ಲೋಕಸಭೆ ಎಲೆಕ್ಷನ್‌ನಲ್ಲಿ ಡಾಲಿ ಧನಂಜಯ್ ಸೌಂಡು..! ಚುನಾವಣಾ ಅಖಾಡಕ್ಕೆ ಇಳಿತಾರಾ ನಟ ರಾಕ್ಷಸ ?

ಲೋಕಸಭೆ ಎಲೆಕ್ಷನ್‌ನಲ್ಲಿ ಡಾಲಿ ಧನಂಜಯ್ ಸೌಂಡು..! ಚುನಾವಣಾ ಅಖಾಡಕ್ಕೆ ಇಳಿತಾರಾ ನಟ ರಾಕ್ಷಸ ?

Published : Feb 23, 2024, 09:48 AM IST

ಸ್ಯಾಂಡಲ್‌ವುಡ್‌ನ ನಟ ರಾಕ್ಷಸ ಧನಂಜಯ್ ಚಿತ್ರರಂಗದಲ್ಲಿ ಈಗ ಪೀಕ್‌ನಲ್ಲಿದ್ದಾರೆ. ಡಾಲಿ ಮುಟ್ಟಿದ್ದೆಲ್ಲಾ ಚಿನ್ನ ಆಗ್ತಿದೆ. ಸಕ್ಸಸ್ ಶಿಕರದಲ್ಲಿರೋ ಧನಂಜಯ್ ಬಗ್ಗೆ ಈಗ ಟಾಪ್ ಆಫ್ ದಿ ಮ್ಯಾಟರ್ ಆಗಿರೋದು ಧನಂಜಯ್ ರಾಜಕೀಯಕ್ಕೆ ಬರ್ತಾರೆ ಅನ್ನೋದು. ಈ ಭಾರಿ ಲೋಕಸಭೆ ಎಲೆಕ್ಷನ್‌ನಲ್ಲಿ ಧನಂಜಯ್ ಸೌಂಡ್ ಮಾಡ್ತಾರಂತೆ.

ನಟ ಧನಂಜಯ್‌ ಹೆಸರು ರಾಜಕೀಯ ಪಡಸಾಲೆಯಲ್ಲಿ ಸದ್ದು ಮಾಡುತ್ತಿದೆ. ಲೋಕಸಭಾ ಚುನಾವಣೆ(Loksabha) ಹತ್ತಿರವಾಗುತ್ತಿರುವ ಈ ಹೊತ್ತಿನಲ್ಲಿ ನಟ ಧನಂಜಯ್(Dhananjaya) ರಾಜಕೀಯಕ್ಕೆ ಧುಮುಕಲಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ, ಧನಂಜಯ್ ಅವರನ್ನ ಕಾಂಗ್ರೆಸ್ ಮುಖಂಡರು ಸಂಪರ್ಕ ಮಾಡಿದ್ದು, ಮೈಸೂರು(Mysore) ಅಥವಾ ಕೊಡಗು (Kodagu)ಲೋಕಸಭೆ ಕ್ಷೇತ್ರಕ್ಕೆ ಧನಂಜಯ್ ಅಭ್ಯರ್ಥಿ ಆಗಬೇಕು ಅಂತ ಕಾಂಗ್ರೇಸ್ ಆಫರ್ ಮಾಡಿದೆ ಅಂತೆಲ್ಲಾ ಸುದ್ದಿಯಾಗಿದೆ. ಡಾಲಿ ಲೋಕಸಭೆ ಎಲೆಕ್ಷನ್ ಮೂಲಕ ರಾಜಕೀಯ ರಂಗ ಪ್ರವೇಶ ಆಗ್ತಾರೆ ಅನ್ನೋ ಸುದ್ದಿಗೆ ಉತ್ತರ ಕೊಟ್ಟಿದ್ದಾರೆ. ನಾನು ಹೈದರಾಬಾದ್‌ನಲ್ಲಿ ಕೆಲಸದಲ್ಲಿ. ಹೋಗಿ ಬರುವಷ್ಟರಲ್ಲಿ ನನ್ನನ್ನು ಎಲೆಕ್ಷನ್‌ಗೆ ನಿಲ್ಲಿಸಿ, ನನಗೆ ಟಿಕೆಟ್ ಕೊಡಿಸಿದ್ದಾರೆ. ನಾನು ಸಿನಿಮಾ ಮಾಡ್ತೀನಿ. ಸಿನಿಮಾ ಮಾಡಬೇಕು. ನಟನಾಗಿ ತುಂಬಾ ಕನಸು ಕಟ್ಟಿಕೊಂಡಿದ್ದೇನೆ. ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಆಲೋಚನೆ ಇಲ್ಲ. ನಾನೊಬ್ಬ ಕಾಮನ್ ಮ್ಯಾನ್. ಕಾಮನ್ ಮ್ಯಾನ್ ಆಗಿಯೇ ಇರುತ್ತೇನೆ ಎಂದು ಡಾಲಿ ಧನಂಜಯ್ ಮೈಸೂರಿನಲ್ಲಿ ಹೇಳಿದ್ದಾರೆ. ನಟ ರಾಕ್ಷಸ ಡಾಲಿ ಧನಂಜಯ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ. ಮೈಸೂರಿನಲ್ಲಿ ಕಾಲೇಜು ಶಿಕ್ಷಣ ಪಡೆದಿರುವ ಡಾಲಿ ಧನಂಜಯ್ ಅವರಿಗೆ ಸಾಂಸ್ಕೃತಿಕ ನಗರಿಯಲ್ಲಿ ದೊಡ್ಡ ಫ್ಯಾನ್ ಫಾಲೋವಿಂಗ್ ಇದೆ. ಡಾಲಿ ಧನಂಜಯ್ ಸಾಮಾಜಿಕ ಕಳಕಳಿ ಹೊಂದಿರುವ ನಟ. ಕನ್ನಡ ಭಾಷೆ, ನಾಡು, ನುಡಿ ಬಗ್ಗೆ ಅಭಿಮಾನ ಹೊಂದಿದ್ದಾರೆ. ಡಾಲಿ ಹೇಳಿದ್ದ ‘ಬಡವರ ಮಕ್ಳು ಬೆಳೀಬೇಕು ಕಣ್ರಯ್ಯ’ ಮಾತು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು.

ಇದನ್ನೂ ವೀಕ್ಷಿಸಿ:  Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more