Totapuri: ಹೊಸ ಮೈಲಿಗಲ್ಲು ಸೃಷ್ಟಿಸಿದ ನವರಸನಾಯಕ ಜಗ್ಗೇಶ್!

Totapuri: ಹೊಸ ಮೈಲಿಗಲ್ಲು ಸೃಷ್ಟಿಸಿದ ನವರಸನಾಯಕ ಜಗ್ಗೇಶ್!

Suvarna News   | Asianet News
Published : Mar 05, 2022, 02:31 PM IST

ನವರಸ ನಾಯಕ ಜಗ್ಗೇಶ್‌ ನಟನೆಯ 'ತೋತಾಪುರಿ' ಸಿನಿಮಾ ತನ್ನ 'ಬಾಗ್ಲು ತೆಗಿ ಮೇರಿ ಜಾನ್‌' ಹಾಡಿನಿಂದ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ. ಕರ್ನಾಟಕ ಸೇರಿದಂತೆ ದೇಶ-ವಿದೇಶಗಳಲ್ಲೂ ಈ ಸಿನಿಮಾದ ಹಾಡಿನ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. 

ನವರಸ ನಾಯಕ ಜಗ್ಗೇಶ್‌ (Jaggesh) ನಟನೆಯ 'ತೋತಾಪುರಿ' (Totapuri) ಸಿನಿಮಾ ತನ್ನ 'ಬಾಗ್ಲು ತೆಗಿ ಮೇರಿ ಜಾನ್‌' (Baglu Tegi Meri Jaan) ಹಾಡಿನಿಂದ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ. ಕರ್ನಾಟಕ ಸೇರಿದಂತೆ ದೇಶ-ವಿದೇಶಗಳಲ್ಲೂ ಈ ಸಿನಿಮಾದ ಹಾಡಿನ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇತ್ತೀಚೆಗೆ ಬಿಡುಗಡೆಯಾದರೂ ಈ ಹಾಡನ್ನು ಯೂಟ್ಯೂಬ್‌ನಲ್ಲಿ ಹದಿನಾಲ್ಕು ಕೋಟಿಗೂ ಅಧಿಕ ಮಂದಿ ನೋಡಿದ್ದಾರೆ. ಇತ್ತೀಚೆಗೆ ಬಂದ ಹಾಡುಗಳ ಪೈಕಿ ದೊಡ್ಡ ಮಟ್ಟದಲ್ಲಿ ಜನರನ್ನು ಸೆಳೆದ ಹಾಡು ಇದಾಗಿದ್ದು, ದಿನದಿಂದ ದಿನಕ್ಕೆ ಇದರ ಕ್ರೇಜ್‌ ಹೆಚ್ಚಾಗುತ್ತಲೇ ಇದೆ. ರೀಲ್ಸ್‌ನಲ್ಲಿ ಈ ಹಾಡಿಗೆ ಡಾನ್ಸ್‌ ಮಾಡಿ ಅಪ್ಲೋಡ್‌ ಮಾಡುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಲೇ ಇದೆ.

Totapuri: 'ಬಾಗ್ಲು ತೆಗಿ ಮೇರಿ ಜಾನ್' ಹಾಡು ಹಿಟ್ ಆಗಿದ್ದಕ್ಕೆ ಧನ್ಯವಾದ ತಿಳಿಸಿದ ಜಗ್ಗೇಶ್!

ಚಿತ್ರದ ನಿರ್ದೇಶಕ ವಿಜಯಪ್ರಸಾದ್‌ (Vijay Prasad) ಅವರೇ ಈ ಹಾಡಿಗೆ ಸಾಹಿತ್ಯ ರಚಿಸಿದ್ದಾರೆ. ಅನೂಪ್‌ ಸೀಳಿನ್‌ ಸಂಗೀತ ಸಂಯೋಜಿಸಿದ್ದಾರೆ. ಈ ಬಗ್ಗೆ ನಟ ಜಗ್ಗೇಶ್ 'ನನ್ನ ಅಭಿಮಾನಿಗಳಿಗೆ ನಾನು ಮೊದಲು ಧನ್ಯವಾದ ಸಲ್ಲಿಸುತ್ತೇನೆ. ನನ್ನ ಇಷ್ಟು ವರ್ಷಗಳ ವೃತ್ತಿ ಜೀವನದಲ್ಲಿ 8ರಿಂದ 10 ಮಿಲಿಯನ್​ ವೀವ್ಸ್​ ಆಗುವಂತಹ ಸಾಂಗ್​ ಸಿಕ್ಕಿದ್ದು ಇದೇ ಮೊದಲು. ಜನರು ಈ ಹಾಡನ್ನು ತುಂಬ ಇಷ್ಟಪಟ್ಟಿದ್ದಾರೆ ಎಂದು ಈ ಹಿಂದೆ ತಿಳಿಸಿದ್ದರು. ಇನ್ನು ಎರಡು ಭಾಗಗಳಲ್ಲಿ 'ತೋತಾಪುರಿ' ಚಿತ್ರವು ತೆರೆಗೆ ಬರಲಿದ್ದು, ಚಿತ್ರದಲ್ಲಿ ಅದಿತಿ ಪ್ರಭುದೇವ, ಸುಮನ್‌ ರಂಗನಾಥ್‌, ಡಾಲಿ ಧನಂಜಯ್, ವೀಣಾ ಸುಂದರ್‌ ಸೇರಿದಂತೆ ಹಲವರು ಕಾಣಿಸಿಕೊಂಡಿದ್ದಾರೆ. ಕೆ.ಎ. ಸುರೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more