News Hour: ಕಾಂಗ್ರೆಸ್,ವಿಪಕ್ಷಗಳ ನಡುವೆ YST & VST ಬೆಂಕಿ..!

News Hour: ಕಾಂಗ್ರೆಸ್,ವಿಪಕ್ಷಗಳ ನಡುವೆ YST & VST ಬೆಂಕಿ..!

Published : Jul 03, 2023, 11:02 PM IST

ಕರ್ನಾಟಕ ವಿಧಾನಸಭೆಯ ಅಧಿವೇಶನದ ಮೊದಲ ದಿನವೇ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಡೈನಮೈಟ್‌ ಇಟ್ಟಿದ್ದಾರೆ. ಜಿಎಸ್‌ಟಿ ಬಳಿಕ ರಾಜ್ಯದಲ್ಲಿ ವೈಎಸ್‌ಟಿ ಜಾರಿಯಾಗಿದೆ ಎಂದು ಹೇಳಿದ್ದಕ್ಕೆ ಸಾಲು ಸಾಲು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಜು.3): ಹೊಸ ಸರ್ಕಾರ ಆರಂಭವಾಗಿ ಮೊದಲ ಅಧಿವೇಶನದ ಮೊದಲ ದಿನವೇ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಸಿದ್ಧರಾಮಯ್ಯ ಸರ್ಕಾರಕ್ಕೆ ಡೈನಮೈಟ್‌ ಇಟ್ಟಿದ್ದಾರೆ. ಶಾಸಕರ ಶಿಫಾರಸು ಪತ್ರವನ್ನು ತೆಗೆದುಕೊಂಡು ಬಂದರೂ, ಮುಖ್ಯಮಂತ್ರಿ ಅಕ್ಕಪಕ್ಕದಲ್ಲಿರುವ ವ್ಯಕ್ತಿಗಳು ಈ ಕೆಲಸ ಮಾಡಿಕೊಡೋದಕ್ಕೆ 30 ಲಕ್ಷ ಲಂಚ ಕೇಳುತ್ತಿದ್ದಾರೆ ಎಂದು ಘನ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದಲ್ಲಿ ಜಿಎಸ್‌ಟಿ ಬಳಿಕ ವೈಎಸ್‌ಟಿ ಜಾರಿಯಾಗಿದೆ ಎಂದ ಕುಮಾರಸ್ವಾಮಿಗೆ ಬಿಜೆಪಿ ನಾಯಕರು ಸಾಥ್‌ ನೀಡಿದ್ದಾರೆ. ವೈಎಸ್‌ಟಿ ಮಾತ್ರವಲ್ಲ ವಿಎಸ್‌ಟಿ ತೆರಿಗೆ ಕೂಡ ಚಾಲ್ತಿಯಲ್ಲಿದೆ ಎಂದಿದ್ದಾರೆ. 

ಬಿಜೆಪಿ ಒಡೆದ ಮನೆ, ವಿರೋಧ ಪಕ್ಷದಲ್ಲಿ ಕೂತ ಮೇಲಂತೂ ಮುನ್ನೂರು ಬಾಗಿಲಾಗಿದೆ : ಪ್ರಿಯಾಂಕ ಖರ್ಗೆ

‘ಬಿಜೆಪಿ ಅವಧಿಯಲ್ಲಿ ಸುಖಾಸುಮ್ಮನೆ ಆರೋಪ ಮಾಡಿದ್ರಿ. ಆಗ ಸಾಕ್ಷ್ಯ ಕೇಳಿದಾಗ ಕೊಡೋಕೆ ಆಗುತ್ತಾ ಅಂದಿದ್ದರು. ನಾವು ಆರೋಪಿಸಿದ್ರೆ ಈಗ್ಯಾಕೆ ದಾಖಲೆ ಕೊಡಬೇಕು ನಿಮ್ಗೆ. ಸಣ್ಣ ಸ್ಥಾನಕ್ಕೆ 30 ಲಕ್ಷ ಕೇಳಿರಬೇಕು, ಅಲ್ಲಿ ಎಲ್ಲಾ ಕೋಟಿಗಟ್ಟಲೇ. ಅದು ಯಾವುದೋ ಸಣ್ಣ ಕೆಲಸಕ್ಕೆ 30 ಲಕ್ಷ ರೂ. ಕೇಳಿದ್ದಾರೆ. ಸಿಎಂ ಕಚೇರಿಯಲ್ಲಿ ಕೋಟ್ಯಾಂತರ ರೂಪಾಯಿ ಕೇಳ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more