ನಾವು ವಿದ್ಯೆ ಇಲ್ಲದೆ ಹೀರೋ ಆದ್ವಿ, ನೀವು ವಿದ್ಯಾವಂತ ಹೀರೋಗಳಾಗಿ; ದುನಿಯಾ ವಿಜಯ್

ನಾವು ವಿದ್ಯೆ ಇಲ್ಲದೆ ಹೀರೋ ಆದ್ವಿ, ನೀವು ವಿದ್ಯಾವಂತ ಹೀರೋಗಳಾಗಿ; ದುನಿಯಾ ವಿಜಯ್

Published : Sep 07, 2022, 01:01 PM IST

ನಟ ದುನಿಯ ವಿಜಯ್ ಮಾತನಾಡಿ ಟ್ರೈಲರ್ ರಿಲೀಸ್ ಈವೆಂಟ್ ತುಂಬ ಭಾವನಾತ್ಮಕವಾಗಿತ್ತು ಎಂದಿದ್ದಾರೆ. ನಮಗೆ ಯಾರು ಗುರು ಇರ್ಲಿಲ್ಲ, ಗುರು ಅನ್ನೋದೆ ಗೊತ್ತಿಲ್ಲ. ಆದರೆ ನಿಮಗೆಲ್ಲ ಗುರು ಸಿಕ್ಕಿದ್ದಾರೆ, ನಿಮಗೆ ಸೋಲಿಲ್ಲ ಎಂದು ಹೇಳಿದರು. 
 

ಸ್ಯಾಂಡಲ್‌ವುಡ್‌ನಲ್ಲಿ ಈಗ ಗುರುಶಿಷ್ಯರದ್ದೆ ಹವಾ. ಯಾರದು ಅದು ಅಂತೀರಾ ಗುರು ಶಿಷ್ಯರು ಸಿನಿಮಾದ ಬಗ್ಗೆ ಹೇಳುತ್ತಿರುವುದು. ಹೌದು, ಈ ಸಿನಿಮಾ ಸದ್ಯ ರಿಲೀಸ್ ಗೆ ರೆಡಿಯಾಗಿದೆ. ಈ ಬಾರಿ ಗುರು ಶಿಷ್ಯರಾಗಿ ತೆರೆಮೇಲೆ ಬರ್ತಿದ್ದಾರೆ ಕಾಮಿಡಿ ಅಧ್ಯಕ್ಷ ಶರಣ್. ಸದ್ಯ ಗುರು ಶಿಷ್ಯರು ಸಿನಿಮಾದ ಟ್ರೈಲರ್ ರಿಲೀಸ್ ಮಾಡಲಾಗಿದೆ. ಶಿಕ್ಷಕರ ದಿನಾಚರಣೆ ಅಂಗವಾಗಿ ಬಿಡಗಡೆಯಾದ ಗುರುಶಿಷ್ಯರು ಟ್ರೈಲರ್‌ಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿಶೇಷ ಎಂದರೆ ಈ ಸಿನಿಮಾದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ಕಿಡ್ಸ್ ಕೂಡ ನಟಿಸಿದ್ದಾರೆ. ಶರಣ್ ಜೊತೆ ಪುತ್ರ, ನೆನಪಿರಲಿ ಪ್ರೇಮ್ ಪುತ್ರ, ರವಿಶಂಕರ್ ಪುತ್ರ ಸೇರಿದಂತೆ ಅನೇಕ ಸ್ಟಾರ್ ಕಿಡ್ಸ್ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಖೋ ಖೋ ಆಟದ ಬಗ್ಗೆ ಇರುವ ಈ ಸಿನಿಮಾ ಈಗಾಗಲೇ ಟ್ರೈಲರ್ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಅಂದಹಾಗೆ ಈ ಸಿನಿಮಾದ ಬಗ್ಗೆ ಮಾತನಾಡಿದ ನಟ ದುನಿಯ ವಿಜಯ್ ಟ್ರೈಲರ್ ರಿಲೀಸ್ ಈವೆಂಟ್ ತುಂಬ ಭಾವನಾತ್ಮಕವಾಗಿತ್ತು ಎಂದಿದ್ದಾರೆ. ನಾವು ಅನುಭವಿಸಿದ ಕಷ್ಟ ಮಕ್ಕಳಿಗೆ ಬರುವುದು ಬೇಡ ಎಂದೇ ದೇವರು ಈ ಸಿನಿಮಾ ನೀಡಿದ್ದಾರೆ. ರಿಲೀಸ್ ಆದ್ಮೇಲೆ ಎಲ್ಲರಿಗೂ ಗೊತ್ತಾಗುತ್ತದೆ. ನಮಗೆ ಯಾರು ಗುರು ಇರ್ಲಿಲ್ಲ, ಗುರು ಅನ್ನೋದೆ ಗೊತ್ತಿಲ್ಲ. ಆದರೆ ನಿಮಗೆಲ್ಲ ಗುರು ಸಿಕ್ಕಿದ್ದಾರೆ, ನಿಮಗೆ ಸೋಲಿಲ್ಲ ಎಂದು ಹೇಳಿದರು. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
Read more