ಓಡ್ರೋ.. ಓಡ್ರೋ.. ಓಡ್ರೋ.. ಇದು ಸರ್ಜಾ ಅಡ್ಡಾ: ನೆರೆ ಹೊರೆಯವರಿಗೆ ಹೊರೆಯಾದ ಅಮುಕು ಡುಮುಕು ಫ್ಯಾನ್ಸ್!

ಓಡ್ರೋ.. ಓಡ್ರೋ.. ಓಡ್ರೋ.. ಇದು ಸರ್ಜಾ ಅಡ್ಡಾ: ನೆರೆ ಹೊರೆಯವರಿಗೆ ಹೊರೆಯಾದ ಅಮುಕು ಡುಮುಕು ಫ್ಯಾನ್ಸ್!

Published : Nov 01, 2025, 01:54 PM ISTUpdated : Nov 03, 2025, 11:33 AM IST

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ಅದೆಂಥಾ ಕಟ್ಟಾ ಅಭಿಮಾನಿಗಳ ಬಳಗ ಇದೆ ಅನ್ನೋದು ಗೊತ್ತೇ ಇದೆ. ಆದ್ರೆ ಅದೇ ಅಭಿಮಾನಿಗಳ ದೆಸೆಯಿಂದ ಈಗ ಧ್ರುವ ಸರ್ಜಾ ಮೇಲೆ ಪೊಲೀಸ್ ದೂರು ದಾಖಲಾಗಿದೆ. ಅಷ್ಟಕ್ಕೂ ಏನಿದು ಅಮುಕು ಡುಮುಕು ಕಿರಿಕ್ಕು.

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ಅದೆಂಥಾ ಕಟ್ಟಾ ಅಭಿಮಾನಿಗಳ ಬಳಗ ಇದೆ ಅನ್ನೋದು ಗೊತ್ತೇ ಇದೆ. ಆದ್ರೆ ಅದೇ ಅಭಿಮಾನಿಗಳ ದೆಸೆಯಿಂದ ಈಗ ಧ್ರುವ ಸರ್ಜಾ ಮೇಲೆ ಪೊಲೀಸ್ ದೂರು ದಾಖಲಾಗಿದೆ. ಅಷ್ಟಕ್ಕೂ ಏನಿದು ಅಮುಕು ಡುಮುಕು ಕಿರಿಕ್ಕು ಈ ಸ್ಟೋರಿ ನೋಡಿ. ಯೆಸ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮೇಲೆ ಬೆಂಗಳೂರಿನ ಬನಶಂಕರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಧ್ರುವ ಅಷ್ಟೇ ಅಲ್ಲದೇ ಅವರ ಕಾರ್ ಡ್ರೈವರ್, ಮ್ಯಾನೇಜರ್ ಮತ್ತು ಧ್ರುವ ಅಭಿಮಾನಿಗಳ ಮೇಲೆ ಕೂಡ ದೂರು ನೀಡಲಾಗಿದೆ. ಈ ದೂರನ್ನಾಧರಿಸಿ ಎಫ್.ಐ.ಆರ್ ಮಾಡುವಂತೆ ಒತ್ತಾಯಿಸಲಾಗಿದೆ. ಹೌದು ಧ್ರುವ ಮೇಲೆ ದೂರು ದಾಖಲು ಮಾಡಿದವರು ಬೇರ್ಯಾರೂ ಅಲ್ಲ.

ಖುದ್ದು ಸರ್ಜಾ ವಾಸವಿರುವ ಮನೆಯ ಅಕ್ಕಪಕ್ಕದವರು. ಅಷ್ಟಕ್ಕೂ ಇವರು ಸಲ್ಲಿಸಿರೋ ದೂರಿನಲ್ಲಿ ಧ್ರುವನ ಅಮುಕು ಡುಮುಕು ಅಭಿಮಾನಿಗಳಿಂದ ತಮಗೆ ಭಯಂಕರ ಹಿಂಸೆಯಾಗ್ತಾ ಇದೆ ಅಂತ ದೂರಿದ್ದಾರೆ. ಧ್ರುವ ಸರ್ಜಾ ಮನೆಯಲ್ಲಿದ್ರೆ ಸಾಕು ರಾಶಿ ರಾಶಿ ಅಭಿಮಾನಿಗಳು ಅವರ ಮನೆ ಮುಂದೆ ಸೇರ್ತಾರೆ. ಅಕ್ಕಪಕ್ಕದ ಮನೆಯ ಮುಂದೆ ವಾಹನಗಳನ್ನ ಪಾರ್ಕ್ ಮಾಡ್ತಾರೆ. ಕೆಲವರು ಅಲ್ಲೇ ನಿಂತು ಸಿಗರೇಟ್ ಹೊಗೆ ಉಗಳ್ತಾರೆ. ಮತ್ತೆ ಕೆಲವರು ಗುಟ್ಕಾ ತಿಂದು ಪಕ್ಕದ ಮನೆ ಗೋಡೆಗೆ ಉಗುಳ್ತಾರೆ. ಇದರಿಂದ ತಮ್ಮ ಮನೆಯಲ್ಲಿ ಇರಲಾಗ್ತಾ ಇಲ್ಲ ಅಂತಿದ್ದಾರೆ ಧ್ರುವ ನೇಬರ್ಸ್.

