Jan 19, 2020, 1:25 PM IST
ಬೆಂಗಳೂರು (ಜ. 19): 2018 ರ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದ ಕಲಾವಿದರಿಗೆ ಫಿಲ್ಮ್ ಚೇಂಬರ್ ಕಡೆಯಿಂದ ಸನ್ಮಾನ ಸಮಾರಂಭ ಕಾರ್ಯಕ್ರಮ ನೆರವೇರಿದೆ. ಕಾರ್ಯಕ್ರಮದಲ್ಲಿ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈ ರಾಜ್ ಹಾಗೂ ಪದಾಧಿಕಾರಿಗಳು, ರಾಜ್ಯ ಪ್ರಶಸ್ತಿ ಪಡೆದ ಕಲಾವಿದರಾದ ಶ್ರೀನಿವಾಸ ಮೂರ್ತಿ, ಮೇಘನಾ ರಾಜ್, ವೀಣಾ ಸುಂದರ್, ರಾಘವೇಂದ್ರ ರಾಜ್ ಕುಮಾರ್, ಹಾಗೂ ಇತರರು ಕಲಾವಿದರಿಗೆ ಸನ್ಮಾನ ಮಾಡಿದ್ದಾರೆ.
ಡಿ-ಪಿಕ್ಚರ್ಸ್, ರಿಷಬ್ ಶೆಟ್ಟಿ ಮುಡಿಗೆ ರಾಜ್ಯ ಚಲನಚಿತ್ರ ಪ್ರಶಸ್ತಿಯ ಗರಿ!
ಡಾ.ರಾಜ್ಕುಮಾರ್ ಪ್ರಶಸ್ತಿಯನ್ನು ಜೆ.ಕೆ.ಶ್ರೀನಿವಾಸ ಮೂರ್ತಿ ಪಡೆದುಕೊಂಡಿದ್ದಾರೆ. ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಪಿ.ಶೇಷಾದ್ರಿ ಪಡೆದುಕೊಂಡಿದ್ದಾರೆ. 'ಅಮ್ಮನ ಮನೆ' ಚಿತ್ರಕ್ಕೆ ರಾಘವೇಂದ್ರ ರಾಜ್ಕುಮಾರ್ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ ಹಾಗೂ 'ಇರುವುದೆಲ್ಲವ ಬಿಟ್ಟು' ಚಿತ್ರಕ್ಕೆ ಮೇಘನಾ ರಾಜ್ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇನ್ನು ಅತ್ಯುತ್ತಮ ಪೋಷಕ ನಟನಾಗಿ ಬಾಲಾಜಿ ಮನೋಹರ್ ಹಾಗೂ ಅತ್ಯುತ್ತಮ ಪೋಷಕ ನಟಿಯಾಗಿ ವೀಣಾ ಸುಂದರ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.