News Hour: ಕಾಂಗ್ರೆಸ್,ವಿಪಕ್ಷಗಳ ನಡುವೆ YST & VST ಬೆಂಕಿ..!

News Hour: ಕಾಂಗ್ರೆಸ್,ವಿಪಕ್ಷಗಳ ನಡುವೆ YST & VST ಬೆಂಕಿ..!

Published : Jul 03, 2023, 11:02 PM IST

ಕರ್ನಾಟಕ ವಿಧಾನಸಭೆಯ ಅಧಿವೇಶನದ ಮೊದಲ ದಿನವೇ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಡೈನಮೈಟ್‌ ಇಟ್ಟಿದ್ದಾರೆ. ಜಿಎಸ್‌ಟಿ ಬಳಿಕ ರಾಜ್ಯದಲ್ಲಿ ವೈಎಸ್‌ಟಿ ಜಾರಿಯಾಗಿದೆ ಎಂದು ಹೇಳಿದ್ದಕ್ಕೆ ಸಾಲು ಸಾಲು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಜು.3): ಹೊಸ ಸರ್ಕಾರ ಆರಂಭವಾಗಿ ಮೊದಲ ಅಧಿವೇಶನದ ಮೊದಲ ದಿನವೇ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಸಿದ್ಧರಾಮಯ್ಯ ಸರ್ಕಾರಕ್ಕೆ ಡೈನಮೈಟ್‌ ಇಟ್ಟಿದ್ದಾರೆ. ಶಾಸಕರ ಶಿಫಾರಸು ಪತ್ರವನ್ನು ತೆಗೆದುಕೊಂಡು ಬಂದರೂ, ಮುಖ್ಯಮಂತ್ರಿ ಅಕ್ಕಪಕ್ಕದಲ್ಲಿರುವ ವ್ಯಕ್ತಿಗಳು ಈ ಕೆಲಸ ಮಾಡಿಕೊಡೋದಕ್ಕೆ 30 ಲಕ್ಷ ಲಂಚ ಕೇಳುತ್ತಿದ್ದಾರೆ ಎಂದು ಘನ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದಲ್ಲಿ ಜಿಎಸ್‌ಟಿ ಬಳಿಕ ವೈಎಸ್‌ಟಿ ಜಾರಿಯಾಗಿದೆ ಎಂದ ಕುಮಾರಸ್ವಾಮಿಗೆ ಬಿಜೆಪಿ ನಾಯಕರು ಸಾಥ್‌ ನೀಡಿದ್ದಾರೆ. ವೈಎಸ್‌ಟಿ ಮಾತ್ರವಲ್ಲ ವಿಎಸ್‌ಟಿ ತೆರಿಗೆ ಕೂಡ ಚಾಲ್ತಿಯಲ್ಲಿದೆ ಎಂದಿದ್ದಾರೆ. 

ಬಿಜೆಪಿ ಒಡೆದ ಮನೆ, ವಿರೋಧ ಪಕ್ಷದಲ್ಲಿ ಕೂತ ಮೇಲಂತೂ ಮುನ್ನೂರು ಬಾಗಿಲಾಗಿದೆ : ಪ್ರಿಯಾಂಕ ಖರ್ಗೆ

‘ಬಿಜೆಪಿ ಅವಧಿಯಲ್ಲಿ ಸುಖಾಸುಮ್ಮನೆ ಆರೋಪ ಮಾಡಿದ್ರಿ. ಆಗ ಸಾಕ್ಷ್ಯ ಕೇಳಿದಾಗ ಕೊಡೋಕೆ ಆಗುತ್ತಾ ಅಂದಿದ್ದರು. ನಾವು ಆರೋಪಿಸಿದ್ರೆ ಈಗ್ಯಾಕೆ ದಾಖಲೆ ಕೊಡಬೇಕು ನಿಮ್ಗೆ. ಸಣ್ಣ ಸ್ಥಾನಕ್ಕೆ 30 ಲಕ್ಷ ಕೇಳಿರಬೇಕು, ಅಲ್ಲಿ ಎಲ್ಲಾ ಕೋಟಿಗಟ್ಟಲೇ. ಅದು ಯಾವುದೋ ಸಣ್ಣ ಕೆಲಸಕ್ಕೆ 30 ಲಕ್ಷ ರೂ. ಕೇಳಿದ್ದಾರೆ. ಸಿಎಂ ಕಚೇರಿಯಲ್ಲಿ ಕೋಟ್ಯಾಂತರ ರೂಪಾಯಿ ಕೇಳ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more