News Hour: ಕಾಂಗ್ರೆಸ್,ವಿಪಕ್ಷಗಳ ನಡುವೆ YST & VST ಬೆಂಕಿ..!

News Hour: ಕಾಂಗ್ರೆಸ್,ವಿಪಕ್ಷಗಳ ನಡುವೆ YST & VST ಬೆಂಕಿ..!

Published : Jul 03, 2023, 11:02 PM IST

ಕರ್ನಾಟಕ ವಿಧಾನಸಭೆಯ ಅಧಿವೇಶನದ ಮೊದಲ ದಿನವೇ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಡೈನಮೈಟ್‌ ಇಟ್ಟಿದ್ದಾರೆ. ಜಿಎಸ್‌ಟಿ ಬಳಿಕ ರಾಜ್ಯದಲ್ಲಿ ವೈಎಸ್‌ಟಿ ಜಾರಿಯಾಗಿದೆ ಎಂದು ಹೇಳಿದ್ದಕ್ಕೆ ಸಾಲು ಸಾಲು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಜು.3): ಹೊಸ ಸರ್ಕಾರ ಆರಂಭವಾಗಿ ಮೊದಲ ಅಧಿವೇಶನದ ಮೊದಲ ದಿನವೇ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಸಿದ್ಧರಾಮಯ್ಯ ಸರ್ಕಾರಕ್ಕೆ ಡೈನಮೈಟ್‌ ಇಟ್ಟಿದ್ದಾರೆ. ಶಾಸಕರ ಶಿಫಾರಸು ಪತ್ರವನ್ನು ತೆಗೆದುಕೊಂಡು ಬಂದರೂ, ಮುಖ್ಯಮಂತ್ರಿ ಅಕ್ಕಪಕ್ಕದಲ್ಲಿರುವ ವ್ಯಕ್ತಿಗಳು ಈ ಕೆಲಸ ಮಾಡಿಕೊಡೋದಕ್ಕೆ 30 ಲಕ್ಷ ಲಂಚ ಕೇಳುತ್ತಿದ್ದಾರೆ ಎಂದು ಘನ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದಲ್ಲಿ ಜಿಎಸ್‌ಟಿ ಬಳಿಕ ವೈಎಸ್‌ಟಿ ಜಾರಿಯಾಗಿದೆ ಎಂದ ಕುಮಾರಸ್ವಾಮಿಗೆ ಬಿಜೆಪಿ ನಾಯಕರು ಸಾಥ್‌ ನೀಡಿದ್ದಾರೆ. ವೈಎಸ್‌ಟಿ ಮಾತ್ರವಲ್ಲ ವಿಎಸ್‌ಟಿ ತೆರಿಗೆ ಕೂಡ ಚಾಲ್ತಿಯಲ್ಲಿದೆ ಎಂದಿದ್ದಾರೆ. 

ಬಿಜೆಪಿ ಒಡೆದ ಮನೆ, ವಿರೋಧ ಪಕ್ಷದಲ್ಲಿ ಕೂತ ಮೇಲಂತೂ ಮುನ್ನೂರು ಬಾಗಿಲಾಗಿದೆ : ಪ್ರಿಯಾಂಕ ಖರ್ಗೆ

‘ಬಿಜೆಪಿ ಅವಧಿಯಲ್ಲಿ ಸುಖಾಸುಮ್ಮನೆ ಆರೋಪ ಮಾಡಿದ್ರಿ. ಆಗ ಸಾಕ್ಷ್ಯ ಕೇಳಿದಾಗ ಕೊಡೋಕೆ ಆಗುತ್ತಾ ಅಂದಿದ್ದರು. ನಾವು ಆರೋಪಿಸಿದ್ರೆ ಈಗ್ಯಾಕೆ ದಾಖಲೆ ಕೊಡಬೇಕು ನಿಮ್ಗೆ. ಸಣ್ಣ ಸ್ಥಾನಕ್ಕೆ 30 ಲಕ್ಷ ಕೇಳಿರಬೇಕು, ಅಲ್ಲಿ ಎಲ್ಲಾ ಕೋಟಿಗಟ್ಟಲೇ. ಅದು ಯಾವುದೋ ಸಣ್ಣ ಕೆಲಸಕ್ಕೆ 30 ಲಕ್ಷ ರೂ. ಕೇಳಿದ್ದಾರೆ. ಸಿಎಂ ಕಚೇರಿಯಲ್ಲಿ ಕೋಟ್ಯಾಂತರ ರೂಪಾಯಿ ಕೇಳ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more