ್‌ಯುವಿಯಲ್ಲಿ ಇಡಿ ಕಚೇರಿಗೆ ಬಂದ ನಂತರ ಅವರನ್ನು ಬಂಧಿಸಲು ಒಬ್ಬ ಪೊಲೀಸ್ (Police) ತೆರಳುತ್ತಿದ್ದಂತೆ, ಕಾಂಗ್ರೆಸ್ ನಾಯಕ ಬಂಧನಕ್ಕೊಳಗಾಗುವುದನ್ನು ತಪ್ಪಿಸಲು ಓಡಿಹೋದರು. ಈ ಘಟನೆ ನಡೆಯುವ ಮುನ್ನ ಮಾತನಾಡಿದ್ದ ಬಿವಿ ಶ್ರೀನಿವಾಸ್, ನಾನು ಪೊಲೀಸರಿಗೆ ಹೆದರೋದಿಲ್ಲ, ಯಾವುದೇ ಕಾರಣಕ್ಕೂ ಹೆದರುವ ಪ್ರಶ್ನೆಯೂ ಇಲ್ಲ ಎಂದು ಹೇಳಿದ್ದರು.

ED ವಿಚಾರಣೆ ನಡುವೆ ಅಮ್ಮನ ಭೇಟಿಯಾದ ರಾಹುಲ್ ಗಾಂಧಿ

ಇದರ ಬೆನ್ನಲ್ಲಿಯೇ ಪೊಲೀಸರು ಬಿವಿ ಶ್ರೀನಿವಾಸ್ ಅವರನ್ನು ಬಂಧಿಸಲು ಕಾರಿನ ಬಳಿ ಬಂದಿದ್ದರು. ಆದರೆ, ಪೊಲೀಸ್ ಹೆಗಲ ಮೇಲೆ ಕೈ ಹಾಕುತ್ತಿದ್ದಂತೆ ತಪ್ಪಿಸಿಕೊಂಡು ಪರಾರಿಯಾದರು. ಇದನ್ನು ಬಿಜೆಪಿ ಲೇವಡಿ ಮಾಡಿದ್ದು, ಎಸ್ಕೇಪ್ ಆಗುವುದರಲ್ಲಿ ಕಾಂಗ್ರೆಸ್ ನಾಯಕರು ಎಕ್ಸ್ ಪರ್ಟ್ ಎಂದು ಹೇಳಿದೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more