Rakshit Shetty: ನಡೀತಿದೆಯಾ ರಕ್ಷಿತ್ ಶೆಟ್ಟಿ ಹೆಸರು ಕೆಡಿಸೋ ಸಂಚು..! ನಟನಿಗೆ ಧೈರ್ಯ ತುಂಬಿದ ಕೊರಗಜ್ಜ ದೈವ..!

Rakshit Shetty: ನಡೀತಿದೆಯಾ ರಕ್ಷಿತ್ ಶೆಟ್ಟಿ ಹೆಸರು ಕೆಡಿಸೋ ಸಂಚು..! ನಟನಿಗೆ ಧೈರ್ಯ ತುಂಬಿದ ಕೊರಗಜ್ಜ ದೈವ..!

Published : Feb 03, 2024, 10:22 AM ISTUpdated : Feb 03, 2024, 10:23 AM IST

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸ್ಯಾಂಡಲ್‌ವುಡ್‌ನ ವೇರಿ ಟ್ಯಾಲೆಂಟೆಡ್ ನಟ ಕಮ್ ನಿರ್ದೇಶಕ, ಹಾಗು ನಿರ್ಮಾಪಕ. ಆದ್ರೆ ರಕ್ಷಿತ್ ವಿವಾದಗಳಿಂದೇನು ಹೊರತಾಗಿಲ್ಲ. ರಕ್ಷಿತ್ ಬಗ್ಗೆ ಆಗಾಗ ಇಲ್ಲದ ಗಾಸಿಪ್ಗಳು ಹರಿದಾಡಿದ್ದು ಇದೆ. ಇದೀಗ ನಟ ರಕ್ಷಿತ್ ಶೆಟ್ಟಿಯ ಹೆಸರು ಕೆಡಿಸೋ ಸಂಚೊಂದು ನಡೆಯುತ್ತಿದೆಯಂತೆ. ಈ ವಿಷಯವನ್ನ ಮಂಗಳೂರಿನಲ್ಲಿ ಭೂತ ಕೋಲಕ್ಕೆ ಹೋಗಿದ್ದಾಗ ದೈವವೊಂದು ರಕ್ಷಿತ್ ಎದುರಲ್ಲೇ ನಿನ್ನ ಹೆಸರು ಕೆಡಿಸೋ ಸಂಚು ನಡೆಯುತ್ತಿದೆ ಎಂದಿದೆ. 

ರಕ್ಷಿತ್ ಶೆಟ್ಟಿ ಇತ್ತೀಚೆಗೆ ಕರಾವಳಿಯ ಕಾರ್ಣಿಕದ ಬಬ್ಬು ಸ್ವಾಮಿ ದೈವದ(Daiva) ನೇಮೋತ್ಸವದಲ್ಲಿ ಪಾಲ್ಗೊಂಡಿದ್ರು. ಆಗ ತಮ್ಮ ಮುಂದಿನ ಸಿನಿ ಯೋಜನೆಗಳಿಗೆ ಯಾವುದೇ ಸಮಸ್ಯೆ ಆಗದಂತೆ ನಿರ್ವಿಘ್ನವಾಗಿ ನಡೆಸಿಕೊಡಬೇಕೆಂದು ಕೊರಗಜ್ಜ ದೈವದ ಬಳಿ ರಕ್ಷಿತ್ ಶೆಟ್ಟಿ(Rakshit Shetty) ಕೋರಿದ್ದಾರೆ. ಆಗ ನಿನ್ನ ಕೆಲಸ ಕಾರ್ಯಗಳಲ್ಲಿ ನೀನು ಧೈರ್ಯವಾಗಿ ಮುಂದೆ ಸಾಗು. ಯಾವುದೇ ವಿಘ್ನ ಎದುರಾದಂತೆ ನೋಡಿಕೊಳ್ಳಲು ನಾನಿದ್ದೇನೆ. ಕೆಲವರು ನಿನ್ನ ಹೆಸರನ್ನು ಕೆಡಿಸಲು ಹೊಂಚು ಹಾಕುತ್ತಿದ್ದಾರೆ. ಅದು ನನಗೂ ಗೊತ್ತಾಗಿದೆ. ಅಂತಹ ದುಷ್ಟ ಶಕ್ತಿಗಳನ್ನು ನನ್ನ ಕಾಲ ಬುಡದಲ್ಲಿಟ್ಟು ನಿನ್ನ ಜೊತೆ ನಿಲ್ಲುತ್ತೇನೆ  ಎಂದು ರಕ್ಷಿತ್ ಶೆಟ್ಟಿಗೆ ಕೊರಗಜ್ಜ(Koragajja) ಅಭಯ ನೀಡಿದೆ. ಈ ವೀಡಿಯೋ ಈಗ ವೈರಲ್ ಆಗುತ್ತಿದೆ. ನಟ ರಕ್ಷಿತ್ ಶೆಟ್ಟಿ 'ರಿಚರ್ಡ್ ಆಂಟನಿ' ಸಿನಿಮಾ ಮಾಡುತ್ತಿದ್ದಾರೆ. ರಿಚರ್ಡ್ ಆಂಟನಿ ಸಿನಿಮಾ(Richard Anthony Movie) ಅನೌನ್ಸ್ ಆಗಿ ಎರಡು ವರ್ಷ ಆಗಿದೆ. ಆದ್ರೆ ಸಿನಿಮಾ ಇನ್ನೂ ಶೂಟಿಂಗ್ ಟೇಕಾಫ್ ಆಗಿಲ್ಲ. ಇದರ ಮಧ್ಯೆ ಆಗಾಗ ರಕ್ಷಿತ್ ಪರ್ಸನ್ ಲೈಫ್ ಬಗ್ಗೆಯೂ ಸುದ್ದಿಯಾಗುತ್ತಿರುತ್ತೆ. ರಕ್ಷಿತ್ ಶೆಟ್ಟಿ ಮದುವೆ, ಲವ್ ಬಗ್ಗೆ ಹಲವು ಗಾಸಿಪ್ಗಳು ಹರಿದಾಡಿವೆ. ಇದನ್ನೆಲ್ಲಾ ಮಾಡುತ್ತಿರೋದು ಯಾರು.? ರಕ್ಷಿತ್ ಹೆಸರು ಹಾಳು ಮಾಡೋ ಸಂಜು ರೂಪಿಸುತ್ತಿರೋದು ಯಾರು.? ಅನ್ನೋದು ಗೊತ್ತಿಲ್ಲ. ಭಟ್ ಅಂಥವರಿಗೆ ಶಿಕ್ಷೆ ನಾನು ಕೊಡುತ್ತೇನೆ ಅಂತ ಕೊರಗಜ್ಜ ದೈವ ರಕ್ಷಿತ್ ಶೆಟ್ಟಿಗೆ ಅಭಯ ಕೊಟ್ಟಿದೆ. ಹೀಗಾಗಿ ರಕ್ಷಿತ್ ಈಗ ನಿರಾಳವಾಗಿ ತನ್ನ ರಿಚರ್ಡ್ ಆಂಟನಿ ಶೂಟಿಂಗ್ ಮಾಡ್ಬಹುದು.

ಇದನ್ನೂ ವೀಕ್ಷಿಸಿ:  Sandalwood: ಪಂಚವಾರ್ಷಿಕ ಯೋಜನೆಯಲ್ಲಿ ರಾಕಿಂಗ್ ಸ್ಟಾರ್ ಯಶ್..! ತ್ರೈಮಾಸಿಕ ಯೋಜನೆಯಲ್ಲಿ ಧ್ರುವ ಸರ್ಜಾ..!

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್