Puneeth Rajkumar : ಅಪ್ಪು ನಿಧನಕ್ಕೆ ಕೋವಿಡ್ ಲಸಿಕೆ ಕಾರಣವಾಯ್ತಾ? ಫೋಟೋ ಶೇರ್‌ ಮಾಡಿ ಫ್ಯಾನ್ಸ್ ಮತ್ತೆ ಆಕ್ರೋಶ!

Puneeth Rajkumar : ಅಪ್ಪು ನಿಧನಕ್ಕೆ ಕೋವಿಡ್ ಲಸಿಕೆ ಕಾರಣವಾಯ್ತಾ? ಫೋಟೋ ಶೇರ್‌ ಮಾಡಿ ಫ್ಯಾನ್ಸ್ ಮತ್ತೆ ಆಕ್ರೋಶ!

Published : May 03, 2024, 10:57 AM ISTUpdated : May 03, 2024, 10:58 AM IST

ಅಪ್ಪು ನಮ್ಮನ್ನ ಇಷ್ಟು ಬೇಗ ಬಿಟ್ಟು ಹೋಗೋಕೆ ಕಾರಣ ಏನು ಅಂತ ಅಭಿಮಾನಿಗಳು ಒಂದು ಫೋಟೋವನ್ನ ವೈರಲ್ ಮಾಡುತ್ತಾ ಹೇಳುತ್ತಿದ್ದಾರೆ. ಅದೇ ಪುನೀತ್ ರಾಜ್‌ಕುಮಾರ್ ಕೋವಿಡ್ ವ್ಯಾಕ್ಸಿನ್ ಹಾಕಿಕೊಂಡಿದ್ದ ಆ ಫೋಟೋ. 

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಆಗಿ ಮೂರು ವರ್ಷ ಆಗಿದೆ. ಅಪ್ಪು ಸಾವು ಇಂದಿಗೂ ನುಂಗಲಾರದ ತುತ್ತು. ಈ ಘಟನೆ ಆಗೋಕೆ ಕಾರಣ ಏನು ಅನ್ನೋ ಹುಡುಕಾಟ ಅಂದಿನಿಂದ ಇಂದಿನವರೆಗೂ ನಡೆಯುತ್ತಲೇ ಇದೆ. 2021ರ ಏಪ್ರಿಲ್ 07ರಂದು ಪುನೀತ್ ರಾಜ್‌ಕುಮಾರ್ ಅವರು ಮೊದಲ ವ್ಯಾಕ್ಸಿನ್ ತೆಗೆದುಕೊಂಡಿದ್ದರು. ವ್ಯಾಕ್ಸೀನ್ ತಗೊಂಡ ಅಪ್ಪು ಫೋಟೋ ಶೇರ್ (Photo) ಮಾಡಿ ನಾನು ಮೊದಲ ವಾಕ್ಸಿನೇಷನ್ ತಗೊಂಡಿದ್ದೇನೆ. 45 ವರ್ಷ ಮೇಲ್ಪಟ್ಟವರು ವಾಕ್ಸೀನ್ ತೆಗೆದುಕೊಳ್ಳಬಹುದು ಎಂದು ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಈಗ ವೈರಲ್ ಮಾಡುತ್ತಿರೋ ಫ್ಯಾನ್ಸ್(Fans) ಕೋವಿಶೀಲ್ಡ್ ವ್ಯಾಕ್ಸಿನ್‌ನಿಂದ (Covid Vaccine) ಸೈಡ್ ಎಫೆಕ್ಟ್ ಆಗಿ ನಾವು ಪುನೀತ್ ರಾಜ್‌ಕುಮಾರ್(Puneeth Rajkumar) ಅವರನ್ನು ಕಳೆದುಕೊಂಡಿದ್ದೀವಿ ಅಂತ ಟ್ರೆಂಡ್ ಮಾಡುತ್ತಿದ್ದಾರೆ. ಇತ್ತೀಚೆಗೆ ಕೋವಿಶೀಲ್ಡ್ ವ್ಯಾಕ್ಸಿನ್ ತಯಾರಿಸಿದ ಅಸ್ಟ್ರಾಜೆನೆಕಾ ಕಂಪನಿಯು ಕೋವಿಡ್ ಲಸಿಕೆಯ ಸೈಡ್ ಎಫೆಕ್ಟ್ ಬಗ್ಗೆ ಮಾಹಿತಿ ನೀಡಿದೆ. ಲಂಡನ್ ಕೋರ್ಟ್‌ನಲ್ಲಿ ಅಸ್ಟ್ರಾಜೆನೆಕಾ ಕಂಪನಿ(AstraZeneca Company) ತಯಾರಿಸಿದ ಕೋವಿಶೀಲ್ಡ್‌ ಲಸಿಕೆಯಿಂದ ಅಪರೂಪದ ಪ್ರಕರಣದಲ್ಲಿ ಸೈಡ್ ಎಫೆಕ್ಟ್ ಇದೆ ಎಂದು ಒಪ್ಪಿಕೊಂಡಿದೆ. ಹೀಗಾಗಿ ಈಗ ಅಪ್ಪು ಸಾವಿನ ವಿಚಾರ ಮತ್ತೆ ಟಾಕ್ ಆಗುತ್ತಿದ್ದು, ಕೋವಿಡ್ ಲಸಿಕೆಯೇ ಇದಕ್ಕೆಲ್ಲಾ ಕಾರಣ ಅಂತ ಸಿಟ್ಟು ಹೊರಹಾಕುತ್ತಿದ್ದಾರೆ ಫ್ಯಾನ್ಸ್.

ಇದನ್ನೂ ವೀಕ್ಷಿಸಿ:  ಯಶ್ ಜೊತೆ ಮತ್ತೆ ಪೈಪೋಟಿಗೆ ಇಳಿದ ಅಲ್ಲು ಅರ್ಜುನ್! ಕೆಜಿಎಫ್2 ದಾಖಲೆ ಮುರಿಯಲು ಪುಷ್ಪ2 ದೊಡ್ಡ ಪ್ಲ್ಯಾನ್!

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more