ಪೊಲೀಸರಿಂದ ತಪ್ಪಿಸಿ ಎಸ್ಕೇಪ್ ಆದ ಯೂತ್‌ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ! ವಿಡಿಯೋ ವೈರಲ್

ಪೊಲೀಸರಿಂದ ತಪ್ಪಿಸಿ ಎಸ್ಕೇಪ್ ಆದ ಯೂತ್‌ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ! ವಿಡಿಯೋ ವೈರಲ್

Published : Jun 13, 2022, 06:48 PM IST

ಪೊಲೀಸರಿಂದ ತಪ್ಪಿಸಿ ಎಸ್ಕೇಪ್ ಆದ ಯೂತ್‌ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿಡಿಯೋ ವೈರಲ್ ಆಗಿದೆ. ಘಟನೆಗೆ ಮುಂಚೆ ಅವರು ನೀಡಿದ್ದ ಹೇಳಿಕೆ ನೋಡಿ...
 

ಬೆಂಗಳೂರು (ಜೂನ್ 13): ದೆಹಲಿಯ ಜಾರಿ ನಿರ್ದೇಶನಾಲಯದ (Enforcement Directorate) ಕಚೇರಿಯ ಹೊರಗೆ ಕಾಂಗ್ರೆಸ್ ಬೆಂಬಲಿಗರು ನಡೆಸಿದ ಗಲಾಟೆಯ ನಡುವೆ, ಕಾಂಗ್ರೆಸ್ ರಾಜಕಾರಣಿ (Congress politician) ಮತ್ತು ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ  (national president of the Youth Congress) ಅಕ್ಷರಶಃ ಪೊಲೀಸ್ ಬಂಧನದಿಂದ ತಪ್ಪಿಸಿಕೊಳ್ಳಲು ಓಡಿಹೋದರು. 

ಬಿವಿ ಶ್ರೀನಿವಾಸ್ ತಮ್ಮ ಎಸ್‌ಯುವಿಯಲ್ಲಿ ಇಡಿ ಕಚೇರಿಗೆ ಬಂದ ನಂತರ ಅವರನ್ನು ಬಂಧಿಸಲು ಒಬ್ಬ ಪೊಲೀಸ್ (Police) ತೆರಳುತ್ತಿದ್ದಂತೆ, ಕಾಂಗ್ರೆಸ್ ನಾಯಕ ಬಂಧನಕ್ಕೊಳಗಾಗುವುದನ್ನು ತಪ್ಪಿಸಲು ಓಡಿಹೋದರು. ಈ ಘಟನೆ ನಡೆಯುವ ಮುನ್ನ ಮಾತನಾಡಿದ್ದ ಬಿವಿ ಶ್ರೀನಿವಾಸ್, ನಾನು ಪೊಲೀಸರಿಗೆ ಹೆದರೋದಿಲ್ಲ, ಯಾವುದೇ ಕಾರಣಕ್ಕೂ ಹೆದರುವ ಪ್ರಶ್ನೆಯೂ ಇಲ್ಲ ಎಂದು ಹೇಳಿದ್ದರು.

ED ವಿಚಾರಣೆ ನಡುವೆ ಅಮ್ಮನ ಭೇಟಿಯಾದ ರಾಹುಲ್ ಗಾಂಧಿ

ಇದರ ಬೆನ್ನಲ್ಲಿಯೇ ಪೊಲೀಸರು ಬಿವಿ ಶ್ರೀನಿವಾಸ್ ಅವರನ್ನು ಬಂಧಿಸಲು ಕಾರಿನ ಬಳಿ ಬಂದಿದ್ದರು. ಆದರೆ, ಪೊಲೀಸ್ ಹೆಗಲ ಮೇಲೆ ಕೈ ಹಾಕುತ್ತಿದ್ದಂತೆ ತಪ್ಪಿಸಿಕೊಂಡು ಪರಾರಿಯಾದರು. ಇದನ್ನು ಬಿಜೆಪಿ ಲೇವಡಿ ಮಾಡಿದ್ದು, ಎಸ್ಕೇಪ್ ಆಗುವುದರಲ್ಲಿ ಕಾಂಗ್ರೆಸ್ ನಾಯಕರು ಎಕ್ಸ್ ಪರ್ಟ್ ಎಂದು ಹೇಳಿದೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more