ರೇಣುಕಾಸ್ವಾಮಿ ಕೊಲೆ ಪ್ರಕರಣ.. ಚಿಕ್ಕಣ್ಣ ಜಸ್ಟ್ ಮಿಸ್: ದರ್ಶನ್ ಸ್ನೇಹದಲ್ಲಿದ್ದ ನಟನಿಗೆ ಅದೃಷ್ಟ ಕೈ ಹಿಡಿದಿದ್ದು ಹೇಗೆ?

ರೇಣುಕಾಸ್ವಾಮಿ ಕೊಲೆ ಪ್ರಕರಣ.. ಚಿಕ್ಕಣ್ಣ ಜಸ್ಟ್ ಮಿಸ್: ದರ್ಶನ್ ಸ್ನೇಹದಲ್ಲಿದ್ದ ನಟನಿಗೆ ಅದೃಷ್ಟ ಕೈ ಹಿಡಿದಿದ್ದು ಹೇಗೆ?

Published : Jul 22, 2024, 11:40 AM ISTUpdated : Jul 22, 2024, 01:16 PM IST

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಿಲ್ಲಿಂಗ್ ಸ್ಟಾರ್ ಅನ್ನೋ ಪಟ್ಟ ಕಟ್ಟಿಕೊಂಡು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ ನಟ ದರ್ಶನ್. ಈ ಕೊಲೆ ಪ್ರಕರಣದಲ್ಲಿ 17 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಆದ್ರೆ ಇನ್ನು ಕೆಲವರನ್ನ ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ. 

ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿದವರಲ್ಲಿ ನಟ ಚಿಕ್ಕಣ್ಣ(Chikkanna) ಸಹ ಒಬ್ಬರು. ಅಸಲಿಗೆ ದರ್ಶನ್ (Darshan)ಸ್ನೇಹದಲ್ಲಿದ್ದ ಚಿಕ್ಕಣ್ಣ ಸಹ ಆರೋಪಿಗಳಲ್ಲಿ ಒಬ್ಬರಾಗಿ ಜೈಲಿನಲ್ಲಿರಬೇಕಿತ್ತು. ಆದ್ರೆ ಚಿಕ್ಕಣ್ಣನ ಅದೃಷ್ಟ ಚೆನ್ನಾಗಿತ್ತು. ಕೂದಲೆಳೆ ಅಂತರದಲ್ಲಿ ಈ ಪ್ರಕರಣದಿಂದ ಚಿಕ್ಕಣ್ಣ ಬಚಾವ್ ಆಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ (Renukaswamy murder case) ನಡೆಯುವ ಮುಂಚೆ ನಟ ದರ್ಶನ್ ಹಾಗೂ ಇನ್ನೂ ಕೆಲವರು, ಪ್ರಕರಣದ ಮತ್ತೊಬ್ಬ ಆರೋಪಿ ವಿನಯ್ ಒಡೆತನದ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ಕುಡಿದು ಪಾರ್ಟಿ ಮಾಡಿದ್ರು. ಆ ಪಾರ್ಟಿಯಲ್ಲಿ ನಟ ಚಿಕ್ಕಣ್ಣ ಸಹ ಇದ್ರು. ನಟ ದರ್ಶನ್ ಪಟ್ಟಣಗೆರೆ ಶೆಡ್‌ಗೆ ಹೋಗುವಾಗ ಚಿಕ್ಕಣ್ಣರನ್ನು ಸಹ ಕರೆದರಂತೆ. ಆದ್ರೆ ಚಿಕ್ಕಣ್ಣ ದರ್ಶನ್ ಜೊತೆ ಹೋಗಲು ಒಪ್ಪದೆ ತಡವಾಗಿದೆ ಮನೆಗೆ ಹೋಗುತ್ತೇನೆ ಅಂತ ಮನೆಯ ಕಡೆ ಹೊರಟಿದ್ದಾರೆ. ಆ ದಿನ ಚಿಕ್ಕಣ್ಣ ದರ್ಶನ್ ಜೊತೆ ಹೋಗಿದ್ದಿದ್ದರೆ ಚಿಕ್ಕಣ್ಣನ ಸ್ಥಿತಿ ಏನಾಗುತ್ತಿತ್ತು ನೀವೇ ಯೋಚ್ನೆ ಮಾಡಿ. ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ನಲ್ಲಿ ಪಾರ್ಟಿ ಮಾಡುವಾಗ ಅದೇ ಪಾರ್ಟಿಯಲ್ಲಿದ್ದ ಪ್ರದೋಶ್, ಬೇಡವೆಂದರೂ ನಾನೂ ಬರ್ತೀನಿ ಬಾಸ್ ಎಂದು ದರ್ಶನ್ ಜೊತೆಗೆ ಹೋಗಿದ್ದರಂತೆ. ಪಾರ್ಟಿ ನಡೆಯುವಾಗ ನನಗೆ ಕೆಲಸ ಇದೆ ಎಂದು ದರ್ಶನ್ ಪಾರ್ಟಿಯಿಂದ ಹೊರಬಂದರಂತೆ. ಆಗ ಪ್ರದೋಶ್ ಸಹ ಬಾಸ್ ನಾನೂ ಬರ್ತೀನಿ ಅಂತ ದರ್ಶನ್ ಜೊತೆ ಹೋದನಂತೆ. ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಕರೆತಂದಿರುವ ವಿಚಾರ ಪಾರ್ಟಿಯಲ್ಲಿದ್ದ ಯಾರಿಗೂ ಗೊತ್ತಿರಲಿಲ್ಲವಂತೆ. ಆದರೆ ಪ್ರದೋಶ್ ಪಾರ್ಟಿ ಬಳಿಕ ದರ್ಶನ್ ಅನ್ನು ಬಲವಂತ ಮಾಡಿ ಅವರ ಜೊತೆಗೆ ಪಟ್ಟಣಗೆರೆ ಶೆಡ್ಗೆ ಹೋಗಿದ್ದಾನೆ.

ಇದನ್ನೂ ವೀಕ್ಷಿಸಿ:  ಸಾಂಗ್, ಟೀಸರ್, ಟ್ರೈಲರ್‌ಗಾಗಿ ಭರ್ಜರಿ ಓಟಿಂಗ್..! ಪ್ಯಾನ್ ಇಂಡಿಯಾದಲ್ಲಿ 'ಮಾರ್ಟಿನ್' ಮಿಂಚಿಂಗ್..!

04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
Read more