'ಭಜರಂಗಿ 2' ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ: ಅಭಿಮಾನಿಗಳ ಜೊತೆ ಚಿತ್ರ ವೀಕ್ಷಿಸಿದ ಶಿವಣ್ಣ

'ಭಜರಂಗಿ 2' ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ: ಅಭಿಮಾನಿಗಳ ಜೊತೆ ಚಿತ್ರ ವೀಕ್ಷಿಸಿದ ಶಿವಣ್ಣ

Suvarna News   | Asianet News
Published : Nov 15, 2021, 12:48 PM IST

ಸ್ಯಾಂಡಲ್​ವುಡ್‌ನ ಕರುನಾಡ ಚಕ್ರವರ್ತಿ  ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಭಜರಂಗಿ 2 ಚಿತ್ರ ಬಿಡುಗಡೆಯಾಗಿ ಸಿನಿರಸಿಕರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹೀಗಾಗಿ ಶಿವಣ್ಣ ಅಭಿಮಾನಿಗಳೊಂದಿಗೆ ಗಾಂಧಿನಗರದ ಅನುಪಮಾ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸಿದ್ದಾರೆ. 

ಸ್ಯಾಂಡಲ್​ವುಡ್‌ನ ಸೆಂಚುರಿ ಸ್ಟಾರ್  ಶಿವರಾಜ್ ಕುಮಾರ್ (Shivarajkumar) ಅಭಿನಯದ ಬಹುನಿರೀಕ್ಷಿತ 'ಭಜರಂಗಿ 2' (Bhajarangi 2) ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿ ಸಿನಿರಸಿಕರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಚಿತ್ರ ರಿಲೀಸ್​ ಆದ ದಿನವೇ ಪುನೀತ್ ರಾಜ್​ಕುಮಾರ್ ( Puneeth Rajkumar) ನಿಧನದ ಸುದ್ದಿ ಎಲ್ಲರನ್ನೂ ದಿಗ್ಭ್ರಾಂತಿಗೊಳಿಸಿತ್ತು. ಹಾಗೂ ಅರ್ಧದಲ್ಲೇ  ಚಿತ್ರಮಂದಿರಗಳಿಂದ ಪ್ರೇಕ್ಷಕರು ಹೊರಬಂದಿದ್ದರು. ಪುನೀತ್‌ಗೆ ಗೌರವ ವಿದಾಯ ಸಲ್ಲಿಸುವ ಸಲುವಾಗಿ 'ಭಜರಂಗಿ 2' ನಿರ್ಮಾಪಕರು ಸಿನಿಮಾ ಪ್ರದರ್ಶನವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದರು. 

ಜೀವನದಲ್ಲಿ ಇದೇ ಮೊದಲು ನಾನು 5 ಗಂಟೆ ಶೋ ನೋಡುತ್ತಿರುವುದು: ಲೋಕಿ

ಹೀಗಾಗಿ ಅಭಿಮಾನಿಗಳ ಜತೆ ಸಿನಿಮಾ ನೋಡೋಕೆ ಶಿವಣ್ಣನಿಗೆ ಸಾಧ್ಯವಾಗಿರಲಿಲ್ಲ. ಈ ಕಾರಣಕ್ಕೆ ಅಭಿಮಾನಿಗಳೊಂದಿಗೆ (Fans) ಶಿವಣ್ಣ ಗಾಂಧಿನಗರದ ಅನುಪಮಾ ಚಿತ್ರಮಂದಿರದಲ್ಲಿ 'ಭಜರಂಗಿ 2' ಸಿನಿಮಾವನ್ನು ವೀಕ್ಷಿಸಿದ್ದಾರೆ. ಇನ್ನು ಶಿವಣ್ಣ ತನ್ನ ಇಡೀ ಕುಟುಂಬದೊಂದಿಗೆ ಈ ಚಿತ್ರವನ್ನು ವೀಕ್ಷಿಸಬೇಕಿತ್ತು. ಆದರೆ ಅಪ್ಪು ಅಗಲಿಕೆಯಿಂದ ಅದು ಸಾಧ್ಯವಾಗಿರಲಿಲ್ಲ. ಪತ್ನಿ ಗೀತಾ, ನಿರ್ದೇಶಕ ಎ.ಹರ್ಷ ಹಾಗೂ ಖಳನಾಯಕರಾದ ಸೌರವ್  ಲೋಕಿ ಹಾಗೂ ಚೆಲುವರಾಜು ಜೊತೆಗೆ ಚಿತ್ರಮಂದಿರದಲ್ಲಿ ನೋವಿನಿಂದಲೇ ಶಿವಣ್ಣ 'ಭಜರಂಗಿ 2' ಚಿತ್ರವನ್ನು ವೀಕ್ಷಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more