ತೆಲುಗು ನಟಿಯರೂ ಇಂಡಸ್ಟ್ರಿಗೆ ಬರಬೇಕೆಂದ ಸ್ಟೈಲಿಷ್ ಸ್ಟಾರ್: ತೆಲುಗು ನಾಯಕಿಯರೇ ಇಲ್ವಾ?

ತೆಲುಗು ನಟಿಯರೂ ಇಂಡಸ್ಟ್ರಿಗೆ ಬರಬೇಕೆಂದ ಸ್ಟೈಲಿಷ್ ಸ್ಟಾರ್: ತೆಲುಗು ನಾಯಕಿಯರೇ ಇಲ್ವಾ?

Published : Aug 13, 2023, 10:04 AM IST

ತೆಲುಗು ನಟಿಯರ ಬಗ್ಗೆ ಬೇಸರ ವ್ಯಕ್ತಪಡಿಸಿದ ನಟ
ಅಲ್ಲು ಅರ್ಜುನ್ ಹೇಳಿಕೆ ಇದೀಗ ಎಲ್ಲೆಡೆ ವೈರಲ್‌
ನಟ ಅಲ್ಲು ಅರ್ಜುನ್ ಬೇಸರ ಯಾಕೆ ಗೊತ್ತಾ?
 

ಪ್ರತಿ ಸಿನಿಮಾ ಇಂಡಸ್ಟ್ರಿಯ ಬಗ್ಗೆಯೂ ಆಯಾ ಕಲಾವಿದರಿಗೆ ಪ್ರೀತಿ, ಅಭಿಮಾನ, ಗೌರವ ಇದ್ದೇ ಇರುತ್ತದೆ. ಹಾಗೆ ನೋಡಿದ್ರೆ ತೆಲುಗು ಸೀರಿಯಲ್ ಮತ್ತು ಸಿನಿಮಾ ಇಂಡಸ್ಟ್ರಿಯನ್ನು ಆಳುತ್ತಿರುವುದೇ ಕನ್ನಡ ನಟಿಯರು(kannada heroines)  ಅನ್ನೋದು ಇಂಟ್ರೆಸ್ಟಿಂಗ್ ವಿಚಾರ. ಪೂಜಾ ಹೆಗ್ಡೆ, ರಶ್ಮಿಕಾ, ಕೃತಿ ಶೆಟ್ಟಿ, ಶ್ರೀಲೀಲಾ ಸೇರಿದಂತೆ ಕನ್ನಡ ಚಿತ್ರರಂಗದ ನಟಿಯರದ್ದೇ ಮೇಲುಗೈ. ಹೀಗಿರುವಾಗ ಅಲ್ಲೂ ಅರ್ಜುನ್ ಇತ್ತೀಚೆಗೆ ಮಾತಾಡಿರೋ ವಿಡಿಯೋವೊಂದು ಇದೀಗ ವೈರಲ್ ಆಗಿದೆ. ಇದರಲ್ಲಿ ಎಲ್ಲ ಭಾಷೆಯಲ್ಲೂ ಆಯಾ ಭಾಷೆಯ ಹೀರೋಯಿನ್ಸ್ ಇದ್ದಾರೆ. ಆದರೆ ತೆಲುಗು ಭಾಷೆಯಲ್ಲಿ(telugu) ಹೀರೋಯಿನ್ಸ್ ಬಹಳ ಕಡಿಮೆ ಇದ್ದಾರೆ. ಅವಾರ್ಡ್ ಕಾರ್ಯಕ್ರಮವೊಂದರಲ್ಲಿ ಆಯಾ ಭಾಷೆಯ ನಟಿಯರು ಬಂದು ಅವರ ಭಾಷೆಯಲ್ಲಿ ಮಾತನಾಡಿ ಅವಾರ್ಡ್ ತೆಗೆದುಕೊಂಡರು. ಕನ್ನಡದ ನಟಿಯರೂ  ಕೂಡ ಬೊಂಬಾಟಾಗಿ ಕನ್ನಡದಲ್ಲೆ ಮಾತಾಡಿದರು. ಆದರೆ ತೆಲುಗು ನಟಿಯರು(Telugu actresses) ಇಂಡಸ್ಟ್ರಿಯಲ್ಲಿ ಬೆಳೆಯುತ್ತಿಲ್ಲ. ಆ ಬೇಸರ ಕೊರಗು ನನಗೆ ಬಹಳ ದಿನಗಳಿಂದ ಇತ್ತು. ಇದೀಗ ಶ್ರೀಲೀಲಾ ಮತ್ತು ಬೇಬಿ ಸಿನಿಮಾ ಮೂಲಕ ವೈಷ್ಣವಿ ಇಂಡಸ್ಟ್ರಿಯಲ್ಲಿ ಬೆಳೆಯುತ್ತಿರೋದು ಖುಷಿಯ ವಿಚಾರ ಎಂದಿದ್ದಾರೆ. ಹಾಗೆ ನೋಡಿದ್ರೆ ಶ್ರೀಲೀಲಾ ತೆಲುಗು ಹುಡುಗಿಯೆಂದೆ ಅಲ್ಲೂ ಅರ್ಜುನ್ ಮೆನ್ಷನ್ ಮಾಡಿದ್ದಾರೆ. ಶ್ರೀಲೀಲಾ ಮನೆ ಭಾಷೆ ತೆಲುಗು ಆದರೂ ಕರ್ನಾಟಕದವರು(karnataka). ಕನ್ನಡದಲ್ಲೇ ಜರ್ನಿ ಶುರು ಮಾಡಿದವರು. ಏನೇ ಆದರೂ  ಅಲ್ಲೂ ಅರ್ಜುನ್ ಬೇಬಿ ಸಿನಿಮಾದಲ್ಲಿ ನಟಿಸಿರೋ ವೈಷ್ಣವಿ ಕುರಿತು ಖುಷಿಯಿಂದ ಮಾತನಾಡಿದ್ದಾರೆ. ಆಯಾ ಭಾಷೆಯಲ್ಲಿ ಆಯಾ ನಾಯಕಿಯರು ಬೆಳೆಯಬೇಕು ಎನ್ನುವ ಅವರ ಹೇಳಿಕೆ ಇದೀಗ ವೈರಲ್ ಆಗುತ್ತಿದೆ.

ಇದನ್ನೂ ವೀಕ್ಷಿಸಿ:  ದುಬೈನಲ್ಲಿ ಸೈಮಾ ಸಂಭ್ರಮ: ಕಾರ್ಯಕ್ರಮದ ಸುದ್ದಿಗೋಷ್ಠಿಯಲ್ಲಿ ಡಾಲಿ, ಶ್ರುತಿ ಹಾಸನ್‌ ಭಾಗಿ..!

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?