ಅಯೋಧ್ಯೆಯಲ್ಲಿ ಸ್ಯಾಂಡಲ್‌ವುಡ್ ಶ್ರೀಮನ್ನಾರಾಯಣ: ರಾಮನ ಕಣ್ಣೇ ಮಹಾದ್ಭುತ ಎಂದ ರಕ್ಷಿತ್ ಶೆಟ್ಟಿ!

ಅಯೋಧ್ಯೆಯಲ್ಲಿ ಸ್ಯಾಂಡಲ್‌ವುಡ್ ಶ್ರೀಮನ್ನಾರಾಯಣ: ರಾಮನ ಕಣ್ಣೇ ಮಹಾದ್ಭುತ ಎಂದ ರಕ್ಷಿತ್ ಶೆಟ್ಟಿ!

Published : Mar 08, 2024, 12:45 PM IST

ರಿಚರ್ಡ್ ಆಂಟನಿ' ಮುಹೂರ್ತಕ್ಕೂ ಮುನ್ನ 'ಬಾಲರಾಮ'ನ ದರ್ಶನ ಮಾಡಿಕೊಂಡಿದ್ದಾರೆ  ನಟ ರಕ್ಷಿತ್ ಶೆಟ್ಟಿ. 'ಅಯೋಧ್ಯೆ'ಯಲ್ಲಿ ಗಂಧದಗುಡಿಯ ಶ್ರೀಮನ್ನಾರಾಯಣ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ. 

ರಿಚರ್ಡ್ ಆಂಟನಿ' ಮುಹೂರ್ತಕ್ಕೂ ಮುನ್ನ 'ಬಾಲರಾಮ'ನ ದರ್ಶನ ಮಾಡಿಕೊಂಡಿದ್ದಾರೆ  ನಟ ರಕ್ಷಿತ್ ಶೆಟ್ಟಿ. 'ಅಯೋಧ್ಯೆ'ಯಲ್ಲಿ ಗಂಧದಗುಡಿಯ ಶ್ರೀಮನ್ನಾರಾಯಣ ಎಂದು ಅಬಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ.  ಕನ್ನಡದ ಸಿಂಪಲ್ ಸ್ಟಾರ್ ಚಾಋ್ಲಿ 333 ಮತ್ತು ಸಪ್ತಸಾಗರದಾಚೆ ಪಾರ್ಟ್ 1 ಪಾರ್ಟ್2 ನಂತರ ರಕ್ಷಿತ್ ಶೆಟ್ಟಿ  ಇದೀಗ ಹೊಸ ಚಿತ್ರ ರಿಚರ್ಡ್ ಆಂಟೋನಿಗಾಗಿ ತಯಾರಿ ನಡೆಸಿದ್ದಾರೆ.  ರಕ್ಷಿತ್ ಸಿನಿಮಾ ಭಕ್ತನೂ ಹೌದು ದೈವ ಭಕ್ತ ಕೂಡ ಹೌದು. ಸಿನಿಮಾಗೆ ಸಂಬಂಧಿಸಿದ ಕೆಲಸಗಳಿಂದ ಬಿಡುವು ಸಿಕ್ಕಾಗಲೆಲ್ಲ ನೆಮ್ಮದಿಯನ್ನ ಅರಸಿ, ದೇವಸ್ಥಾನಕ್ಕೆ ತೆರಳುವುದು ರಕ್ಷಿತ್ ಶೆಟ್ಟಿ ರೂಢಿಸಿಕೊಂಡ ಅಭ್ಯಾಸ. ಇದಕ್ಕೆ ಇನ್ನೊಂದು ಉದಾಹರಣೆ ರಕ್ಷಿತ್ ಶೆಟ್ಟಿ ಅಯೋಧ್ಯೆಗೆ ತೆರಳಿದ್ದಾರೆ. ಬಾಲರಾಮನ ಪಾದಕ್ಕೆರಗಿ ಆಶೀರ್ವಾದವನ್ನೂ ಪಡೆದಿದ್ದಾರೆ. ಶ್ರೀಮನ್ನಾರಾಯಣನನ್ನ ಅಯೋಧ್ಯೆಯಲ್ಲಿ ಕಂಡು ಅಲ್ಲಿನ ಅಭಿಮಾನಿಗಳು ಪುಳಕಿತಗೊಂಡಿದ್ದಾರೆ. 

ಸೆಲ್ಫೀ, ಫೋಟೋ ಕ್ಲಿಕಿಸಿಕೊಂಡು ಸಂಭ್ರಮಿಸಿದ್ದಾರೆ. ಸದ್ಯಕ್ಕೆ ರಕ್ಷಿತ್ ಶೆಟ್ಟಿ ಅವರ ಅಯೋಧ್ಯೆ ಪ್ರವಾಸದ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗ್ತಿವೆ. ಈ ವರ್ಷದ ಆರಂಭದಲ್ಲಿ ಮನೆಯ ದೈವ ಕೋಲದಲ್ಲಿ ಭಾಗವಹಿಸಿ ರಕ್ಷಿತ್ ಶೆಟ್ಟಿ ದೈವದ ಆಶೀರ್ವಾದ ಪಡೆದಿದ್ದರು. ಕರಾವಳಿಯ ಕಾರ್ಣಿಕದ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ರಕ್ಷಿತ್ ಪಾಲ್ಗೊಂಡಿದ್ದರು. ಕಾಪು ಮಾರಿಗುಡಿ ದೇವಾಲಯಕ್ಕೂ ಸಿಂಪಲ್ ಸ್ಟಾರ್ ಭೇಟಿ ನೀಡಿದ್ದರು. ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನವನ್ನೂ ಪಡೆದಿದ್ದರು. ಪುಂಗನೂರು ತಳಿಯ ಗೋವುಗಳನ್ನು ಮುದ್ದಾಡಿ ತಮ್ಮ ಗೋ ಪ್ರೇಮವನ್ನ ಮೆರೆದಿದ್ದರು ರಕ್ಷಿತ್ ಶೆಟ್ಟಿ. ಇದೀಗ ಅಯೋಧ್ಯೆಗೆ ತೆರಳಿ ಬಾಲ ರಾಮನ ದರ್ಶನ ಪಡೆದಿದ್ಧಾರೆ. ರಿಚರ್ಡ್ ಆಂಟೋನಿಗೆ ಶುಭವಾಗಲಿ ಎನ್ನುತ್ತಿದ್ದಾರೆ ರಕ್ಷಿತ್ ಫ್ಯಾನ್ಸ್.

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more