ಲೋಕಸಭೆ ಎಲೆಕ್ಷನ್‌ನಲ್ಲಿ ಡಾಲಿ ಧನಂಜಯ್ ಸೌಂಡು..! ಚುನಾವಣಾ ಅಖಾಡಕ್ಕೆ ಇಳಿತಾರಾ ನಟ ರಾಕ್ಷಸ ?

ಲೋಕಸಭೆ ಎಲೆಕ್ಷನ್‌ನಲ್ಲಿ ಡಾಲಿ ಧನಂಜಯ್ ಸೌಂಡು..! ಚುನಾವಣಾ ಅಖಾಡಕ್ಕೆ ಇಳಿತಾರಾ ನಟ ರಾಕ್ಷಸ ?

Published : Feb 23, 2024, 09:48 AM IST

ಸ್ಯಾಂಡಲ್‌ವುಡ್‌ನ ನಟ ರಾಕ್ಷಸ ಧನಂಜಯ್ ಚಿತ್ರರಂಗದಲ್ಲಿ ಈಗ ಪೀಕ್‌ನಲ್ಲಿದ್ದಾರೆ. ಡಾಲಿ ಮುಟ್ಟಿದ್ದೆಲ್ಲಾ ಚಿನ್ನ ಆಗ್ತಿದೆ. ಸಕ್ಸಸ್ ಶಿಕರದಲ್ಲಿರೋ ಧನಂಜಯ್ ಬಗ್ಗೆ ಈಗ ಟಾಪ್ ಆಫ್ ದಿ ಮ್ಯಾಟರ್ ಆಗಿರೋದು ಧನಂಜಯ್ ರಾಜಕೀಯಕ್ಕೆ ಬರ್ತಾರೆ ಅನ್ನೋದು. ಈ ಭಾರಿ ಲೋಕಸಭೆ ಎಲೆಕ್ಷನ್‌ನಲ್ಲಿ ಧನಂಜಯ್ ಸೌಂಡ್ ಮಾಡ್ತಾರಂತೆ.

ನಟ ಧನಂಜಯ್‌ ಹೆಸರು ರಾಜಕೀಯ ಪಡಸಾಲೆಯಲ್ಲಿ ಸದ್ದು ಮಾಡುತ್ತಿದೆ. ಲೋಕಸಭಾ ಚುನಾವಣೆ(Loksabha) ಹತ್ತಿರವಾಗುತ್ತಿರುವ ಈ ಹೊತ್ತಿನಲ್ಲಿ ನಟ ಧನಂಜಯ್(Dhananjaya) ರಾಜಕೀಯಕ್ಕೆ ಧುಮುಕಲಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ, ಧನಂಜಯ್ ಅವರನ್ನ ಕಾಂಗ್ರೆಸ್ ಮುಖಂಡರು ಸಂಪರ್ಕ ಮಾಡಿದ್ದು, ಮೈಸೂರು(Mysore) ಅಥವಾ ಕೊಡಗು (Kodagu)ಲೋಕಸಭೆ ಕ್ಷೇತ್ರಕ್ಕೆ ಧನಂಜಯ್ ಅಭ್ಯರ್ಥಿ ಆಗಬೇಕು ಅಂತ ಕಾಂಗ್ರೇಸ್ ಆಫರ್ ಮಾಡಿದೆ ಅಂತೆಲ್ಲಾ ಸುದ್ದಿಯಾಗಿದೆ. ಡಾಲಿ ಲೋಕಸಭೆ ಎಲೆಕ್ಷನ್ ಮೂಲಕ ರಾಜಕೀಯ ರಂಗ ಪ್ರವೇಶ ಆಗ್ತಾರೆ ಅನ್ನೋ ಸುದ್ದಿಗೆ ಉತ್ತರ ಕೊಟ್ಟಿದ್ದಾರೆ. ನಾನು ಹೈದರಾಬಾದ್‌ನಲ್ಲಿ ಕೆಲಸದಲ್ಲಿ. ಹೋಗಿ ಬರುವಷ್ಟರಲ್ಲಿ ನನ್ನನ್ನು ಎಲೆಕ್ಷನ್‌ಗೆ ನಿಲ್ಲಿಸಿ, ನನಗೆ ಟಿಕೆಟ್ ಕೊಡಿಸಿದ್ದಾರೆ. ನಾನು ಸಿನಿಮಾ ಮಾಡ್ತೀನಿ. ಸಿನಿಮಾ ಮಾಡಬೇಕು. ನಟನಾಗಿ ತುಂಬಾ ಕನಸು ಕಟ್ಟಿಕೊಂಡಿದ್ದೇನೆ. ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಆಲೋಚನೆ ಇಲ್ಲ. ನಾನೊಬ್ಬ ಕಾಮನ್ ಮ್ಯಾನ್. ಕಾಮನ್ ಮ್ಯಾನ್ ಆಗಿಯೇ ಇರುತ್ತೇನೆ ಎಂದು ಡಾಲಿ ಧನಂಜಯ್ ಮೈಸೂರಿನಲ್ಲಿ ಹೇಳಿದ್ದಾರೆ. ನಟ ರಾಕ್ಷಸ ಡಾಲಿ ಧನಂಜಯ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ. ಮೈಸೂರಿನಲ್ಲಿ ಕಾಲೇಜು ಶಿಕ್ಷಣ ಪಡೆದಿರುವ ಡಾಲಿ ಧನಂಜಯ್ ಅವರಿಗೆ ಸಾಂಸ್ಕೃತಿಕ ನಗರಿಯಲ್ಲಿ ದೊಡ್ಡ ಫ್ಯಾನ್ ಫಾಲೋವಿಂಗ್ ಇದೆ. ಡಾಲಿ ಧನಂಜಯ್ ಸಾಮಾಜಿಕ ಕಳಕಳಿ ಹೊಂದಿರುವ ನಟ. ಕನ್ನಡ ಭಾಷೆ, ನಾಡು, ನುಡಿ ಬಗ್ಗೆ ಅಭಿಮಾನ ಹೊಂದಿದ್ದಾರೆ. ಡಾಲಿ ಹೇಳಿದ್ದ ‘ಬಡವರ ಮಕ್ಳು ಬೆಳೀಬೇಕು ಕಣ್ರಯ್ಯ’ ಮಾತು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು.

ಇದನ್ನೂ ವೀಕ್ಷಿಸಿ:  Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more