ಆ ಅರ್ಧ ಗಂಟೆ ಪಟ್ಟಣಗೆರೆ ಶೆಡ್‌ನಲ್ಲಿ ನಡೆದಿದ್ದೇನು ? ರೇಣುಕಾಸ್ವಾಮಿ ಮೇಲೆ ಮೊದಲು ಎರಗಿದ್ದೇ ನಟ ದರ್ಶನ್..!

ಆ ಅರ್ಧ ಗಂಟೆ ಪಟ್ಟಣಗೆರೆ ಶೆಡ್‌ನಲ್ಲಿ ನಡೆದಿದ್ದೇನು ? ರೇಣುಕಾಸ್ವಾಮಿ ಮೇಲೆ ಮೊದಲು ಎರಗಿದ್ದೇ ನಟ ದರ್ಶನ್..!

Published : Jun 29, 2024, 09:32 AM IST

ಕಿಲ್ಲಿಂಗ್ ಸ್ಟಾರ್ ನಟ ದರ್ಶನ್ ಈಗ ಪಶ್ಚಾತಾಪದಲ್ಲಿ ಬೆಂದು ಹೋಗಿದ್ದಾರೆ. ತನ್ನವರಿಗಾಗಿ ಮಿಡಿತಾ ಇದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿರೋ ದರ್ಶನ್ ರೇಣುಕಾಸ್ವಾಮಿ ಕೊಲೆ ವಿಷಯದಲ್ಲಿ ದುಡುಕಬಾರದಿತ್ತು ಅಂತ ಪದೇ ಪದೇ ಕಣ್ಣೀರಾಗುತ್ತಿದ್ದಾರಂತೆ.


ನಟ ದರ್ಶನ್ (Darshan) ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆಯಾದ (Renukaswamy murder case) ಆರೋಪದಲ್ಲಿ 17 ಜನ ಜೈಲು ಸೇರಿದ್ದಾರೆ. ಆದ್ರೆ ಈ ಕೊಲೆ ಹೇಗಾಯ್ತು ಪಟ್ಟಣಗೆರೆ ಶೆಡ್‌ನಲ್ಲಿ ಏನೆಲ್ಲಾ ಆಯ್ತು ಅನ್ನೋದು ಇಷ್ಟು ದಿನ ನಿಗೂಢವಾಗಿತ್ತು. ಈಗ ಈ ಕೊಲೆ (Murder) ಬಗ್ಗೆ ಒಂದೊಂದೇ ಸಂಗತಿಗಳು ಹೊರ ಬರುತ್ತಿವೆ. ಪಟ್ಟಣಗೆರೆ ಶೆಡ್‌ಗೆ ರೇಣುಕಾಸ್ವಾಮಿಯನ್ನ ಎತ್ತಾಕೊಂಡು ಹೋಗಿದ್ದ ಡಿ ಗ್ಯಾಂಗ್ ರೇಣುಕಾಸ್ವಾಮಿಗೆ ಹಿಗ್ಗಾಮುಗ್ಗ ತಳಿಸಿದ್ರು. ರೇಣುಕಾಸ್ವಾಮಿ ಪಟ್ಟಣಗೆರೆ ಶೆಡ್‌ಗೆ (Pattanagere Shed) ಬರುತ್ತಿದ್ದಂತೆ ಮೊದಲು ಎರಗಿದ್ದ ನಟ ದರ್ಶನ್ ಅಂತೆ. ದೈತ್ಯಾಕಾರದ ದರ್ಶನ್ ರೇಣುಕಾಸ್ವಾಮಿ ಮೀಲ ಮೀಲ ಅಂತ ಒದಾಡುವಂತೆ ಬಡಿದಿದ್ರಂತೆ. ಅರ್ಧ ಗಂಟೆಗಳ ಕಾಲ ನಿರಂತರವಾಗಿ ಹೊಡೆದಿದ್ರಂತೆ. ನಟ ದರ್ಶನ್ ನಿಂದಲೇ ಅತೀ ಹೆಚ್ಚಿನದಾಗಿ ಮಾರಣಾಂತಿಕ ಹಲ್ಲೆ ಆಗಿತ್ತಂತೆ. ಕಾಮಾಕ್ಷಿಪಾಳ್ಯ ಪೊಲೀಸ್ (Kamakshipalya Police) ತನಿಖೆ ವೇಳೆ ಈ ಭಯಾನಕ ಸತ್ಯ ಬಯಲಾಗಿದೆ. ಗೆಳತಿ ಪವಿತ್ರಾ ಗೌಡನ ಪಟ್ಟಣಗೆರೆ ಶೆಡ್ ಗೆ ಬರಲು ಹೇಳಿದ್ದ ದರ್ಶನ್ ಪವಿತ್ರಾಗೌಡನಿಂದ ರೇಣುಕಾಸ್ವಾಮಿಗೆ ಮೊದಲು ಚಪ್ಪಲಿಯಲ್ಲಿ ಹೊಡೆಸಿದ್ದ. ಬಳಿಕ ಪವಿತ್ರಾಗೌಡನ ಮನೆಗೆ ಕಳಿಸಿದ್ದ ನಟ ದರ್ಶನ್ ರೇಣುಕಾಸ್ವಾಮಿ ಮೇಲೆ ಕ್ರೂರಿಯಂತೆ ಎರಗಿ ಎದೆ ,ಕುತ್ತಿಗೆ ಮೇಲೆ ಕಾಲು ಇಟ್ಟು ವಿಡಿಯೋ ಮಾಡುವಂತೆ ಹೇಳಿದ್ನಂತೆ. ರೇಣುಕಾಸ್ವಾಮಿಯ ಮಾರ್ಮಾಂಗಕ್ಕೆ ಬಲವಾಗಿ ಒದಿದ್ದ ನಟ ದರ್ಶನ್ ಅರ್ಧ ಗಂಟೆಗಳ ಕಾಲ ರೇಣುಕಾಸ್ವಾಮಿ ಗೆ ನರಕ ತೋರಿಸಿದ್ನಂತೆ.

ಇದನ್ನೂ ವೀಕ್ಷಿಸಿ:  ಕೋಡಿ ಶ್ರೀ ಮತ್ತೊಂದು ಭಯಾನಕ ಭವಿಷ್ಯ: ಕೇಂದ್ರ ರಾಜಕಾರಣವನ್ನು ಕುರುಕ್ಷೇತ್ರಕ್ಕೆ ಹೋಲಿಸಿದ ಶ್ರೀಗಳು!

06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