ತಲೆ ಎತ್ತಿದೆ ಪುನೀತ್​ ರಾಜ್​ಕುಮಾರ್ ದೇವಸ್ಥಾನ: ಇದು ಅಭಿಮಾನಿಗಳಿಂದ ಅಭಿಮಾನಕ್ಕೆ ಕಟ್ಟಿದ ಟೆಂಪಲ್!

ತಲೆ ಎತ್ತಿದೆ ಪುನೀತ್​ ರಾಜ್​ಕುಮಾರ್ ದೇವಸ್ಥಾನ: ಇದು ಅಭಿಮಾನಿಗಳಿಂದ ಅಭಿಮಾನಕ್ಕೆ ಕಟ್ಟಿದ ಟೆಂಪಲ್!

Published : Sep 29, 2024, 04:47 PM IST

ದೊಡ್ಮನೆಯ ದೊರೆ. ದಾನ ಧರ್ಮ ಮಾಡಿ ತುಂಬು ಪ್ರೀತಿ ಕೊಡುತ್ತಿದ್ದ ಅಪ್ಪಟ ಅಪರಂಜಿ ಅಪ್ಪು. ಪುನೀತ್ ಇಲ್ಲವಾಗಿ ಮೂರು ವರ್ಷ ಆಗ್ತಾ ಬಂದಿದೆ. 29 October 2021 ಅಪ್ಪು ನಮ್ಮನ್ನೆಲ್ಲಾ ಅಗಲಿದ್ರು. ಈಗ ಪುನೀತ್ ರಾಜ್​ಕುಮಾರ್​ ಅಭಿಮಾನಿಗಳ ಪಾಲಿಗೆ ಅಕ್ಷರಶಃಹ ದೇವರಾಗಿದ್ದಾರೆ. 

ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್​ ಈಗ ಅಭಿಮಾನಿಗಳ ಪಾಲಿಗೆ ದೇವರಾಗಿದ್ದಾರೆ. ಮನೆ ಮನೆಯಲ್ಲೂ ಮನ ಮನದಲ್ಲೂ ಅಪ್ಪು ದೇವರಂತೆ ನೆಲೆಸಿದ್ದಾರೆ. ಮಹಾಲಯ ಅಮವಾಸ್ಯೆಯಲ್ಲಿ ಅಪ್ಪು ಅಭಿಮಾನಿಗಳು ಪುನೀತ್​ರನ್ನ ನೆನೆದು ಪೂಜಿಸಿ ಆಶೀರ್ವಾದ ಪಡೆಯೋ ಅದೆಷ್ಟೋ ಉದಹಾರಣೆಗಳು ಸಿಗುತ್ತವೆ. ಇದೀಗ ಇಲ್ಲೊಬ್ಬ ಅಭಿಮಾನಿ ಪುನೀತ್​ರಾಜ್​ಕುಮಾರ್​ರ ದೇವಸ್ಥಾನವನ್ನೇ ಪ್ರತಿಷ್ಠಾಪಿಸಿದ್ದಾನೆ. ಹಾಗಾದ್ರೆ ಅಪ್ಪು ಟೆಂಪಲ್ ಎಲ್ಲಿದೆ. ಹೇಗಿದೆ.? ಕನ್ನಡಿಗರ ಪ್ರೀತಿಯ ರಾಜರತ್ನ, ಪವರ್ ಸ್ಟಾರ್ ಪುನೀತ್ ರಾಜ್ ಅಭಿಮಾನಿಗಳನ್ನ ಮನೆ ದೇವರು ಅಂತಾನೇ ಕರೀತಾ ಇದ್ರು. ಅಣ್ಣಾವ್ರು ಅಭಿಮಾನಿಗಳೇ ದೇವ್ರು ಅಂತಂದ್ರೆ ಅಪ್ಪು, ಅಭಿಮಾನಿಗಳೇ ನಮ್ಮನೇ ದೇವ್ರು ಅಂತ ಹಾಡಿ ಕುಣಿದು, ಅಭಿಮಾನಿಗಳಿಗೆ ಇನ್ನಷ್ಟು ಮೇಲಿನ ಸ್ಥಾನ ಕೊಟ್ಟಿದ್ರು. ಪವರ್ ಸ್ಟಾರ್ ಪುನೀತ್ ರಾಜ್​​ಕುಮಾರ್.

