ರೇಣುಕಾಸ್ವಾಮಿ ಕೊಲೆ ಪ್ರಕರಣ.. ಚಿಕ್ಕಣ್ಣ ಜಸ್ಟ್ ಮಿಸ್: ದರ್ಶನ್ ಸ್ನೇಹದಲ್ಲಿದ್ದ ನಟನಿಗೆ ಅದೃಷ್ಟ ಕೈ ಹಿಡಿದಿದ್ದು ಹೇಗೆ?

ರೇಣುಕಾಸ್ವಾಮಿ ಕೊಲೆ ಪ್ರಕರಣ.. ಚಿಕ್ಕಣ್ಣ ಜಸ್ಟ್ ಮಿಸ್: ದರ್ಶನ್ ಸ್ನೇಹದಲ್ಲಿದ್ದ ನಟನಿಗೆ ಅದೃಷ್ಟ ಕೈ ಹಿಡಿದಿದ್ದು ಹೇಗೆ?

Published : Jul 22, 2024, 11:40 AM ISTUpdated : Jul 22, 2024, 01:16 PM IST

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಿಲ್ಲಿಂಗ್ ಸ್ಟಾರ್ ಅನ್ನೋ ಪಟ್ಟ ಕಟ್ಟಿಕೊಂಡು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ ನಟ ದರ್ಶನ್. ಈ ಕೊಲೆ ಪ್ರಕರಣದಲ್ಲಿ 17 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಆದ್ರೆ ಇನ್ನು ಕೆಲವರನ್ನ ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ. 

ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿದವರಲ್ಲಿ ನಟ ಚಿಕ್ಕಣ್ಣ(Chikkanna) ಸಹ ಒಬ್ಬರು. ಅಸಲಿಗೆ ದರ್ಶನ್ (Darshan)ಸ್ನೇಹದಲ್ಲಿದ್ದ ಚಿಕ್ಕಣ್ಣ ಸಹ ಆರೋಪಿಗಳಲ್ಲಿ ಒಬ್ಬರಾಗಿ ಜೈಲಿನಲ್ಲಿರಬೇಕಿತ್ತು. ಆದ್ರೆ ಚಿಕ್ಕಣ್ಣನ ಅದೃಷ್ಟ ಚೆನ್ನಾಗಿತ್ತು. ಕೂದಲೆಳೆ ಅಂತರದಲ್ಲಿ ಈ ಪ್ರಕರಣದಿಂದ ಚಿಕ್ಕಣ್ಣ ಬಚಾವ್ ಆಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ (Renukaswamy murder case) ನಡೆಯುವ ಮುಂಚೆ ನಟ ದರ್ಶನ್ ಹಾಗೂ ಇನ್ನೂ ಕೆಲವರು, ಪ್ರಕರಣದ ಮತ್ತೊಬ್ಬ ಆರೋಪಿ ವಿನಯ್ ಒಡೆತನದ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ಕುಡಿದು ಪಾರ್ಟಿ ಮಾಡಿದ್ರು. ಆ ಪಾರ್ಟಿಯಲ್ಲಿ ನಟ ಚಿಕ್ಕಣ್ಣ ಸಹ ಇದ್ರು. ನಟ ದರ್ಶನ್ ಪಟ್ಟಣಗೆರೆ ಶೆಡ್‌ಗೆ ಹೋಗುವಾಗ ಚಿಕ್ಕಣ್ಣರನ್ನು ಸಹ ಕರೆದರಂತೆ. ಆದ್ರೆ ಚಿಕ್ಕಣ್ಣ ದರ್ಶನ್ ಜೊತೆ ಹೋಗಲು ಒಪ್ಪದೆ ತಡವಾಗಿದೆ ಮನೆಗೆ ಹೋಗುತ್ತೇನೆ ಅಂತ ಮನೆಯ ಕಡೆ ಹೊರಟಿದ್ದಾರೆ. ಆ ದಿನ ಚಿಕ್ಕಣ್ಣ ದರ್ಶನ್ ಜೊತೆ ಹೋಗಿದ್ದಿದ್ದರೆ ಚಿಕ್ಕಣ್ಣನ ಸ್ಥಿತಿ ಏನಾಗುತ್ತಿತ್ತು ನೀವೇ ಯೋಚ್ನೆ ಮಾಡಿ. ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ನಲ್ಲಿ ಪಾರ್ಟಿ ಮಾಡುವಾಗ ಅದೇ ಪಾರ್ಟಿಯಲ್ಲಿದ್ದ ಪ್ರದೋಶ್, ಬೇಡವೆಂದರೂ ನಾನೂ ಬರ್ತೀನಿ ಬಾಸ್ ಎಂದು ದರ್ಶನ್ ಜೊತೆಗೆ ಹೋಗಿದ್ದರಂತೆ. ಪಾರ್ಟಿ ನಡೆಯುವಾಗ ನನಗೆ ಕೆಲಸ ಇದೆ ಎಂದು ದರ್ಶನ್ ಪಾರ್ಟಿಯಿಂದ ಹೊರಬಂದರಂತೆ. ಆಗ ಪ್ರದೋಶ್ ಸಹ ಬಾಸ್ ನಾನೂ ಬರ್ತೀನಿ ಅಂತ ದರ್ಶನ್ ಜೊತೆ ಹೋದನಂತೆ. ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಕರೆತಂದಿರುವ ವಿಚಾರ ಪಾರ್ಟಿಯಲ್ಲಿದ್ದ ಯಾರಿಗೂ ಗೊತ್ತಿರಲಿಲ್ಲವಂತೆ. ಆದರೆ ಪ್ರದೋಶ್ ಪಾರ್ಟಿ ಬಳಿಕ ದರ್ಶನ್ ಅನ್ನು ಬಲವಂತ ಮಾಡಿ ಅವರ ಜೊತೆಗೆ ಪಟ್ಟಣಗೆರೆ ಶೆಡ್ಗೆ ಹೋಗಿದ್ದಾನೆ.

ಇದನ್ನೂ ವೀಕ್ಷಿಸಿ:  ಸಾಂಗ್, ಟೀಸರ್, ಟ್ರೈಲರ್‌ಗಾಗಿ ಭರ್ಜರಿ ಓಟಿಂಗ್..! ಪ್ಯಾನ್ ಇಂಡಿಯಾದಲ್ಲಿ 'ಮಾರ್ಟಿನ್' ಮಿಂಚಿಂಗ್..!

29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
Read more