ದರ್ಶನ್ ಬೇಲ್​ ಭವಿಷ್ಯ ಸದ್ಯದಲ್ಲೇ ನಿರ್ಧಾರ: ಪವಿತ್ರಾ ಗೌಡ ಲಿಖಿತ ವಾದದಲ್ಲಿ ಏನಿದೆ?

ದರ್ಶನ್ ಬೇಲ್​ ಭವಿಷ್ಯ ಸದ್ಯದಲ್ಲೇ ನಿರ್ಧಾರ: ಪವಿತ್ರಾ ಗೌಡ ಲಿಖಿತ ವಾದದಲ್ಲಿ ಏನಿದೆ?

Published : Aug 07, 2025, 12:04 PM IST

ಪವಿತ್ರಾ ತನಗೆ ದರ್ಶನ್ ಬಿಟ್ರೆ ಉಳಿದ ಆರೋಪಿಗಳ ಪರಿಚಯವೇ ಇಲ್ಲ. ತನಗೆ ಮಗಳು ಮತ್ತು ವಯಸ್ಸಾದ ತಾಯಿಯನ್ನ ನೋಡಿಕೊಳ್ಳುವ ಜವಾಬ್ದಾರಿ ಇದ್ದು ಬೇಲ್ ರದ್ದು ಮಾಡಬೇಡಿ ಅಂತ ವಿನಂತಿಸಿಕೊಂಡಿದ್ದಾಳೆ.

ದರ್ಶನ್ & ಗ್ಯಾಂಗ್​ನ ಬೇಲ್ ಭವಿಷ್ಯ ನಿರ್ಧಾರವಾಗುವ ಸಮಯ ಬಂದಿದೆ. ಸುಪ್ರೀಂ ಕೋರ್ಟ್​ಗೆ ಡಿ ಗ್ಯಾಂಗ್ ಮತ್ತು ಸರ್ಕಾರದ ಪರ ಲಿಖಿತ ವಾದ ಸಲ್ಲಿಕೆಯಾಗಿದ್ದು ಇನ್ನೇನು ಅಂತಿಮ ತೀರ್ಪು ಬರೋದು ಮಾತ್ರ ಬಾಕಿ ಇದೆ. ಹಾಗಾದ್ರೆ ಏನಾಗಲಿದೆ ದಾಸನ ಬೇಲ್ ಭವಿಷ್ಯ.. ವಾಚ್ ದಿಸ್ ಸ್ಟೋರಿ. ರೇಣುಕಾಸ್ವಾಮಿ ಮರ್ಡರ್ ಕೇಸ್​​ನಲ್ಲಿ ದರ್ಶನ್ ಅಂಡ್​​ ಗ್ಯಾಂಗ್​ಗೆ ನೀಡಿರುವ ಬೇಲ್ ರದ್ದು ಮಾಡಬೇಕು ಅಂತ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಸರ್ಕಾರ ಮತ್ತು ದರ್ಶನ್​  ಗ್ಯಾಂಗ್​ಗೆ ಲಿಖಿತ ವಾದ ಸಲ್ಲಿಸೋಕೆ ಸುಪ್ರೀಂ ಕೋರ್ಟ್ ಸೂಚನೆ ಕೊಟ್ಟಿತ್ತು. ಇದೀಗ ಲಿಖಿತ ವಾದ ಕೋರ್ಟ್​ಗೆ ತಲುಪಿದ್ದು ಅತೀ ಶಿಘ್ರದಲ್ಲೇ ಅಂತಿಮ ತೀರ್ಪು ಹೊರಬೀಳಲಿದೆ.  ಹೌದು ಪೊಲೀಸ್ ತನಿಖೆಯ ಲೋಪಗಳನ್ನು ಉಲ್ಲೇಖಿಸಿ ದರ್ಶನ್ ಪರ ವಕೀಲರು ಲಿಖಿತ ವಾದವನ್ನ ಸಲ್ಲಿಸಿದ್ದಾರೆ. ಇನ್ನೂ ಪವಿತ್ರಾ ಗೌಡ ಪರವಾಗಿ ಪ್ರತ್ಯೇಕವಾಗಿ ವಾದಮಂಡಿಸಲಾಗಿದೆ.

ಹೌದು ಪವಿತ್ರಾ ತನಗೆ ದರ್ಶನ್ ಬಿಟ್ರೆ ಉಳಿದ ಆರೋಪಿಗಳ ಪರಿಚಯವೇ ಇಲ್ಲ. ತನಗೆ ಮಗಳು ಮತ್ತು ವಯಸ್ಸಾದ ತಾಯಿಯನ್ನ ನೋಡಿಕೊಳ್ಳುವ ಜವಾಬ್ದಾರಿ ಇದ್ದು ಬೇಲ್ ರದ್ದು ಮಾಡಬೇಡಿ ಅಂತ ವಿನಂತಿಸಿಕೊಂಡಿದ್ದಾಳೆ. ಆದ್ರೆ ಪೊಲೀಸರು ಕೂಡ ಈ ಕೊಲೆ ಆರೋಪಿಗಳ   ಬೇಲ್ ಯಾಕೆ ರದ್ದು ಮಾಡಬೇಕು ಅನ್ನೋದಕ್ಕೆ ಲಿಖಿತ ಕಾರಣಗಳನ್ನ ಕೊಟ್ಟಿದ್ದಾರೆ. ದರ್ಶನ್ ಮತ್ತು ಇತರ ಆರೋಪಿಗಳ ಬೇಲ್​ನ ಯಾಕೆ ರದ್ದು ಮಾಡಬೇಕು ಅನ್ನೋದನ್ನ ಲಿಖಿತ ರೂಪದಲ್ಲಿ ಸ್ಪಷ್ಟವಾಗಿ ವಿವರಿಸಿದ್ದಾರೆ ಪೊಲೀಸರು. ಸದ್ಯ ಎರಡೂ ಕಡೆಯ ವಾದವನ್ನ ಪಡೆದುಕೊಂಡಿರೋ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸೋದು ಮಾತ್ರ ಬಾಕಿ ಉಳಿದಿದೆ. ಹೌದು ಸುಪ್ರೀಂ ಕೋರ್ಟ್​ನಲ್ಲಿ ಲಿಖಿತ ವಾದ ಮಂಡನೆ ಆದ ಬೆನ್ನಲ್ಲೇ ದರ್ಶನ್ ಮೈಸೂರಿನ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದಾರೆ. ಬೇಲ್ ರದ್ದಾಗುವ ಭೀತಿಯಲ್ಲಿರೋ ದರ್ಶನ್ ‘ತನ್ನನ್ನ ದೇವರೇ ಕಾಪಾಡಬೇಕು’ ಅಂತ  ದೇವಸ್ಥಾನಗಳಿಗೆ ಅಲೀತಾ ಇದ್ದಾರೆ. ಆದ್ರೆ ನ್ಯಾಯದೇಗುಲ ಏನು ತೀರ್ಪು ಕೊಡುತ್ತೆ ಅನ್ನೋದರ ಮೇಲೆ ಡಿ ಗ್ಯಾಂಗ್ ಭವಿಷ್ಯ ನಿಂತುಕೊಂಡಿದೆ.

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more