ಪ್ರೆಸ್‌ಮೀಟ್‌ನಲ್ಲಿ  ಯುದ್ಧಕ್ಕೆ ರೆಡಿ ಅಂದಿದ್ದೇಕೆ? ಡಿಸೆಂಬರ್ ಮೇಲೆ ಕಣ್ಣಿಟ್ಟ ಧ್ರುವ, ದರ್ಶನ್!

ಪ್ರೆಸ್‌ಮೀಟ್‌ನಲ್ಲಿ ಯುದ್ಧಕ್ಕೆ ರೆಡಿ ಅಂದಿದ್ದೇಕೆ? ಡಿಸೆಂಬರ್ ಮೇಲೆ ಕಣ್ಣಿಟ್ಟ ಧ್ರುವ, ದರ್ಶನ್!

Published : May 28, 2024, 09:09 AM IST

ಸ್ಯಾಂಡಲ್‌ವುಡ್‌ ಮತ್ತೆ ಆಕ್ಟೀವ್ ಆಗುತ್ತಿದೆ. ಸ್ಟಾರ್‌ಗಳ ಸಿನಿಮಾಗಳು ರಿಲೀಸ್‌ಗೆ ರೆಡಿ ಆಗುತ್ತಿವೆ. ದರ್ಶನ್ ಡೆವಿಲ್ ಚಿತ್ರ ಡಿಸೆಂಬರ್‌ನಲ್ಲಿ ರಿಲೀಸ್ ಎಂದು ಇತ್ತೀಚೆಗಷ್ಟೆ ಚಿತ್ರತಂಡ ಅನೌನ್ಸ್ ಮಾಡಿತ್ತು. ಇದೀಗ ಧ್ರುವ ಸರ್ಜಾ ಕೆಡಿ ಸಿನಿಮಾ ಕೂಡ  ಡಿಸೆಂಬರ್‌ನಲ್ಲೇ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಅನೌನ್ಸ್ ಮಾಡಿ ದೊಡ್ಡ ಸುದ್ದಿಗೆ ಕಾರಣವಾಗಿದೆ.

ಸುಮಾರು ಮೂರು ವರ್ಷಗಳ ಬಳಿಕ ನಟ ಧ್ರುವ ಸರ್ಜಾ(Dhruva Sarja) ನಟನೆಯ ಎರಡು ಸಿನಿಮಾಗಳು ರಿಲೀಸ್ ಆಗುತ್ತಿವೆ. ‘ಮಾರ್ಟಿನ್’ ಹಾಗೂ ‘ಕೆಡಿ’ ಈ ಎರಡೂ ಸಿನಿಮಾಗಳು ಪ್ಯಾನ್ ಇಂಡಿಯಾ ಸಿನಿಮಾಗಳಾಗಿವೆ. ಆದರೆ ಇದರ ಮಧ್ಯೆ ನಿರ್ದೇಶಕ ಪ್ರೇಮ್ ‘ಕೆಡಿ’ ಸಿನಿಮಾವನ್ನು(KD movie) ಡಿಸೆಂಬರ್‌ನಲ್ಲಿ ರಿಲೀಸ್(Release) ಮಾಡುವುದಾಗಿ ಹೇಳಿದ್ದಾರೆ. ಆದರೆ ಇದೇ ಡಿಸೆಂಬರ್‌ನಲ್ಲಿ ದರ್ಶನ್(Darshan) ಸಿನಿಮಾ ‘ಡೆವಿಲ್’(Devil movie) ಕೂಡ ಬಿಡುಗಡೆಯಾಗುತ್ತಿದೆ. ಕೆಡಿ ರಿಲೀಸ್ ಬಗ್ಗೆ ಮಾತಾಡಿದ ನಟ ಹಾಗೂ ನಿರ್ದೇಶಕ ಪ್ರೇಮ್, ಯುದ್ಧಕ್ಕೆ ರೆಡಿ ಯಾರಾದ್ರು ಬನ್ನಿ. ಮೊದಲ ಇಂಡಿಯನ್ ಸಿನಿಮಾ ನಮ್ಮದು. ಆಗಸ್ಟ್ ತಿಂಗಳಲ್ಲಿ ಟೀಸರ್ ರಿಲೀಸ್ ಮಾಡ್ತೀನಿ. ಮುಂಬೈನಲ್ಲಿ ಟೀಸರ್ ಲಾಂಚ್ ಆಗಲಿದೆ. ಅದೇ ತಿಂಗಳು ಫಸ್ಟ್ ಸಿಂಗಲ್ ರಿಲೀಸ್ ಆಗಲಿದ್ದು, ಡಿಸೆಂಬರ್ ತಿಂಗಳಲ್ಲಿ KD ಪಿಚ್ಚರ್ ರಿಲೀಸ್ ಮಾಡ್ತೀವಿ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಯುದ್ಧಕ್ಕೆ ಯಾರು ಬರ್ತೀರೋ ಬನ್ನಿ ನಾವ್ ರೆಡಿ ಎಂದಿದ್ದಾರೆ. ಒಂದುಕಡೆ ಪ್ರೇಮ ಬರಹ ಸಿನಿಮಾದ ವಿತರಣೆಗೆ ಸಂಬಂಧಪಟ್ಟಂತೆ ದರ್ಶನ್ ಅರ್ಜುನ್ ಸರ್ಜಾ ನಡುವೆ ಹಣಕಾಸಿನ ವಿಚಾರಕ್ಕೆ ಮಾತುಕತೆ ನಡೆದು ಮನಸ್ತಾಪ ಉಂಟಾಗಿತ್ತು. ಇದೇ ಕಾರಣಕ್ಕೆ ಧ್ರುವ ಸರ್ಜಾ ಹಾಗೂ ದರ್ಶನ್ ನಡುವೆಯೂ ವಿವಾದ ಉಂಟಾಗಿ ಇಬ್ಬರು ನಟರ ಅಭಿಮಾನಿಗಳ ಫ್ಯಾನ್ ವಾರ್‌ಗೂ ಕಾರಣವಾಗಿತ್ತು. ಈಗ ಒಂದೇ ತಿಂಗಳಲ್ಲಿ ಇಬ್ಬರು ನಟರ ಚಿತ್ರಗಳು ರಿಲೀಸ್ ಆಗುತ್ತಿರೋದು ಗಾಂಧಿನಗರದ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. 

ಇದನ್ನೂ ವೀಕ್ಷಿಸಿ:  ‘ರೆಮಲ್’ ಅಬ್ಬರಕ್ಕೆ ಜನಜೀವನವೇ ಅಲ್ಲೋಲಕಲ್ಲೋಲ..ಬಂಗಾಳಕೊಲ್ಲಿಯಿಂದ ಬರುತ್ತಿರುವ ಚಂಡಿ ಮಾರುತ..!

04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
Read more