ದೊಡ್ಮನೆಯ ದೊರೆ. ದಾನ ಧರ್ಮ ಮಾಡಿ ತುಂಬು ಪ್ರೀತಿ ಕೊಡುತ್ತಿದ್ದ ಅಪ್ಪಟ ಅಪರಂಜಿ ಅಪ್ಪು. ಪುನೀತ್ ಇಲ್ಲವಾಗಿ ಮೂರು ವರ್ಷ ಆಗ್ತಾ ಬಂದಿದೆ. 29 October 2021 ಅಪ್ಪು ನಮ್ಮನ್ನೆಲ್ಲಾ ಅಗಲಿದ್ರು. ಈಗ ಪುನೀತ್ ರಾಜ್​ಕುಮಾರ್​ ಅಭಿಮಾನಿಗಳ ಪಾಲಿಗೆ ಅಕ್ಷರಶಃಹ ದೇವರಾಗಿದ್ದಾರೆ. ಪುನೀತ್​ ಇರೋ ಗುಡಿ ಗೋಪುರಗಳು ಲೋಕಾಪರ್ಣೆ ಆಗುತ್ತಿವೆ. ಕೆಲ ಹೀರೋಗಳು ಕೊಲೆ, ಗಲಾಟೆ, ಮೀಟು ಕೇಸ್​​ ಗಳಿಂದ ಸುದ್ದಿ ಆಗ್ತಾರೆ. ಆದ್ರೆ ಪವರ್ ಸ್ಟಾರ್​ ಪುನೀತ್ ರಾಜ್​ಕುಮಾರ್​ ತನ್ನ ವ್ಯಕ್ತಿತ್ವದಿಂದಲೇ ಎಲ್ಲರ ಮನಸ್ಸು ಗೆದ್ದವರು. ಅಪ್ಪು ಈಗ ಅಜರಾಮರ. 

ಹೀಗಾಗೆ ಪುನೀತ್​​​ಗಾಗಿ ದೇವಸ್ಥಾನ ನಿರ್ಮಾಣ ಆಗುತ್ತಿವೆ. ಹಾವೇರಿ ಜಿಲ್ಲೆಯ ಯಲಗಚ್ಚ ಗ್ರಾಮದಲ್ಲಿ ದಿವಂಗತ ಪುನೀತ್ ರಾಜಕುಮಾರ ದೇವಸ್ಥಾನ ನಿರ್ಮಾಣ ಆಗಿದೆ. ದೇವಸ್ಥಾನದ ಉದ್ಘಾಟನೆಯನ್ನ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ ಮತ್ತು ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಯುವ ರಾಜಕುಮಾರ್ ಮಾಡಿದ್ದಾರೆ. ಪುನೀತ್ ರಾಜಕುಮಾರ ಅಪ್ಪಟ ಅಭಿಮಾನಿ ಯಲಗಚ್ಚ ಗ್ರಾಮದ ಡ್ಯಾನ್ಸ್ ಮಾಸ್ಟರ್ ಪ್ರಕಾಶ ಮತ್ತು ದೀಪಾ ದಂಪತಿ ತಮ್ಮ ಮನೆಯ ಎದುರು, ತಮ್ಮದೇ ಸ್ವಂತ ಜಾಗದಲ್ಲಿ ಈ ದೇವಸ್ಥಾನ ಕಟ್ಟಿಸಿದ್ದಾರೆ. 10 ಲಕ್ಷ ವೆಚ್ಚ ಮಾಡಿ ಈ ಕಟ್ಟಡವನ್ನ ಕಟ್ಟಿಸಿದ್ದು ಪುನೀತ್ ರಾಜ್ ಕುಮಾರ್ ಪ್ರತಿಮೆಯನ್ನ ಪ್ರತಿಷ್ಠಾಪಿಸಲಾಗಿದೆ. 

ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರೇ ಈ ದೇವಸ್ಥಾನ ಉದ್ಘಾಟನೆ ಮಾಡಿದ್ದು ವಿಶೇಷ. ಅಷ್ಟೆ ಅಲ್ಲ ನಟ ಕಿಚ್ಚ ಸುದೀಪ್​​ಗು ರಾಯಚೂರಿನ ಅಭಿಮಾನಿಗಳು 12 ಲಕ್ಷ ರೂಪಾಯಿ ವೆಚ್ಚದಲ್ಲಿ ಗುಡಿಯೊಂದನ್ನು ಕಟ್ಟಿಸಿದ್ದಾರೆ. ಇತ್ತೀಚೆಗಷ್ಟೆ ನಟಿ ಖುಷ್ಬುಗು ಅಭಿಮಾನಿಗಳೆಲ್ಲಾ ಸೇರಿ ದೇವಸ್ಥಾನ ನಿರ್ಮಿಸಿದ್ದಾರೆ. ಈಗ ಅಪ್ಪು ದೇವಸ್ಥಾನ ಉದ್ಘಾಟನೆ ಆಗಿದೆ. ಈಗಾಗ್ಲ ಪುನೀತ್ ರಾಜ್ ಕುಮಾರ್ ಹೆಸರನ್ನ ಅನೇಕ ರಸ್ತೆಗಳಿಗೆ, ಪಾರ್ಕ್ ಗಳಿಗೆ, ರಂಗಮಂದಿರಗಳಿಗೆ ಇಡಲಾಗಿದೆ. ಅಪ್ಪು ಪ್ರತಿಮೆಗಳು, ಪುತ್ಥಳಿಗಳು ರಾಜ್ಯದ ನಾನಾ ಕಡೆ ತಲೆ ಎತ್ತಿನಿಂತಿವೆ. ಈಗ ದೇವಸ್ಥಾನ ನಿರ್ಮಾಣ ಆಗಿದ್ದು ಅಭಿಮಾನಿಗಳು ಅಪ್ಪುಗೆ ದೇವರ ಸ್ಥಾನ ಕೊಟ್ಟಿದ್ದಾರೆ.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more