ಹೌದು ಧ್ರುವ ಮನೆಯೆದರು ಸೇರುವ ಫ್ಯಾನ್ಸ್ ಹಾವಳಿ ಹೇಗಿರುತ್ತೆ ಅನ್ನೋದ್ರ ಸ್ಯಾಂಪಲ್ ನೀವು ಸೋಷಿಯಲ್ ಮಿಡಿಯಾದಲ್ಲಿ ನೋಡಿರಬಹುದು. ಅದ್ಯಾರೋ ಒಬ್ಬ ಅಮುಡು ಡುಮುಕು.. ಡಮಾಲ್ ಡಮಿಲ್ ಅಂತ ನರ್ತಿಸಿದ್ರೆ, ಇನ್ನೊಬ್ಬ ಓಡ್ರೋ ಓಡ್ರೋ ಇದು ಸರ್ಜಾ ಅಡ್ಡಾ ಅಂತ ಏಕಸ್ವರದಲ್ಲಿ ಹಾಡು ಹಾಡ್ತಾನೆ. ತಮ್ಮ ಅಭಿಮಾನಿಗಳನ್ನ ಧ್ರುವ ಏನೋ ಸಹಿಸಿಕೊಳ್ತಾರೆ. ಆದ್ರೆ ಪಾಪ ಅಕ್ಕದ ಪಕ್ಕದ ಮನೆಯವರು ಹೇಗೆ ತಾನೇ ಈ ಅತಿರೇಕವನ್ನ ಸಹಿಸೋಕೆ ಸಾಧ್ಯ. ಪಾಪ ಅವರು ಸರ್ಜಾ ಅಡ್ಡಾದಿಂದ ಓಡಿ ಹೋಗೋದೊಂದೆ ದಾರಿ ಅನ್ನೋ ಸ್ಥಿತಿ ತಲುಪಿದ್ದಾರೆ. ಈ ಹಿಂದೆ ಅಭಿಮಾನಿಗಳನ್ನ ಹೀಗೆ ಮನೆ ಬಳಿ ಸೇರಿಸಬೇಡಿ ಅಂತ ಸರ್ಜಾ ಮ್ಯಾನೇಜರ್ ಬಳಿ , ಅಕ್ಕ ಪಕ್ಕದ ಮನೆಯವರು ಮನವಿ ಮಾಡಿಕೊಂಡಿದ್ದಾರೆ.

ಆದ್ರೆ ಈ ಅಮುಡು ಡುಮುಕು ಫ್ಯಾನ್ಸ್ ಹಾವಳಿ ಹೆಚ್ಚಾಗ್ತಾನೇ ಇದೆ. ಸೋ ಸದ್ಯ ಮನೋಜ್ ಎಂಬುವವರು ಧ್ರುವ ಮತ್ತವರ ಮ್ಯಾನೇಜರ್ , ಡ್ರೈವರ್ ಮೇಲೆ ಕಂಪ್ಲೇಂಟ್ ಮಾಡಿದ್ದಾರೆ. ಸಾಮಾನ್ಯವಾಗಿ ಜನಪ್ರಿಯ ನಟರ ಅಕ್ಕ ಪಕ್ಕದ ಮನೆಯವರಿಗೆ ಇಂಥಾ ಕಾಟ ಸಹಜ. ಆದ್ರೆ ಆ ನಟರು ನೆರೆಹೊರೆಯವರಿಗೆ ತಮ್ಮ ಅಭಿಮಾನಿಗಳು ಹೊರೆಯಾಗದಂತೆ ಎಚ್ಚರ ವಹಿಸಿಬೇಕು. ಅಭಿಮಾನಿಗಳ ಭೇಟಿ ಸೂಕ್ತ ಜಾಗ, ಸಮಯದ  ವ್ಯವಸ್ಥೆ ಮಾಡಬೇಕು. ಅದು ಬಿಟ್ಟು ಹೀಗೆ ಮನೆಮುಂದೆ ಓಡ್ರೋ ಓಡ್ರೋ ಇದು ಸರ್ಜಾ ಅಂತ ಹಾವಳಿ ಇಟ್ರೆ, ಪಾಪ ಅಕ್ಕಪಕ್ಕದವರು ಅದೆಲ್ಲಿಗೆ ತಾನೇ ಓಡಬೇಕು ನೀವೇ ಹೇಳಿ..!

02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more