ಲೋಕಸಭೆ ಎಲೆಕ್ಷನ್‌ನಲ್ಲಿ ಡಾಲಿ ಧನಂಜಯ್ ಸೌಂಡು..! ಚುನಾವಣಾ ಅಖಾಡಕ್ಕೆ ಇಳಿತಾರಾ ನಟ ರಾಕ್ಷಸ ?

ಲೋಕಸಭೆ ಎಲೆಕ್ಷನ್‌ನಲ್ಲಿ ಡಾಲಿ ಧನಂಜಯ್ ಸೌಂಡು..! ಚುನಾವಣಾ ಅಖಾಡಕ್ಕೆ ಇಳಿತಾರಾ ನಟ ರಾಕ್ಷಸ ?

Published : Feb 23, 2024, 09:48 AM IST

ಸ್ಯಾಂಡಲ್‌ವುಡ್‌ನ ನಟ ರಾಕ್ಷಸ ಧನಂಜಯ್ ಚಿತ್ರರಂಗದಲ್ಲಿ ಈಗ ಪೀಕ್‌ನಲ್ಲಿದ್ದಾರೆ. ಡಾಲಿ ಮುಟ್ಟಿದ್ದೆಲ್ಲಾ ಚಿನ್ನ ಆಗ್ತಿದೆ. ಸಕ್ಸಸ್ ಶಿಕರದಲ್ಲಿರೋ ಧನಂಜಯ್ ಬಗ್ಗೆ ಈಗ ಟಾಪ್ ಆಫ್ ದಿ ಮ್ಯಾಟರ್ ಆಗಿರೋದು ಧನಂಜಯ್ ರಾಜಕೀಯಕ್ಕೆ ಬರ್ತಾರೆ ಅನ್ನೋದು. ಈ ಭಾರಿ ಲೋಕಸಭೆ ಎಲೆಕ್ಷನ್‌ನಲ್ಲಿ ಧನಂಜಯ್ ಸೌಂಡ್ ಮಾಡ್ತಾರಂತೆ.

ನಟ ಧನಂಜಯ್‌ ಹೆಸರು ರಾಜಕೀಯ ಪಡಸಾಲೆಯಲ್ಲಿ ಸದ್ದು ಮಾಡುತ್ತಿದೆ. ಲೋಕಸಭಾ ಚುನಾವಣೆ(Loksabha) ಹತ್ತಿರವಾಗುತ್ತಿರುವ ಈ ಹೊತ್ತಿನಲ್ಲಿ ನಟ ಧನಂಜಯ್(Dhananjaya) ರಾಜಕೀಯಕ್ಕೆ ಧುಮುಕಲಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ, ಧನಂಜಯ್ ಅವರನ್ನ ಕಾಂಗ್ರೆಸ್ ಮುಖಂಡರು ಸಂಪರ್ಕ ಮಾಡಿದ್ದು, ಮೈಸೂರು(Mysore) ಅಥವಾ ಕೊಡಗು (Kodagu)ಲೋಕಸಭೆ ಕ್ಷೇತ್ರಕ್ಕೆ ಧನಂಜಯ್ ಅಭ್ಯರ್ಥಿ ಆಗಬೇಕು ಅಂತ ಕಾಂಗ್ರೇಸ್ ಆಫರ್ ಮಾಡಿದೆ ಅಂತೆಲ್ಲಾ ಸುದ್ದಿಯಾಗಿದೆ. ಡಾಲಿ ಲೋಕಸಭೆ ಎಲೆಕ್ಷನ್ ಮೂಲಕ ರಾಜಕೀಯ ರಂಗ ಪ್ರವೇಶ ಆಗ್ತಾರೆ ಅನ್ನೋ ಸುದ್ದಿಗೆ ಉತ್ತರ ಕೊಟ್ಟಿದ್ದಾರೆ. ನಾನು ಹೈದರಾಬಾದ್‌ನಲ್ಲಿ ಕೆಲಸದಲ್ಲಿ. ಹೋಗಿ ಬರುವಷ್ಟರಲ್ಲಿ ನನ್ನನ್ನು ಎಲೆಕ್ಷನ್‌ಗೆ ನಿಲ್ಲಿಸಿ, ನನಗೆ ಟಿಕೆಟ್ ಕೊಡಿಸಿದ್ದಾರೆ. ನಾನು ಸಿನಿಮಾ ಮಾಡ್ತೀನಿ. ಸಿನಿಮಾ ಮಾಡಬೇಕು. ನಟನಾಗಿ ತುಂಬಾ ಕನಸು ಕಟ್ಟಿಕೊಂಡಿದ್ದೇನೆ. ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಆಲೋಚನೆ ಇಲ್ಲ. ನಾನೊಬ್ಬ ಕಾಮನ್ ಮ್ಯಾನ್. ಕಾಮನ್ ಮ್ಯಾನ್ ಆಗಿಯೇ ಇರುತ್ತೇನೆ ಎಂದು ಡಾಲಿ ಧನಂಜಯ್ ಮೈಸೂರಿನಲ್ಲಿ ಹೇಳಿದ್ದಾರೆ. ನಟ ರಾಕ್ಷಸ ಡಾಲಿ ಧನಂಜಯ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ. ಮೈಸೂರಿನಲ್ಲಿ ಕಾಲೇಜು ಶಿಕ್ಷಣ ಪಡೆದಿರುವ ಡಾಲಿ ಧನಂಜಯ್ ಅವರಿಗೆ ಸಾಂಸ್ಕೃತಿಕ ನಗರಿಯಲ್ಲಿ ದೊಡ್ಡ ಫ್ಯಾನ್ ಫಾಲೋವಿಂಗ್ ಇದೆ. ಡಾಲಿ ಧನಂಜಯ್ ಸಾಮಾಜಿಕ ಕಳಕಳಿ ಹೊಂದಿರುವ ನಟ. ಕನ್ನಡ ಭಾಷೆ, ನಾಡು, ನುಡಿ ಬಗ್ಗೆ ಅಭಿಮಾನ ಹೊಂದಿದ್ದಾರೆ. ಡಾಲಿ ಹೇಳಿದ್ದ ‘ಬಡವರ ಮಕ್ಳು ಬೆಳೀಬೇಕು ಕಣ್ರಯ್ಯ’ ಮಾತು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು.

ಇದನ್ನೂ ವೀಕ್ಷಿಸಿ:  Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?

04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
Read more