ಮಣಿಪುರ ಮಹಿಳೆಯರ ಮೇಲಿನ ದೌರ್ಜನ್ಯ: ತಪ್ಪಿತಸ್ಥರ ವಿರುದ್ಧ ಕಠಿಣ ಶಿಕ್ಷೆಗೆ ಬಾಲಿವುಡ್ ಆಗ್ರಹ

ಮಣಿಪುರ ಮಹಿಳೆಯರ ಮೇಲಿನ ದೌರ್ಜನ್ಯ: ತಪ್ಪಿತಸ್ಥರ ವಿರುದ್ಧ ಕಠಿಣ ಶಿಕ್ಷೆಗೆ ಬಾಲಿವುಡ್ ಆಗ್ರಹ

Published : Jul 22, 2023, 10:24 AM IST

ತಪ್ಪಿತಸ್ಥರನ್ನು ಶಿಕ್ಷಿಸಿ ಎಂದು ಬಾಲಿವುಡ್ ಆಗ್ರಹ!
ತಪ್ಪಿತಸ್ಥರಿಗೆ ಘೋರ ಶಿಕ್ಷೆ ಆಗಲಿ ಎಂದ ಅಕ್ಷಯ್.!
ಮಣಿಪುರ ಕ್ರಿಮಿಗಳನ್ನ ಹೊಸಕಿಹಾಕಿ ಎಂದ ಅಧಿರ!

ನಮ್ಮ ದೇಶದಲ್ಲಿ ಮಹಿಳೆಯರ ಸಮಾನತೆ, ಮಹಿಳೆಯರ ರಕ್ಷಣೆ ಬಗ್ಗೆ ಎಂತದ್ದೇ ಕಾನೂನು ಜಾರಿಯಾದ್ರು ಒಮ್ಮೊಮ್ಮೆ ಅದು ಕಾಗದದ ಮೇಲಿನ ಬರಹಕ್ಕೆ ಮಾತ್ರ ಸೀಮಿತವೇನೋ ಎನಿಸುತ್ತೆ. ಯಾಕಂದ್ರೆ ಎಂಥದ್ದೇ ಕಾನೂನು ಜಾರಿಯಲ್ಲಿದ್ರು, ಮಹಿಳೆಯರ ಮೇಲಿನ ದೌರ್ಜನ್ಯ(violence against Manipur women) ಮಾತ್ರ ನಿಲ್ಲುತ್ತಿಲ್ಲ. ಇದೀಗ ಮಣಿಪುರದ(Manipur)  ಬುಡಕಟ್ಟು ಜನಾಂಗದ ಇಬ್ಬರು ಮಹಿಳೆಯರನ್ನ ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ ಅತ್ಯಾಚಾರ ಮಾಡಿದ ವಿಡಿಯೋ ದೇಶವ್ಯಾಪಿ ಹರಿದಾಡ್ತಿದ್ದು ದೊಡ್ಡ ಆಕ್ರೋಶಕ್ಕೆ ಕಾರಣ ಆಗಿದೆ. ಇದೀಗ ಇಡೀ ಬಾಲಿವುಡ್(Bollywood) ಜಗತ್ತು ಈ ದೌರ್ಜನ್ಯದ ಧುರುಳರಿಗೆ ಅತ್ಯಂತ ಕಠಿಣ ಶಿಕ್ಷೆ ಕೊಡಬೇಕು ಅಂತ ಆಗ್ರಹಿಸಿದ್ದಾರೆ. ಬಾಲಿವುಡ್ ಸ್ಟಾರ್ ಕೆಜಿಎಫ್‌ನ ಅಧಿರ ಸಂಜಯ್ ದತ್(Sanjay Dutt) ಮಣಿಪುರ ಪ್ರಕರಣಕ್ಕೆ ಸಿಟ್ಟಾಗಿದ್ದಾರೆ. ಈ ಘಟನೆ ಅತ್ಯಂತ ಹೇಯ ಕೃತ್ಯ, ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಮಹಿಳೆಯರ ಮೇಲಿನ ದೌರ್ಜನ್ಯದ ವಿಡಿಯೋ ನನಗೆ ಅತ್ಯಂತ ನೋವು ತಂದಿದೆ. ತಪ್ಪು ಮಾಡಿದರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಸಂಜಯ್ ದತ್ ಟ್ವೀಟ್ ಮಾಡಿದ್ದಾರೆ. ಅಷ್ಟೆ ಅಲ್ಲ ನಟ ಅಕ್ಷಯ್ ಕುಮಾರ್ ಕೂಡ ಬೇಸರ ಹೊರ ಹಾಕಿದ್ದು, ಮಹಿಳೆಯರ ಮೇಲಿನ ದೌರ್ಜನ್ಯದ ವಿಡಿಯೋ ನೋಡಿ ಬಹಳ ಬೇಸರವಾಯಿತು. ತಪ್ಪಿತಸ್ಥರಿಗೆ ಘೋರ ಶಿಕ್ಷೆ ಆಗಲಿ ಎಂದು ಆಶಿಸುತ್ತೇನೆ ಎಂದು ಅಕ್ಷಯ್‌ಕುಮಾರ್‌ ಬರೆದುಕೊಂಡಿದ್ದಾರೆ. ಇನ್ನೂ ನಟ ರಿತೇಶ್ ದೇಶಮುಖ, ನಿರ್ದೇಶಕ ವಿವೇಕ್ ಅಗ್ನಿಹೋತ್ರಿ, ನಟಿ ಕಿಯಾರಾ ಅಡ್ವಾನಿ, ಜಯಾ ಬಚ್ಚನ್ ಕೂಡ ಈ ಪ್ರಕರಣದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈಗ ಇವರೆಲ್ಲರ ಟ್ವೀಟ್, ಮಣಿಪುರ ಕ್ರಿಮಿಗಳನ್ನ ಶಿಕ್ಷಿಸಿ ಅನ್ನೋ ಅಭಿಯಾನಕ್ಕೆ ಸಾಕ್ಷಿಯಾಗ್ತಿದೆ. 

ಇದನ್ನೂ ವೀಕ್ಷಿಸಿ:  ಸೋತಿರೋ ಪ್ರಭಾಸ್‌ಗೆ ಬಂತು 'ಕಲ್ಕಿ' ಶಕ್ತಿ: ಸಿನಿ ಜಗತ್ತಲ್ಲಿ ಪ್ರಾಜೆಕ್ಟ್ 'K' ಸೌಂಡ್ ಶುರು..!

 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more