ತೋತಾಪುರಿಯ ಮತ್ತೊಂದು ವೀಡಿಯೋ ರಿವೀಲ್: ಏನಿದು ಅಸಲಿ ಕತೆ?

ತೋತಾಪುರಿಯ ಮತ್ತೊಂದು ವೀಡಿಯೋ ರಿವೀಲ್: ಏನಿದು ಅಸಲಿ ಕತೆ?

Published : Oct 05, 2022, 01:49 PM IST

ಜಗ್ಗೇಶ್-ಅದಿತಿ ಪ್ರಭುದೇವ ನಟನೆಯ ತೋತಾಪುರಿ ಸಿನಿಮಾ ಅಲ್ಲ ಇದೊಂದು ಬದುಕಿನ ತಾತ್ಪರ್ಯ ಅಂತ ಸಿನಿಮಾ ನೋಡಿದ ಪ್ರತಿಯೊಬ್ಬರು ಹೇಳುತ್ತಿದ್ದಾರೆ. ಈ ಮಾತು ಅಕ್ಷರಶಃ ಸತ್ಯ ಅಂತ ತಿಳಿಸೋಕೆ ಈಗ ತೋತಾಪುರಿ ಸಿನಿಮಾದ ವೀಡಿಯೋ ಒಂದು ರಿಲೀಸ್ ಆಗಿದೆ. 

ಜಗ್ಗೇಶ್-ಅದಿತಿ ಪ್ರಭುದೇವ ನಟನೆಯ ತೋತಾಪುರಿ ಸಿನಿಮಾ ಅಲ್ಲ ಇದೊಂದು ಬದುಕಿನ ತಾತ್ಪರ್ಯ ಅಂತ ಸಿನಿಮಾ ನೋಡಿದ ಪ್ರತಿಯೊಬ್ಬರು ಹೇಳುತ್ತಿದ್ದಾರೆ. ಈ ಮಾತು ಅಕ್ಷರಶಃ ಸತ್ಯ ಅಂತ ತಿಳಿಸೋಕೆ ಈಗ ತೋತಾಪುರಿ ಸಿನಿಮಾದ ವೀಡಿಯೋ ಒಂದು ರಿಲೀಸ್ ಆಗಿದೆ. ಅದು ಚಿತ್ರದ ಅಸಲಿ ಕಂಟೆಂಟ್ ಕೂಡ ಹೌದು. ರಾಯರ ಮಠದಲ್ಲಿ ವೀಣೆ ನುಡಿಸೋ ಶಕೀಲಾಭಾನುಗೆ ಒಂದಷ್ಟು ಭಕ್ತರು ಹಾಗೂ ಆಡಳಿತ ಮಂಡಳಿ ಇನ್ನು ವೀಣೆ ನುಡಿಸುವಂತಿಲ್ಲ ಅಂದಾಗ ಆಕೆ ತುಂಬಾ ನೋಂದುಕೊಳ್ತಾಳೆ. ಕೊನೆಗೆ ರಾಯರ ಮಠದ ಸ್ವಾಮಿಗಳೇ ಬೃಂದಾವನವೊಂದನ್ನ ಆ ಶಕೀಲಾಭಾನು ಮನೆಗೆ ತಂದು ಕೊಡ್ತಾರೆ. ಇದು ನಿಜಕ್ಕೂ ರೋಮಾಂಚನಕಾರಿ ಹಾಗೂ ಭಾವೈಕ್ಯತೆಯ ಬಂಧಗಳ ಗಮ್ಮತ್ತನ್ನ ಸಾರುತ್ತಿದೆ. ಬೃಂದಾವನದಲ್ಲಿ ನಾನು ರಾಯರನ್ನ ಕಾಣ್ತೇನೆ. 

ನೀನು ಅಲ್ಲಾನ ಕಾಣ್ತೀಯ. ಮತ್ತೊಬ್ರು ಜೀಸಸ್‌ನ ಕಾಣ್ತಾರೆ. ಈ ಬೃಂದಾವನ ತಿಳಿ ಮನಸ್ಸು ಇದ್ದಂತೆ. ಇಲ್ಲಿ ಯಾರು ಯಾರನ್ನ ಬೇಕಾದ್ರೂ ಕಾಣಬಹುದು. ನೀನು ಜೀವ ಇರೋವರೆಗೂ ವೀಣೆ ನುಡಿಸಬಹುದು. ಅದು ಗುಡಿ, ಚರ್ಚ್, ಮಸೀದಿ ಎಲ್ಲಾದ್ರೂ ಸರಿ ಅನ್ನೋ ಮಾತನ್ನ ಮಠದ ಸ್ವಾಮಿಗಳು ಹೇಳ್ತಾರೆ. ಇಂತಹ ಕಂಟೆಂಟ್ ಪ್ರಸ್ತುತ ಸಮಾಜಕ್ಕೆ ಬೇಕಿದೆ. ಅದನ್ನ ನೀಡುವಂತೆಹ ಕೆಲಸವನ್ನ ತೋತಾಪುರಿ ಟೀಂ ಮಾಡಿದೆ. ಹೀಗಾಗಿ ತೋತಾಪುರಿ ಟ್ರೈಲರ್ ನೋಡಿ ಇದು ಬರೀ ಪೋಲಿ ಜೋಕ್ಸ್ ಇರೋ ಯೂತ್‌ಫುಲ್ ಸಿನಿಮಾ ಅಂತ ನೀವಂದುಕೊಂಡ್ರೆ ಅದು ತಪ್ಪು. ತೋತಾಪುರಿ ಪಕ್ಕಾ ಫ್ಯಾಮಿಲಿ ಎಂಟರ್ಟೈನರ್. ನಿರ್ದೇಶಕ ವಿಜಯ್ ಪ್ರಸಾದ್, ನಿರ್ಮಾಪಕ ಕೆಎ ಸುರೇಶ್ ಸಾಮಾಜಿಕ ಕಳಕಳಿಯಲ್ಲಿ ಮಾಡಿರೋ ಚಿತ್ರ ಇದು. ಸದ್ಯ ತೋತಾಪುರಿ ನೋಡಿದವರೆಲ್ಲಾ ಮೆಚ್ಚುಗೆ ಮಾತುಗಳನ್ನಾಡುತ್ತಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more