ತೋತಾಪುರಿಯ ಮತ್ತೊಂದು ವೀಡಿಯೋ ರಿವೀಲ್: ಏನಿದು ಅಸಲಿ ಕತೆ?

ತೋತಾಪುರಿಯ ಮತ್ತೊಂದು ವೀಡಿಯೋ ರಿವೀಲ್: ಏನಿದು ಅಸಲಿ ಕತೆ?

Published : Oct 05, 2022, 01:49 PM IST

ಜಗ್ಗೇಶ್-ಅದಿತಿ ಪ್ರಭುದೇವ ನಟನೆಯ ತೋತಾಪುರಿ ಸಿನಿಮಾ ಅಲ್ಲ ಇದೊಂದು ಬದುಕಿನ ತಾತ್ಪರ್ಯ ಅಂತ ಸಿನಿಮಾ ನೋಡಿದ ಪ್ರತಿಯೊಬ್ಬರು ಹೇಳುತ್ತಿದ್ದಾರೆ. ಈ ಮಾತು ಅಕ್ಷರಶಃ ಸತ್ಯ ಅಂತ ತಿಳಿಸೋಕೆ ಈಗ ತೋತಾಪುರಿ ಸಿನಿಮಾದ ವೀಡಿಯೋ ಒಂದು ರಿಲೀಸ್ ಆಗಿದೆ. 

ಜಗ್ಗೇಶ್-ಅದಿತಿ ಪ್ರಭುದೇವ ನಟನೆಯ ತೋತಾಪುರಿ ಸಿನಿಮಾ ಅಲ್ಲ ಇದೊಂದು ಬದುಕಿನ ತಾತ್ಪರ್ಯ ಅಂತ ಸಿನಿಮಾ ನೋಡಿದ ಪ್ರತಿಯೊಬ್ಬರು ಹೇಳುತ್ತಿದ್ದಾರೆ. ಈ ಮಾತು ಅಕ್ಷರಶಃ ಸತ್ಯ ಅಂತ ತಿಳಿಸೋಕೆ ಈಗ ತೋತಾಪುರಿ ಸಿನಿಮಾದ ವೀಡಿಯೋ ಒಂದು ರಿಲೀಸ್ ಆಗಿದೆ. ಅದು ಚಿತ್ರದ ಅಸಲಿ ಕಂಟೆಂಟ್ ಕೂಡ ಹೌದು. ರಾಯರ ಮಠದಲ್ಲಿ ವೀಣೆ ನುಡಿಸೋ ಶಕೀಲಾಭಾನುಗೆ ಒಂದಷ್ಟು ಭಕ್ತರು ಹಾಗೂ ಆಡಳಿತ ಮಂಡಳಿ ಇನ್ನು ವೀಣೆ ನುಡಿಸುವಂತಿಲ್ಲ ಅಂದಾಗ ಆಕೆ ತುಂಬಾ ನೋಂದುಕೊಳ್ತಾಳೆ. ಕೊನೆಗೆ ರಾಯರ ಮಠದ ಸ್ವಾಮಿಗಳೇ ಬೃಂದಾವನವೊಂದನ್ನ ಆ ಶಕೀಲಾಭಾನು ಮನೆಗೆ ತಂದು ಕೊಡ್ತಾರೆ. ಇದು ನಿಜಕ್ಕೂ ರೋಮಾಂಚನಕಾರಿ ಹಾಗೂ ಭಾವೈಕ್ಯತೆಯ ಬಂಧಗಳ ಗಮ್ಮತ್ತನ್ನ ಸಾರುತ್ತಿದೆ. ಬೃಂದಾವನದಲ್ಲಿ ನಾನು ರಾಯರನ್ನ ಕಾಣ್ತೇನೆ. 

ನೀನು ಅಲ್ಲಾನ ಕಾಣ್ತೀಯ. ಮತ್ತೊಬ್ರು ಜೀಸಸ್‌ನ ಕಾಣ್ತಾರೆ. ಈ ಬೃಂದಾವನ ತಿಳಿ ಮನಸ್ಸು ಇದ್ದಂತೆ. ಇಲ್ಲಿ ಯಾರು ಯಾರನ್ನ ಬೇಕಾದ್ರೂ ಕಾಣಬಹುದು. ನೀನು ಜೀವ ಇರೋವರೆಗೂ ವೀಣೆ ನುಡಿಸಬಹುದು. ಅದು ಗುಡಿ, ಚರ್ಚ್, ಮಸೀದಿ ಎಲ್ಲಾದ್ರೂ ಸರಿ ಅನ್ನೋ ಮಾತನ್ನ ಮಠದ ಸ್ವಾಮಿಗಳು ಹೇಳ್ತಾರೆ. ಇಂತಹ ಕಂಟೆಂಟ್ ಪ್ರಸ್ತುತ ಸಮಾಜಕ್ಕೆ ಬೇಕಿದೆ. ಅದನ್ನ ನೀಡುವಂತೆಹ ಕೆಲಸವನ್ನ ತೋತಾಪುರಿ ಟೀಂ ಮಾಡಿದೆ. ಹೀಗಾಗಿ ತೋತಾಪುರಿ ಟ್ರೈಲರ್ ನೋಡಿ ಇದು ಬರೀ ಪೋಲಿ ಜೋಕ್ಸ್ ಇರೋ ಯೂತ್‌ಫುಲ್ ಸಿನಿಮಾ ಅಂತ ನೀವಂದುಕೊಂಡ್ರೆ ಅದು ತಪ್ಪು. ತೋತಾಪುರಿ ಪಕ್ಕಾ ಫ್ಯಾಮಿಲಿ ಎಂಟರ್ಟೈನರ್. ನಿರ್ದೇಶಕ ವಿಜಯ್ ಪ್ರಸಾದ್, ನಿರ್ಮಾಪಕ ಕೆಎ ಸುರೇಶ್ ಸಾಮಾಜಿಕ ಕಳಕಳಿಯಲ್ಲಿ ಮಾಡಿರೋ ಚಿತ್ರ ಇದು. ಸದ್ಯ ತೋತಾಪುರಿ ನೋಡಿದವರೆಲ್ಲಾ ಮೆಚ್ಚುಗೆ ಮಾತುಗಳನ್ನಾಡುತ್ತಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more