ದಾಸನ​ ಬೆನ್ನುನೋವು ಜೈಲು ಅಧಿಕಾರಿಗಳಿಗೆ ತಲೆನೋವು; ದರ್ಶನ್ ಇನ್ ಡೇಂಜರ್!

ದಾಸನ​ ಬೆನ್ನುನೋವು ಜೈಲು ಅಧಿಕಾರಿಗಳಿಗೆ ತಲೆನೋವು; ದರ್ಶನ್ ಇನ್ ಡೇಂಜರ್!

Published : Oct 25, 2024, 12:54 PM ISTUpdated : Oct 25, 2024, 12:56 PM IST

ಇದೀಗ MRI ಸ್ಕ್ಯಾನಿಂಗ್ ರಿಪೋರ್ಟ್ ಜೈಲು ಅಧಿಕಾರಿಗಳ ಕೈ ಸೇರಿದೆ. ವೈದ್ಯರು ಕೊಟ್ಟಿರೋ ರಿಪೋರ್ಟ್​​ನಲ್ಲಿ ಶಾಕಿಂಗ್ ಸಂಗತಿಗಳೇ ಇವೆ. L5, S1 ಭಾಗದಲ್ಲಿ ದರ್ಶನ್​ಗೆ ಊತ ಕಾಣಿಸಿಕೊಂಡಿದ್ದು, ನಿರ್ಲಕ್ಷ ಮಾಡದೇ ತಕ್ಷಣ ಶಸ್ತ್ರಚಿಕಿತ್ಸೆ ಪಡೆದುಕೊಳ್ಳಿ ಅಂತ ವೈದ್ಯರು..

ತೀವ್ರ ಬೆನ್ನು ನೋವಿನಿಂದ ಬಳಲ್ತಾ ಇರೋ ದರ್ಶನ್​ಗೆ ಮಂಗಳವಾರ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ MRI ಸ್ಕ್ಯಾನಿಂಗ್ ಮಾಡಲಾಗಿತ್ತು. ಇದೀಗ ಸ್ಕ್ಯಾನಿಂಗ್ ರಿಪೋರ್ಟ್ ಜೈಲು ಅಧಿಕಾರಿಗಳ ಕೈ ಸೇರಿದ್ದು, ದರ್ಶನ್ ಸ್ಥಿತಿ ಕ್ರಿಟಿಕಲ್ ಅನ್ನೋ ವರದಿ ಬಂದಿದೆ. ನಿರ್ಲಕ್ಷ ಮಾಡದೇ ಅತೀ ಶೀಘ್ರದಲ್ಲಿ ಸರ್ಜರಿ ಮಾಡಿಸೋಕೆ ಸೂಚನೆ ನೀಡಲಾಗಿದೆ. ವೈದ್ಯರ ರಿಪೋರ್ಟ್ ದರ್ಶನ್ ನಿದ್ದೆಗೆಡಿಸಿದೆ.

ಬೆನ್ನು ನೋವಿನಿಂದ ತೀವ್ರ ತೊಂದರೆಗೀಡಾಗಿರೋ ದರ್ಶನ್​ಗೆ ಕಳೆದ ಮಂಗಳವಾರ ವಿಮ್ಸ್ ಆಸ್ಪತ್ರೆಗೆ ಕರೆದೊಯ್ದು MRI ಸ್ಕ್ಯಾನಿಂಗ್ ಮಾಡಿಸಲಾಗಿತ್ತು. ವಿಮ್ಸ್ ಆಸ್ಪತ್ರೆಗೆ ಕರೆತಂದ ವೇಳೆ ಅಭಿಮಾನಿಗಳ ತಳ್ಳಾಟದಲ್ಲಿ ದರ್ಶನ್ ಪರದಾಡಿ ಹೋಗಿದ್ರು. ದರ್ಶನ್ ಮುಖದಲ್ಲಿ ನೋವಿನ ಗೆರೆಗಳು ಕಾಣ್ತಾ ಇದ್ವು. ನಡೆದಾಡೋದಕ್ಕೂ ಪರದಾಡ್ತಾ ಇರೋದು ಫ್ಯಾನ್ಸ್ ಕಣ್ಣಿಗೆ ಬಿದ್ದಿತ್ತು.

ಇದೀಗ MRI ಸ್ಕ್ಯಾನಿಂಗ್ ರಿಪೋರ್ಟ್ ಜೈಲು ಅಧಿಕಾರಿಗಳ ಕೈ ಸೇರಿದೆ. ವೈದ್ಯರು ಕೊಟ್ಟಿರೋ ರಿಪೋರ್ಟ್​​ನಲ್ಲಿ ಶಾಕಿಂಗ್ ಸಂಗತಿಗಳೇ ಇವೆ. L5, S1 ಭಾಗದಲ್ಲಿ ದರ್ಶನ್​ಗೆ ಊತ ಕಾಣಿಸಿಕೊಂಡಿದ್ದು, ಈ ಸಮಸ್ಯೆಗಳ ಬಗ್ಗೆ ಖುದ್ದು ವೈದ್ಯರು ಜೈಲಿಗೆ ಬಂದು ಮನವರಿಕೆ ಮಾಡಿಕೊಟ್ಟಿದ್ದಾರೆ. ನಿರ್ಲಕ್ಷ ಮಾಡದೇ ತತ್ ಕ್ಷಣ ಶಸ್ತ್ರಚಿಕಿತ್ಸೆ ಪಡೆದುಕೊಳ್ಳಿ ಅಂತ ಸೂಚನೆ ಕೊಟ್ಟಿದ್ದಾರೆ.

ಅಸಲಿಗೆ ದರ್ಶನ್​ಗೆ ಬೆನ್ನು ನೋವು ಕಾಣಿಸಿಕೊಂಡ ಬೆನ್ನಲ್ಲೇ ಜೈಲಾಧಿಕಾರಿಗಳು ಸರ್ಕಾರಿ ಆ್ಪಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುವಂತೆ ಸೂಚಿಸಿದ್ರು. ಆದ್ರೆ ದರ್ಶನ್ ತನಗೆ ಬೆಂಗಳೂರಿನ ಮಣಿಪಾಲ್​ನಲ್ಲೇ ಚಿಕಿತ್ಸೆ ಆಗಬೇಕು ಅಂತ ಪಟ್ಟು ಹಿಡಿದಿದ್ರು. ಬೆನ್ನು ನೋವಿನ ಕಾರಣ ಕೊಟ್ರೆ ಹೈಕೋರ್ಟ್ ಬೇಗ ಬೇಲ್ ಕೊಟ್ಟುಬಿಡುತ್ತೆ ಅನ್ನೋದು ದರ್ಶನ್ ನಂಬಿಕೆಯಾಗಿತ್ತು. ಆದ್ರೆ ಆ ನಂಬಿಕೆ ಹುಸಿಯಾಗಿದೆ. ಹೈಕೋರ್ಟ್​​ನಲ್ಲೂ ಬೇಲ್ ಮುಂದೂಡಿಕೆ ಆಗ್ತಾ ಇದೆ. ಬೆನ್ನು ನೋವು ಮಾತ್ರ ಹೆಚ್ಚಾಗ್ತಾ ಇದೆ.. ಮುಂದೇನು ದರ್ಶನ್ ಕಥೆ, ವಿಡಿಯೋ ನೋಡಿ..

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more