Martin movie: 'ಮಾರ್ಟಿನ್' ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್! ಇದಕ್ಕೆ ಎಪಿ ಅರ್ಜುನ್, ಉದಯ್ ಕೆ ಮಹ್ತಾ ಸ್ಪಷ್ಟನೆ ಹೀಗಿದೆ?

Martin movie: 'ಮಾರ್ಟಿನ್' ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್! ಇದಕ್ಕೆ ಎಪಿ ಅರ್ಜುನ್, ಉದಯ್ ಕೆ ಮಹ್ತಾ ಸ್ಪಷ್ಟನೆ ಹೀಗಿದೆ?

Published : Apr 21, 2024, 10:29 AM ISTUpdated : Apr 21, 2024, 10:30 AM IST

'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್!
ಗಲಾಟೆಗೆ ಎ.ಪಿ. ಅರ್ಜುನ್ - ಉದಯ್ ಕೆ ಮಹ್ತಾ ಸ್ಪಷ್ಟನೆ..!
ಧ್ರುವ  ಮಾರ್ಟಿನ್ ಬಜೆಟ್ ವಿಷಯಕ್ಕೂ ಆಗಿತ್ತಾ ಕಿತ್ತಾಟ?

ಧ್ರುವ ಸರ್ಜಾ(Druva sarja) ನಟನೆಯ 'ಮಾರ್ಟಿನ್' ಸಿನಿಮಾ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಗಿತ್ತು. ಉದಯ್ ಕೆ. ಮೆಹ್ತಾ(Uday K Mehta) ನಿರ್ಮಾಣದ ಚಿತ್ರಕ್ಕೆ ಎ. ಪಿ ಅರ್ಜುನ್ ಆಕ್ಷನ್ ಕಟ್ ಹೇಳಿರೋ ಈ ಸಿನಿಮಾ ಚುನಾವಣೆ, ಐಪಿಎಲ್ ಭರಾಟೆ ಬಳಿಕ ಪ್ರೇಕ್ಷಕರ ಮುಂದೆ ಬರಲಿದೆ. ಅಷ್ಟರಲ್ಲಾಗಲೇ ಈ ಸಿನಿಮಾ ನಿರ್ಮಾಪಕ ಉದಯ್ ಕೆ ಮೆಹ್ತಾ ಹಾಗೂ ನಿರ್ದೇಶಕ ಎ.ಪಿ ಅರ್ಜುನ್(AP Arjun) ಮಧ್ಯೆ ಎಲ್ಲವೂ ಸರಿ ಇಲ್ಲ. ಇಬ್ಬರು ಕಿತ್ತಾಡಿಕೊಂಡಿದ್ದಾರೆ. ಸಿನಿಮಾ ರಿಲೀಸ್ ಆಗೋದೇ ಡೌಟ್ ಅಂತೆಲ್ಲಾ ಸುದ್ದಿ ಹಬ್ಬಿತ್ತು. ಇದೀಗ ಈ ಕಿರಿಕ್ ಕಹಾನಿಗೆ ಟ್ವಿಸ್ಟ್ ಸಿಕ್ಕಿದೆ. ಇಬ್ಬರೂ ಒಟ್ಟಿಗೆ ಬಂದು ಗಲಾಟೆ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಮಾರ್ಟಿನ್(Martin) ಪ್ಯಾನ್ ಇಂಡಿಯಾ ಸಿನಿಮಾಕ್ಕೆ ಅರ್ಜುನ್ ಸರ್ಜಾ ಕಥೆ ಬರೆದ್ದಾರೆ. ಆದ್ರೆ ಡೈರೆಕ್ಷನ್ ಮಾಡಿರೋದು ಎ.ಪಿ ಅರ್ಜುನ್. ಈ ಸಿನಿಮಾದ ಟೀಸರ್ ರಿಲೀಸ್ ಆಗಿ ಧೂಳೆಬ್ಬಿಸಿದೆ. ಇನ್ನೇನು ಕೆಲವೇ ದಿನಗಳಲ್ಲಿ ಸಿನಿಮಾ ತೆರೆ ಕಾಣಲಿದೆ. ಆದ್ರೆ ಸಿನಿಮಾ ಬಿಡುಗಡೆಗೂ ಮುನ್ನ ನಿರ್ಮಾಪಕ ಉದಯ್‌ಕೆ ಮೆಹ್ತಾ ಹಾಗೂ ನಿರ್ದೇಶಕ ಎ. ಪಿ ಅರ್ಜುನ್ ಮಧ್ಯೆ ಸಂಭಾವನೆ ವಿಚಾರಕ್ಕೆ ಕಿರಿಕ್ ಆಗಿದೆ ಅನ್ನೋ ಗಾಸಿಪ್ ಹಬ್ಬಿತ್ತು. ಈ ವಿಚಾರ ಫಿಲ್ಮ್ ಚೇಂಬರ್ ಮೆಟ್ಟಿಲೇರಿದೆ ಎಂದು ಹೇಳಲಾಗಿತ್ತು. ಮಾರ್ಟಿನ್ ದೊಡ್ಡ ಕ್ಯಾನ್ವಸ್ ಸಿನಿಮಾ. ಈ ಸಿನಿಮಾ ಶುರುವಾಗಿ ಆಗ್ಲೇ ಹತ್ತತ್ರ ಮೂರ ವರ್ಷ ಆಗಿದೆ. ಮೊದಲು ಬರೀ ಕನ್ನಡದಲ್ಲಿ ಶುರುವಾದ ಮಾರ್ಟಿನ್ ಕೊನೆಗೆ ಪ್ಯಾನ್ ಇಂಡಿಯಾ ಸಿನಿಮಾ ಆಗಿ ಬದಲಾಯ್ತು. ಹೀಗಾಗಿ ಇದರ ಬಜೆಟ್ ಗಾತ್ರ ಕೂಡ ದೊಡ್ಡದಾಗಿದೆ. ಈ ಬಜೆಟ್ ಲೈನ್ ಕ್ರಾಸ್ ಆಗಿದ್ದಕ್ಕೂ ನಿರ್ಮಾಪಕ ಉದಯ್ ಕೆ ಮೆಹ್ತಾ ಸಿಟ್ಟಾಗಿದ್ರು ಅಂತ ಸುದ್ದಿ ಇದೆ.  ಆದರೆ ಈಗ ಈ ಎಲ್ಲಾ ವಾದ ಪ್ರತಿವಾದ ಕಿರಿಕ್ ಗಾಸಿಪ್ಗೆ ಎಪಿ ಅರ್ಜುನ್ ಹಾಗ ಉದಯ್ ಕೆ ಮೆಹ್ತಾ ತೆರೆ ಎಳೆದಿದ್ದಾರೆ. ನಮ್ಮ ಮಧ್ಯೆ ಎಲ್ಲವೂ ಸರಿ ಇದೆ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  ನಾರಿಶಕ್ತಿಯ ಆಶೀರ್ವಾದ ಇದ್ದರೆ ಸಾಕು ಗೆಲುವು ಶತಃಸಿದ್ಧ..ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗೆ ಮೋದಿ ಗ್ಯಾರಂಟಿ ಕೌಂಟರ್..!

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more