Puneeth Rajkumar ಅಗಲಿ ಇಂದಿಗೆ ಮೂರು ತಿಂಗಳು: ಕುಟುಂಬದಿಂದ ಸಮಾಧಿಗೆ ಪೂಜೆ

Puneeth Rajkumar ಅಗಲಿ ಇಂದಿಗೆ ಮೂರು ತಿಂಗಳು: ಕುಟುಂಬದಿಂದ ಸಮಾಧಿಗೆ ಪೂಜೆ

Suvarna News   | Asianet News
Published : Jan 29, 2022, 03:58 PM ISTUpdated : Jan 29, 2022, 04:06 PM IST

ಸ್ಯಾಂಡಲ್‌ವುಡ್‌ನ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ ನಿಧನರಾಗಿ ಇಂದಿಗೆ ಮೂರು ತಿಂಗಳುಗಳೇ ಕಳೆದು ಹೋಗಿದೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. 

ಸ್ಯಾಂಡಲ್‌ವುಡ್‌ನ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ (Puneeth Rajkumar)​ ನಿಧನರಾಗಿ ಇಂದಿಗೆ ಮೂರು ತಿಂಗಳುಗಳೇ ಕಳೆದು ಹೋಗಿದೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕಂಠೀರವ ಸ್ಟುಡಿಯೋ (Kanteerava Studio) ಆವರಣದಲ್ಲಿ ಇರುವ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಸಮಾಧಿ ಬಳಿ ಅಶ್ವಿನಿ ಪುನೀತ್​ ರಾಜ್​ಕುಮಾರ್,​ ಪುತ್ರಿ ಧೃತಿ, ರಾಘವೇಂದ್ರ ರಾಜ್ ಕುಮಾರ್ ಮತ್ತು ಅವರ ಪತ್ನಿ ಹಾಗೂ ವಿಜಯ್ ರಾಘವೇಂದ್ರ, ಧೀರೇನ್​ ರಾಮ್ ಕುಮಾರ್, ಪುನೀತ್ ಸಹೋದರಿ ಲಕ್ಷ್ಮೀ ಹಾಗೂ ಎಸ್.ಎ.ಗೋವಿಂದ್​ ರಾಜು ಸಮಾಧಿಗೆ ಪೂಜೆ ಪೂಜೆ ಮಾಡಿ ಅಪ್ಪುಗೆ ಎಡೆ ಇಟ್ಟಿದ್ದಾರೆ. 

James ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್‌ ಪಾತ್ರಕ್ಕೆ ಯಾರೂ ಧ್ವನಿ ನೀಡುತ್ತಿಲ್ಲ!

ಬಳಿಕ ಅಪ್ಪು ನೆನಪಿಗಾಗಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಬಾದಾಮಿ, ಸೀಬೆ, ಮಾವು, ತೇಗ, ಹಲಸಿನ ಗಿಡ ಸೇರಿದಂತೆ 500 ಗಿಡಗಳನ್ನು ಅಭಿಮಾನಿಗಳಿಗೆ ದಾನವಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ರಾಘವೇಂದ್ರ ರಾಜ್‌ಕುಮಾರ್, ಅಪ್ಪು ಅಭಿಮಾನಿಗಳು ಭಕ್ತರಾಗುತ್ತಿದ್ದಾರೆ. ದಿನದಿಂದ ದಿನಕ್ಕೆ ಪುಣ್ಯಭೂಮಿಗೆ ಬರುತ್ತಿರುವ ಅಭಿಮಾನಿಗಳ ಸಂಖ್ಯೆ ಜಾಸ್ತಿ ಆಗುತ್ತಿದೆ. ಅಭಿಮಾನಿಗಳಿಗೆ ಗಿಡ ಕೊಟ್ಟು ಅವರಿಂದಲೇ ಆ ಸಸಿಗಳನ್ನು ನೆಡಲು ಯೋಚಿಸಿದ್ದೇವೆ. ಅಪ್ಪು ನಿಧನರಾಗುವ ಮುನ್ನ ಕಾಡಿನಲ್ಲಿ ಕೆಲಸ ಮಾಡಿದ್ದರು. ಕಾಡು, ಹಸಿರು ಅಂದರೆ ಅಪ್ಪುಗೆ ಬಹಳ ಇಷ್ಟ. ಹಾಗಾಗಿ ಗಿಡ ನೀಡುವ ಕೆಲಸ ಶುರು ಮಾಡಿದ್ದಿವಿ ಎಂದು ಹೇಳಿದರು. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more