ದೈವದ ಮೊರೆ ಹೋದ ಸಿಂಪಲ್‌ ಸ್ಟಾರ್ ರಕ್ಷಿತ್ ಶೆಟ್ಟಿ!

ದೈವದ ಮೊರೆ ಹೋದ ಸಿಂಪಲ್‌ ಸ್ಟಾರ್ ರಕ್ಷಿತ್ ಶೆಟ್ಟಿ!

Published : May 17, 2025, 01:38 PM IST

ರಕ್ಷಿತ್ ಶೆಟ್ಟಿ ಉಡುಪಿಯ ಧಾರ್ಮಿಕ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ತಮ್ಮ ಕುಟುಂಬದೊಂದಿಗೆ ದೈವ ಸಂಭ್ರಮದಲ್ಲಿ ಪಾಲ್ಗೊಂಡರು. ರಕ್ಷಿತ್ ಅವರ ಮುಂದಿನ ಯೋಜನೆಗಳ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ.

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಎಲ್ಲಿದ್ದಾರೆ..? ಅಂತಾ ಫ್ಯಾನ್ಸ್ ಕಾಳಜಿಯಿಂದ ಹುಡುಕುತ್ತಿದ್ದಾಗ, ಅವರು ಉಡುಪಿಯಲ್ಲಿ ಧಾರ್ಮಿಕ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲಿ, ಅವರು ತಮ್ಮ ತಂದೆ-ತಾಯಿಯೊಂದಿಗೆ ಅಲೆವೂರು ದೊಡ್ಡಮನೆ ಕುಟುಂಬದ ನೇಮೋತ್ಸವದಲ್ಲಿ ಭಾಗವಹಿಸಿದರು. ನಟ್ಟನಡುರಾತ್ರಿ ನಡೆದ ಈ ದೈವ ಸಂಭ್ರಮದಲ್ಲಿ ಪಂಜುರ್ಲಿ ದೈವದ ಆಶೀರ್ವಾದ ಪಡೆದ ರಕ್ಷಿತ್, ಯಾವತ್ತೂ ಕೂಡ ಕುಟುಂಬದ ಧಾರ್ಮಿಕ ಆಚರಣೆಗಳನ್ನು ಕೈ ಬಿಡದೆ ಪಾಲ್ಗೊಳ್ಳುವವರು. ಇಲ್ಲಿ ಇನ್ನೊಂದು ಪ್ರಶ್ನೆ ಎಲ್ಲರ ಮನದಲ್ಲಿದೆ – ರಕ್ಷಿತ್ ಮದುವೆಯಾಗೋದು ಯಾವಾಗ? ಈಗ ಅವರು 42ರ ಹರೆಯದ ಮೋಸ್ಟ್ ಎಲಿಜೆಬಲ್ ಬ್ಯಾಚುಲರ್. ತಂದೆ-ತಾಯಿ ಕೂಡ ಮಗು ಸೆಟಲ್ ಆಗಲಿ ಎಂದು ಆಶಿಸುತ್ತಿದ್ದಾರೆ.

2016ರ ‘ಕಿರಿಕ್ ಪಾರ್ಟಿ’ ನಂತರ ರಕ್ಷಿತ್ ನಿರ್ದೇಶಕನ ಹಾದಿಯತ್ತ ಕೂಡ ಹೆಜ್ಜೆ ಇಟ್ಟರು. "ರಿಚರ್ಡ್ ಆಂಟನಿ" ಎಂಬ ಚಿತ್ರವನ್ನು ಘೋಷಿಸಿದರೂ, ಅದು ಈವರೆಗೆ ಸೆಟ್ಟೇರಿಲ್ಲ. ಈ ಚಿತ್ರ ಹೊಂಬಾಳೆ ಫಿಲ್ಮ್ಸ್‌ನಿಂದ ಬರಬೇಕಿತ್ತು, ಆದರೆ ಇನ್ನೂ ಯಾವುದೇ ಅಪ್‌ಡೇಟ್ ಇಲ್ಲ. ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾದ ನಂತರ ರಕ್ಷಿತ್ ಸಿನೆಮಾ ತೆರೆಗೆ ಬಂದಿಲ್ಲ. ರಕ್ಷಿತ್ ಶೆಟ್ಟಿ ಜೀವನ ಸಿಂಪಲ್ ಎನ್ನುವುದು ಹೌದಾದರೂ, ಅದರೊಳಗೆ ಹಲವಾರು ಗೊಂದಲಗಳು, ನಿರ್ಣಯಗಳು, ನಿರೀಕ್ಷೆಗಳಿವೆ. ಹೀಗಿರುವಾಗ ದೈವದ ಆಶೀರ್ವಾದಕ್ಕೆ ಮರುಳಾಗುವುದು ಸಹಜ. ಪಂಜುರ್ಲಿ ದೈವ ನಡು ರಾತ್ರಿ ರಕ್ಷಿತ್‌ಗೆ ಏನು ಹೇಳಿತು..? ಅವರ ಮುಂದಿನ ಬದುಕು ಯಾವ ದಿಸೆಯತ್ತ ಸಾಗಲಿದೆ..? ಈ ಎಲ್ಲ ಪ್ರಶ್ನೆಗಳಿಗೆ ಉತ್ತರಗಳು  ಭವಿಷ್ಯದಲ್ಲಿ ಸಿಗಲಿದೆ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more