ನಟ ದರ್ಶನ್ ಕೊಲೆ ಮಾಡಿದ್ದೇ ಆದ್ರೆ ಶಿಕ್ಷೆ ಆಗಲಿ, ಆದರೆ..: ರಾಜ್ ಬಿ ಶೆಟ್ಟಿ ಹೇಳಿದ್ದೇನು?

ನಟ ದರ್ಶನ್ ಕೊಲೆ ಮಾಡಿದ್ದೇ ಆದ್ರೆ ಶಿಕ್ಷೆ ಆಗಲಿ, ಆದರೆ..: ರಾಜ್ ಬಿ ಶೆಟ್ಟಿ ಹೇಳಿದ್ದೇನು?

Published : Jul 18, 2024, 11:29 AM ISTUpdated : Jul 18, 2024, 12:58 PM IST

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರೋ ದರ್ಶನ್​ ಬಗ್ಗೆ ಸ್ಯಾಂಡಲ್​ವುಡ್​ ಮಂದಿ ಅವರದ್ದೇ ಆದ ಅಭಿಪ್ರಾಯ ಹೇಳುತ್ತಾರೆ. ಕೆಲವ್ರು ದರ್ಶನ್ ಪರ ನಿಂತ್ರೆ ಇನ್ ಕೆಲವ್ರು ನಾವು ನ್ಯಾಯದ ಪರ, ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ.

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರೋ ದರ್ಶನ್​ ಬಗ್ಗೆ ಸ್ಯಾಂಡಲ್​ವುಡ್​ ಮಂದಿ ಅವರದ್ದೇ ಆದ ಅಭಿಪ್ರಾಯ ಹೇಳುತ್ತಾರೆ. ಕೆಲವ್ರು ದರ್ಶನ್ ಪರ ನಿಂತ್ರೆ ಇನ್ ಕೆಲವ್ರು ನಾವು ನ್ಯಾಯದ ಪರ, ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ. ರೇಣುಕಾಸ್ವಾಮಿಗೆ ನ್ಯಾಯ ಸಿಗಲಿ ಎನ್ನುತ್ತಿದ್ದಾರೆ. ಇದೀಗ ಕನ್ನಡದ ದೊಡ್ಡ ಟ್ಯಾಲೆಂಟ್ ರಾಜ್​ ಬಿ ಶೆಟ್ಟಿ ಕೂಡ ದರ್ಶನ್​ ಕೇಸ್​ ಬಗ್ಗೆ ತನ್ನ ರೂಪಾಂತರ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಮೌನ ಮುರಿದಿದ್ದಾರೆ.  ರೂಪಾಂತರ ಸಿನಿಮಾ ಟ್ರೈಲರ್​ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿರೋ ರಾಜ್ ಬಿ ಶೆಟ್ಟಿ ದರ್ಶನ್ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದು ಕನ್ನಡ ಚಿತ್ರರಂಗಕ್ಕೆ ದೊಡ್ಡ ಹೊಡೆತ. 

ಒಂದು ವೇಳೆ ತಪ್ಪು ಆಗಿದೆ ಎಂಬುದು ನಿಜವಾದರೆ ಅದಕ್ಕೆ ಕಾನೂನು ಇದೆ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಎಲ್ಲರಿಗೂ ನ್ಯಾಯ ಸಿಗಲೇಬೇಕು. ಅಪರಾಧ ಅವರಿಂದಲೇ ಆಗಿದ್ದರೆ ಶಿಕ್ಷೆ ಆಗಬೇಕು. ಎಂದಿದ್ದಾರೆ ರಾಜ್ ಬಿ ಶೆಟ್ಟಿ. ರಾಜ್ ಬಿ ಶೆಟ್ಟಿ ಈಗ ಲೀಡ್​ ರೋಲ್​ನಲ್ಲಿ ನಟಿಸಿರೋ ಮತ್ತೊಂದು ಸಿನಿಮಾ ರೂಪಾಂತರ. ಈ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು ಕನ್ನಡ ಸಿನಿ ಪ್ರೇಕ್ಷಕರು ರೂಪಾಂತರದ ಬಗ್ಗೆ ಮಾತಾಡುವಂತಾಗಿದೆ. ವಿಶೇಷ ಅಂದ್ರೆ ರಾಜ್ ಬಿ ಶೆಟ್ಟಿಯ ಒಂದು ಮೊಟ್ಟೆಯ ಕತೆ ಸಿನಿಮಾ ಮಾಡಿದ್ದ ತಂಡವೇ ರೂಪಾಂತರಕ್ಕೂ ಕೆಲಸ ಮಾಡಿದ್ದಾರೆ. 

ಈ ಟ್ರೈಲರ್ ನೋಡುತ್ತಿದ್ರೆ ರಾಜ್ ಬಿ ಶೆಟ್ಟಿ ಮತ್ತೊಮ್ಮೆ ಪ್ರೇಕ್ಷಕರ ಮನ ಮುಟ್ಟೊದು ಗ್ಯಾರಂಟಿ ಅನ್ನಿಸುತ್ತೆ. ರೂಪಾಂತರ ಸಿನಿಮಾದ ಡೈರೆಕ್ಟರ್ ಮಿಥಿಲೇಶ್ ಎಡವಲತ್.. ಈ ಸಿನಿಮಾದಲ್ಲಿ ನಾಲ್ಕು ಕಥೆಗಳನ್ನ ಹೇಳುತ್ತಿದ್ದಾರೆ. ಈ ಟ್ರೈಲರ್​ ನೋಡಿದ್ರೆ  ಒಂದೊಂದು ಕಥೆನೂ ಜೀವನಕ್ಕೆ ಹತ್ತಿರ ಅನಿಸುತ್ತದೆ. ವ್ಯವಸ್ಥೆಯ ಅಸಲಿ ಮುಖಗಳು ಇಲ್ಲಿ ಅನಾವರಣ ಗೊಂಡಂತಿದೆ. ರೂಪಾಂತರಕ್ಕೆ ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ ಸ್ಕ್ರಿಪ್ಟ್ ಕೆಲಸಕ್ಕೂ ಸಾಥ್ ಕೊಟ್ಟಿದ್ದು, ಈ ಸಿನಿಮಾ ಮೇಲಿನ ನಿರೀಕ್ಷೆಯ ಹೆಚ್ಚಾಗಿದೆ. ರಾಜ್ ಬಿ ಶೆಟ್ಟಿ, ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮತ್ತಿರರ ತಾರಗಣ ಈ  ಚಿತ್ರಕ್ಕಿದೆ.  

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more